ಉದ್ಯೋಗಾಕಾಂಕ್ಷಿಗಳಿಗೆ ಜ.23 ರಿಂದ 29ರ ಒಳಗೆ ಕೌಶಲ ಹೆಚ್ಚಿಸುವ ಸಂದರ್ಶನಗಳನ್ನು ಎದುರಿಸುವ ಬಗ್ಗೆ ಕಾರ್ಯಾಗಾರ ಏರ್ಪಡಿಸಬೇಕು. ಕಾರ್ಯಾಗಾರದಲ್ಲಿ ಐಟಿಐ, ಡಿಪ್ಲೊಮಾ, ಎಂಜಿನಿಯರಿಂಗ್, ಪದವಿ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಲು ಅನುವಾಗುವಂತೆ ಆಯಾ ಕಾಲೇಜು ಪ್ರಾಂಶುಪಾಲರನ್ನು ತಾಲ್ಲೂಕು ಮಟ್ಟದ ಸಭೆಗೆ ಆಹ್ವಾನಿಸಬೇಕು ಎಂದು ಹೇಳಿದರು.