ಪೊಲೀಸರು ಮಂಜುನಾಥ ಸ್ವಾಮೀಜಿ, ಕೆ.ಅಭಿಲಾಷ್ ಅರನ್ನು ಮಾರ್ಚ್ 7ರಂದು ಮಧ್ಯರಾತ್ರಿ ಬಂಧಿಸಿ, 8ರಂದು ಪೋಕ್ಸೊ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು. ನ್ಯಾಯಾಲಯವು ಇಬ್ಬರು ಆರೋಪಿಗಳನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿತ್ತು. ನಂತರ ಕಸ್ಟಡಿಯ ಅವಧಿಯನ್ನು ಮತ್ತೆರಡು ದಿನ ವಿಸ್ತರಿಸಲಾಗಿತ್ತು. ಗುರುವಾರ ನ್ಯಾಯಾಲಯವು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.