<p><strong>ಚೇಳೂರು:</strong> ‘ತಾಲ್ಲೂಕಿನಲ್ಲಿನ ಜಲ ಜೀವನ್ ಮೀಷನ್ ಕಾಮಗಾರಿ ಕಳೆಪೆಯಾಗಿರುವುದು ಗಮನಕ್ಕೆ ಬಂದಿದೆ. ಆಗಸ್ಟ್ 21ರಂದು ನಡೆಯುವ ಕೆಡಿಪಿ ಸಭೆಯಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆದೇಶಿಸಲಾಗುವುದು’ ಶಾಸಕ ಎಸ್.ಆರ್. ಶ್ರೀನಿವಾಸ್ ಭರವಸೆ ನೀಡಿದರು.</p>.<p>ಗ್ರಾಮದಲ್ಲಿ ಶನಿವಾರಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಹೆಚ್ಚುವರಿ ಕೊಠಡಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.</p>.<p>ಕೆಲವೆಡೆ ಜಲಜೀವನ್ ಯೋಜನೆ ಪೂರ್ಣಗೊಂಡಿಲ್ಲ. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಲು ಸೂಚಿಸುತ್ತೇನೆ. ಸರ್ಕಾರದಿಂದ ಶಾಲಾ ಕಾಲೇಜುಗಳಿಗೆ ಮೂಲ ಸೌಕರ್ಯಕ್ಕಾಗಿ ಸಾಕಷ್ಟು ಅನುದಾನ ಬಿಡುಗಡೆಯಾಗಿದ್ದು, ಎಲ್ಲ ಶಾಲಾ ಕಾಲೇಜುಗಳಿಗೆ ಗುಣಮಟ್ಟದ ಕಟ್ಟಡ ಮತ್ತು ಮೂಲ ಸೌಕರ್ಯಗಳನ್ನು ಪೂರೈಸುವ ಭರವಸೆ ನೀಡಿದರು.</p>.<p>ಬಹುತೇಕ ಕಡೆಗಳಲ್ಲಿ ರಸ್ತೆಯಲ್ಲಿ ಗುಂಡಿ ನಿರ್ಮಾಣವಾಗಿದ್ದು ಇದರ ಪೂರ್ವಭಾವಿಯಾಗಿ ಶಿರಾ ನಲ್ಲಿಗೆರೆ ರಸ್ತೆಗೆ ₹30 ಕೋಟಿ, ಹೊಸಕೆರೆ, ಚೇಳೂರು ರಸ್ತೆ ₹5 ಕೋಟಿ ಹಾಗೂ ಎಂಎಂಎ ಕಾವಲ್ ರಸ್ತೆಗೆ ₹10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣಕ್ಕಾಗಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.</p>.<p>ಬಿದರೆಹಳ್ಳ ಕಾವಲ್ನಲ್ಲಿ ನಿರ್ಮಾಣವಾಗುತ್ತಿರುವ ಎಚ್ಎಎಲ್ ಘಟಕಕ್ಕೆ ಪದೇ ಪದೇ ರೈತರ ಜಮೀನು ಬಿಟ್ಟುಕೊಡುವುದಿಲ್ಲ. ಈ ಭಾಗದ ರೈತರು ಸಾಕಷ್ಟು ಜಮೀನು ಬಿಟ್ಟುಕೊಟ್ಟಿದ್ದಾರೆ. ಪಿತ್ರಾರ್ಜಿತ ಅಸ್ತಿಯನ್ನು ಯಾವುದೇ ಕಾರಣಕ್ಕೂ ಕೊಡುವುದಿಲ್ಲ ಎಂದು ಶಾಸಕರು ತಿಳಿಸಿದ್ದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಮ್ಮ, ಉಪಾಧ್ಯಕ್ಷ ಧನಂಜಯ, ಸದಸ್ಯರಾದ ಪದ್ಮ, ಎಂಜಿನಿಯರ್ ಗೋಪಿನಾಥ್, ಗುತ್ತಿಗೆದಾರ ಪಿ.ಆರ್. ನವೀನ್ ಕುಮಾರ್, ಗ್ರಾಮಸ್ಥರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೇಳೂರು:</strong> ‘ತಾಲ್ಲೂಕಿನಲ್ಲಿನ ಜಲ ಜೀವನ್ ಮೀಷನ್ ಕಾಮಗಾರಿ ಕಳೆಪೆಯಾಗಿರುವುದು ಗಮನಕ್ಕೆ ಬಂದಿದೆ. ಆಗಸ್ಟ್ 21ರಂದು ನಡೆಯುವ ಕೆಡಿಪಿ ಸಭೆಯಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆದೇಶಿಸಲಾಗುವುದು’ ಶಾಸಕ ಎಸ್.ಆರ್. ಶ್ರೀನಿವಾಸ್ ಭರವಸೆ ನೀಡಿದರು.</p>.<p>ಗ್ರಾಮದಲ್ಲಿ ಶನಿವಾರಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಹೆಚ್ಚುವರಿ ಕೊಠಡಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.</p>.<p>ಕೆಲವೆಡೆ ಜಲಜೀವನ್ ಯೋಜನೆ ಪೂರ್ಣಗೊಂಡಿಲ್ಲ. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಲು ಸೂಚಿಸುತ್ತೇನೆ. ಸರ್ಕಾರದಿಂದ ಶಾಲಾ ಕಾಲೇಜುಗಳಿಗೆ ಮೂಲ ಸೌಕರ್ಯಕ್ಕಾಗಿ ಸಾಕಷ್ಟು ಅನುದಾನ ಬಿಡುಗಡೆಯಾಗಿದ್ದು, ಎಲ್ಲ ಶಾಲಾ ಕಾಲೇಜುಗಳಿಗೆ ಗುಣಮಟ್ಟದ ಕಟ್ಟಡ ಮತ್ತು ಮೂಲ ಸೌಕರ್ಯಗಳನ್ನು ಪೂರೈಸುವ ಭರವಸೆ ನೀಡಿದರು.</p>.<p>ಬಹುತೇಕ ಕಡೆಗಳಲ್ಲಿ ರಸ್ತೆಯಲ್ಲಿ ಗುಂಡಿ ನಿರ್ಮಾಣವಾಗಿದ್ದು ಇದರ ಪೂರ್ವಭಾವಿಯಾಗಿ ಶಿರಾ ನಲ್ಲಿಗೆರೆ ರಸ್ತೆಗೆ ₹30 ಕೋಟಿ, ಹೊಸಕೆರೆ, ಚೇಳೂರು ರಸ್ತೆ ₹5 ಕೋಟಿ ಹಾಗೂ ಎಂಎಂಎ ಕಾವಲ್ ರಸ್ತೆಗೆ ₹10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣಕ್ಕಾಗಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.</p>.<p>ಬಿದರೆಹಳ್ಳ ಕಾವಲ್ನಲ್ಲಿ ನಿರ್ಮಾಣವಾಗುತ್ತಿರುವ ಎಚ್ಎಎಲ್ ಘಟಕಕ್ಕೆ ಪದೇ ಪದೇ ರೈತರ ಜಮೀನು ಬಿಟ್ಟುಕೊಡುವುದಿಲ್ಲ. ಈ ಭಾಗದ ರೈತರು ಸಾಕಷ್ಟು ಜಮೀನು ಬಿಟ್ಟುಕೊಟ್ಟಿದ್ದಾರೆ. ಪಿತ್ರಾರ್ಜಿತ ಅಸ್ತಿಯನ್ನು ಯಾವುದೇ ಕಾರಣಕ್ಕೂ ಕೊಡುವುದಿಲ್ಲ ಎಂದು ಶಾಸಕರು ತಿಳಿಸಿದ್ದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಮ್ಮ, ಉಪಾಧ್ಯಕ್ಷ ಧನಂಜಯ, ಸದಸ್ಯರಾದ ಪದ್ಮ, ಎಂಜಿನಿಯರ್ ಗೋಪಿನಾಥ್, ಗುತ್ತಿಗೆದಾರ ಪಿ.ಆರ್. ನವೀನ್ ಕುಮಾರ್, ಗ್ರಾಮಸ್ಥರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>