<p><strong>ತುಮಕೂರು</strong>: ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಜಿಲ್ಲಾ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ನಗರದಲ್ಲಿ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ ‘ಕದಂಬ ಕನ್ನಡಿಗ’ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಶಾಸಕರಾದ ಬಿ.ಸುರೇಶ್ಗೌಡ, ಜಿ.ಬಿ.ಜ್ಯೋತಿಗಣೇಶ್ ಧ್ವಜಾರೋಹಣ ನೆರವೇರಿಸಿ, ಭುವನೇಶ್ವರಿ ಮೂರ್ತಿಗೆ ಪುಷ್ಪ ನಮನ ಸಲ್ಲಿಸಿದರು. ಮುಖಂಡರಾದ ತನುಜ್ಕುಮಾರ್, ಮಂಜುನಾಥ್, ಟಿ.ವಿ.ಮನೋಜ್ಕುಮಾರ್, ಟಿ.ಇ.ರಘುರಾಮ್, ಬಾಳಾರಾಧ್ಯ, ಯಾಸ್ಮೀನ್ ತಾಜ್, ಗಿರೀಶ್, ವಿಷ್ಣುವರ್ಧನ್, ರಾಧಮ್ಮ, ಗಾಯತ್ರಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.</p>.<p>ಒಕ್ಕೂಟದ ಗೌರವಾಧ್ಯಕ್ಷ ಎಚ್.ಎನ್.ದೀಪಕ್ ಮಾತನಾಡಿ, ‘ಜಿಲ್ಲಾ ಆಡಳಿತ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನದ ವೇಳೆ ಪ್ರಮಾಣ ಪತ್ರದ ಬದಲು, ರಾಜ್ಯೋತ್ಸವ ಸಮಾರಂಭದಲ್ಲಿ ಗೌರವಿಸಲಾಯಿತು ಎನ್ನುವ ಪತ್ರ ನೀಡಿರುವುದು ಸರಿಯಲ್ಲ. ಅಧಿಕೃತವಾಗಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಬೇಕು’ ಎಂದು ಒತ್ತಾಯಿಸಿದರು.</p>.<p>ಒಕ್ಕೂಟದ ಅಧ್ಯಕ್ಷ ಎಸ್.ಶಂಕರ್, ಕೆಎಸ್ಆರ್ಪಿಯ ಅಜುಂ ಹುಸೇನ್, ಮುಖಂಡರಾದ ಎಸ್.ಪಿ.ಚಿದಾನಂದ್, ರಂಜನ್, ರಂಗಸ್ವಾಮಿ, ಚಕ್ರವರ್ತಿ ಪ್ರಕಾಶ್, ಅರುಣ್ ಕೃಷ್ಣಯ್ಯ, ಅರುಣ್ಕುಮಾರ್, ಅನಿಲ್ ನಾಯಕ್, ಉಪ್ಪಾರಹಳ್ಳಿ ಕುಮಾರ್, ಟಿ.ಆರ್.ಸದಾಶಿವಯ್ಯ, ಲಕ್ಷ್ಮಿನಾರಾಯಣ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಜಿಲ್ಲಾ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ನಗರದಲ್ಲಿ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ ‘ಕದಂಬ ಕನ್ನಡಿಗ’ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಶಾಸಕರಾದ ಬಿ.ಸುರೇಶ್ಗೌಡ, ಜಿ.ಬಿ.ಜ್ಯೋತಿಗಣೇಶ್ ಧ್ವಜಾರೋಹಣ ನೆರವೇರಿಸಿ, ಭುವನೇಶ್ವರಿ ಮೂರ್ತಿಗೆ ಪುಷ್ಪ ನಮನ ಸಲ್ಲಿಸಿದರು. ಮುಖಂಡರಾದ ತನುಜ್ಕುಮಾರ್, ಮಂಜುನಾಥ್, ಟಿ.ವಿ.ಮನೋಜ್ಕುಮಾರ್, ಟಿ.ಇ.ರಘುರಾಮ್, ಬಾಳಾರಾಧ್ಯ, ಯಾಸ್ಮೀನ್ ತಾಜ್, ಗಿರೀಶ್, ವಿಷ್ಣುವರ್ಧನ್, ರಾಧಮ್ಮ, ಗಾಯತ್ರಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.</p>.<p>ಒಕ್ಕೂಟದ ಗೌರವಾಧ್ಯಕ್ಷ ಎಚ್.ಎನ್.ದೀಪಕ್ ಮಾತನಾಡಿ, ‘ಜಿಲ್ಲಾ ಆಡಳಿತ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನದ ವೇಳೆ ಪ್ರಮಾಣ ಪತ್ರದ ಬದಲು, ರಾಜ್ಯೋತ್ಸವ ಸಮಾರಂಭದಲ್ಲಿ ಗೌರವಿಸಲಾಯಿತು ಎನ್ನುವ ಪತ್ರ ನೀಡಿರುವುದು ಸರಿಯಲ್ಲ. ಅಧಿಕೃತವಾಗಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಬೇಕು’ ಎಂದು ಒತ್ತಾಯಿಸಿದರು.</p>.<p>ಒಕ್ಕೂಟದ ಅಧ್ಯಕ್ಷ ಎಸ್.ಶಂಕರ್, ಕೆಎಸ್ಆರ್ಪಿಯ ಅಜುಂ ಹುಸೇನ್, ಮುಖಂಡರಾದ ಎಸ್.ಪಿ.ಚಿದಾನಂದ್, ರಂಜನ್, ರಂಗಸ್ವಾಮಿ, ಚಕ್ರವರ್ತಿ ಪ್ರಕಾಶ್, ಅರುಣ್ ಕೃಷ್ಣಯ್ಯ, ಅರುಣ್ಕುಮಾರ್, ಅನಿಲ್ ನಾಯಕ್, ಉಪ್ಪಾರಹಳ್ಳಿ ಕುಮಾರ್, ಟಿ.ಆರ್.ಸದಾಶಿವಯ್ಯ, ಲಕ್ಷ್ಮಿನಾರಾಯಣ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>