ದೊಡ್ಡಯಲ್ಕೂರು ಗ್ರಾಮದಲ್ಲಿ ಜೆಜೆಎಂ ಕಾಮಗಾರಿಗೆ ಅಗೆದಿರುವುದನ್ನು ರಸ್ತೆಯನ್ನು ಸರಿಯಾಗಿ ಮುಚ್ಚಿಲ್ಲ
ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿಲ್ಲ ಹಾಗೂ ಅಗೆದ ರಸ್ತೆಗಳನ್ನು ಮುಚ್ಚುವ ಸಾಮಾನ್ಯ ಪ್ರಜ್ಞೆಯೂ ಇಲ್ಲದಂತಾಗಿದೆ. ವೃದ್ಧರು ಮತ್ತು ಮಕ್ಕಳು ರಸ್ತೆಯಲ್ಲಿ ಓಡಾಡಲು ತೊಂದರೆಯಾಗುತ್ತಿದೆ.
ಹನುಮಂತರಾಯಪ್ಪ ನಿವೃತ್ತ ಶಿಕ್ಷಕ
ಗ್ರಾಮದ ಕೆಲವೆಡೆ ಚರಂಡಿಗಳಲ್ಲಿ ಕುಡಿಯುವ ನೀರಿನ ಪೈಪ್ಗಳನ್ನು ಅಳವಡಿಸಿದ್ದಾರೆ. ಇದರಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಕಾಮಗಾರಿ ಮಂದಗತಿಯಲ್ಲಿ ನಡೆಯುತ್ತಿದೆ. ಅಗೆದ ರಸ್ತೆಗಳನ್ನು ಮುಚ್ಚದೆ ಸಾಕಷ್ಟು ತೊಂದರೆಯಾಗುತ್ತಿದೆ.
- ಬಿದರಪ್ಪ ಚಿನ್ನೇನಹಳ್ಳಿ ಗ್ರಾ.ಪಂ. ಅಧ್ಯಕ್ಷ
ಜೆಜೆಎಂ ಕಾಮಗಾರಿಗಾಗಿ ಅಗೆದಿರುವ ರಸ್ತೆಗಳನ್ನು ಸರಿಪಡಿಸುವಂತೆ ಈಗಾಗಲೇ ಗುತ್ತಿಗೆದಾರರಿಗೆ ತಿಳಿಸಲಾಗಿದೆ. ಶೀಘ್ರ ಹಾಗೂ ಗುಣಮಟ್ಟದ ಕಾಮಗಾರಿ ನಡೆಸಬೇಕು. ಕಳಪೆ ಕಾಮಗಾರಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
ಲೋಕೇಶ್ ಎಇಇ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ