<p><strong>ತುಮಕೂರು:</strong> ಸುದ್ದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೆ ನಗರದ ಸತ್ಯಮಂಗಲ ಕೈಗಾರಿಕಾ ಪ್ರದೇಶದ ಬೇಳೂರು ಬಾಯ್ಲರ್ ಕಾರ್ಖಾನೆ ಸಿಬ್ಬಂದಿ ಮಂಗಳವಾರ ಹಲ್ಲೆ ನಡೆಸಿದ್ದಾರೆ.</p>.<p>ರಾಜ್ ನ್ಯೂಸ್ ವರದಿಗಾರ ಮಹೇಶ್, ಛಾಯಾಗ್ರಹಕ ದೇವರಾಜ್ ಮತ್ತು ಸಮಯ ವಾಹಿನಿ ಛಾಯಾಗ್ರಹಕ ಚಂದನ್ ಹಲ್ಲೆಗೆ ಒಳಗಾದವರು.</p>.<p>ಜೂ.8ರಂದು ‘ಬೇಳೂರು ಬಾಯ್ಲರ್ ಬಯೋಟೆಕ್’ ಔಷಧಿ ತಯಾರಿಕಾ ಘಟಕದ ಬಾಯ್ಲರ್ ಸ್ಫೋಟವಾಗಿ ಒಬ್ಬರು ಗಾಯಗೊಂಡಿದ್ದರು. ಈ ಅವಘಡಕ್ಕೆ ಸಂಬಂಧಿಸಿದಂತೆ ಸಮಗ್ರ ವರದಿ ಮಾಡಲು ಇವರು ತೆರಳಿದ್ದರು.</p>.<p>ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.</p>.<p>ಹಲ್ಲೆಗೆ ಸಂಬಂಧಿಸಿದಂತೆ ಈಗಾಗಲೇ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ ಎಂದರು.</p>.<p>ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಹಾಗೂ ವಂಶಿಕೃಷ್ಣ ಅವರಿಗೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಯಿತು. ಕಾರ್ಖಾನೆ ಸುತ್ತಲಿನ 50ಕ್ಕೂ ಹೆಚ್ಚು ಜನರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಸುದ್ದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೆ ನಗರದ ಸತ್ಯಮಂಗಲ ಕೈಗಾರಿಕಾ ಪ್ರದೇಶದ ಬೇಳೂರು ಬಾಯ್ಲರ್ ಕಾರ್ಖಾನೆ ಸಿಬ್ಬಂದಿ ಮಂಗಳವಾರ ಹಲ್ಲೆ ನಡೆಸಿದ್ದಾರೆ.</p>.<p>ರಾಜ್ ನ್ಯೂಸ್ ವರದಿಗಾರ ಮಹೇಶ್, ಛಾಯಾಗ್ರಹಕ ದೇವರಾಜ್ ಮತ್ತು ಸಮಯ ವಾಹಿನಿ ಛಾಯಾಗ್ರಹಕ ಚಂದನ್ ಹಲ್ಲೆಗೆ ಒಳಗಾದವರು.</p>.<p>ಜೂ.8ರಂದು ‘ಬೇಳೂರು ಬಾಯ್ಲರ್ ಬಯೋಟೆಕ್’ ಔಷಧಿ ತಯಾರಿಕಾ ಘಟಕದ ಬಾಯ್ಲರ್ ಸ್ಫೋಟವಾಗಿ ಒಬ್ಬರು ಗಾಯಗೊಂಡಿದ್ದರು. ಈ ಅವಘಡಕ್ಕೆ ಸಂಬಂಧಿಸಿದಂತೆ ಸಮಗ್ರ ವರದಿ ಮಾಡಲು ಇವರು ತೆರಳಿದ್ದರು.</p>.<p>ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.</p>.<p>ಹಲ್ಲೆಗೆ ಸಂಬಂಧಿಸಿದಂತೆ ಈಗಾಗಲೇ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ ಎಂದರು.</p>.<p>ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಹಾಗೂ ವಂಶಿಕೃಷ್ಣ ಅವರಿಗೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಯಿತು. ಕಾರ್ಖಾನೆ ಸುತ್ತಲಿನ 50ಕ್ಕೂ ಹೆಚ್ಚು ಜನರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>