<p><strong>ಗುಬ್ಬಿ:</strong> ಶೀಘ್ರದಲ್ಲಿಯೇ ಪ್ರಾರಂಭವಾಗುವ ಜಾತಿ ಗಣತಿಯಲ್ಲಿ ಕಾಡುಗೊಲ್ಲ ಸಮುದಾಯದವರು ‘ಕಾಡುಗೊಲ್ಲ’ ಎಂದು ನಮೂದಿಸಬೇಕು ಎಂದು ಹೆಗ್ಗುಂದ ಮಠದ ಬಸವ ರಮಾನಂದ ಸ್ವಾಮೀಜಿ ತಿಳಿಸಿದರು.</p>.<p>ಪಟ್ಟಣದಲ್ಲಿ ಶನಿವಾರ ಜಾತಿಗಣತಿ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಕಾಡುಗೊಲ್ಲ ಸಮುದಾಯ ತನ್ನ ವಿಶಿಷ್ಟ ಆಚರಣೆಗಳಿಂದಾಗಿ ಪರಿಶಿಷ್ಟ ಪಂಗಡಕ್ಕೆ ಸೇರುವ ಎಲ್ಲ ಲಕ್ಷಣಗಳನ್ನು ಒಳಗೊಂಡಿದೆ. ಕಾಡುಗೊಲ್ಲರು ಅಲೆಮಾರಿಗಳಾಗಿ ಪಶುಪಾಲನೆ, ಮೇಕೆ, ಕುರಿ ಸಾಕಾಣಿಕೆಯನ್ನೇ ಕಾಯಕವನ್ನಾಗಿಸಿಕೊಂಡಿದ್ದಾರೆ.</p>.<p>ಕಾಡುಗೊಲ್ಲ ಸಮುದಾಯಕ್ಕೆ ಪುರಾತನ ಇತಿಹಾಸವಿದ್ದು, ಒಗ್ಗಟ್ಟಿನ ಕೊರತೆಯಿಂದಾಗಿ ಸಮುದಾಯಕ್ಕೆ ಸಿಗಬೇಕಾಗಿರುವ ಮೀಸಲಾತಿ ಇಲ್ಲವಾಗುತ್ತಿದೆ. ಪರಿಸ್ಥಿತಿ ಅರಿತು ವೈಯಕ್ತಿಕ ಪ್ರತಿಷ್ಠೆ ಬದಿಗಿಟ್ಟು ಸಮುದಾಯದ ಹಿತದೃಷ್ಟಿಯಿಂದ ಒಗ್ಗೂಡಬೇಕಿದೆ. ಈಗ ಮೈಮರೆತಲ್ಲಿ ಮುಂದೆ ಸವಲತ್ತುಗಳನ್ನು ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ ಎನ್ನುವುದನ್ನು ಸಮುದಾಯದವರು ಅರಿತು ಕೊಳ್ಳಬೇಕು ಎಂದು ತಿಳಿಸಿದರು.</p>.<p>ಮುಖಂಡ ಬಿ.ದೊಡ್ಡಯ್ಯ ಮಾತನಾಡಿ, ಕಾಡುಗೊಲ್ಲ ಸಮುದಾಯವು ಸಾಮಾಜಿಕ ತುಳಿತಕ್ಕೆ ಒಳಗಾಗಿದ್ದು ಬುಡಕಟ್ಟು ಸಮುದಾಯದ ಲಕ್ಷಣಗಳನ್ನು ಹೊಂದಿರುವುದರಿಂದ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕಿದೆ. ಸಮುದಾಯದವರಲ್ಲಿ ಅರಿವು ಮೂಡಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದ್ದು ಎಲ್ಲರೂ ಕಡ್ಡಾಯವಾಗಿ ಕಾಡುಗೊಲ್ಲ ಎಂದೇ ನಮೂದಿಸುವಂತೆ ತಿಳಿಸಿದರು.</p>.<p>ದೊಡ್ಡೇಗೌಡ ಮಾತನಾಡಿ, ಕಾಡುಗೊಲ್ಲರ ಅಸ್ತಿತ್ವದ ಬಗ್ಗೆ ಧ್ವನಿಯಾದ ರಾಜ್ಯ ಕಾಡುಗೊಲ್ಲರ ಸಂಘವು ಈಗ ಗಣತಿಯ ಜಾಗೃತಿಗೆ ಮುಂದಾಗಿದೆ ಎಂದರು.</p>.<p>ಕಂಬೇರಹಟ್ಟಿ ನಾಗರಾಜು, ಜಿ.ಪಂ. ಮಾಜಿ ಸದಸ್ಯೆ ಯಶೋಧಮ್ಮ, ಶಿವಣ್ಣ, ನಾಗರಾಜು, ಈಶ್ವರಪ್ಪ, ಬಸವರಾಜು, ಬಾಲರಾಜು, ಬಸವರಾಜು, ರವೀಶ್, ನಾಗರಾಜು, ಅಯ್ಯಣ್ಣ, ಮಂಜುನಾಥ್, ನಿಂಗರಾಜು, ಮಹಾಲಿಂಗಯ್ಯ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ:</strong> ಶೀಘ್ರದಲ್ಲಿಯೇ ಪ್ರಾರಂಭವಾಗುವ ಜಾತಿ ಗಣತಿಯಲ್ಲಿ ಕಾಡುಗೊಲ್ಲ ಸಮುದಾಯದವರು ‘ಕಾಡುಗೊಲ್ಲ’ ಎಂದು ನಮೂದಿಸಬೇಕು ಎಂದು ಹೆಗ್ಗುಂದ ಮಠದ ಬಸವ ರಮಾನಂದ ಸ್ವಾಮೀಜಿ ತಿಳಿಸಿದರು.</p>.<p>ಪಟ್ಟಣದಲ್ಲಿ ಶನಿವಾರ ಜಾತಿಗಣತಿ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಕಾಡುಗೊಲ್ಲ ಸಮುದಾಯ ತನ್ನ ವಿಶಿಷ್ಟ ಆಚರಣೆಗಳಿಂದಾಗಿ ಪರಿಶಿಷ್ಟ ಪಂಗಡಕ್ಕೆ ಸೇರುವ ಎಲ್ಲ ಲಕ್ಷಣಗಳನ್ನು ಒಳಗೊಂಡಿದೆ. ಕಾಡುಗೊಲ್ಲರು ಅಲೆಮಾರಿಗಳಾಗಿ ಪಶುಪಾಲನೆ, ಮೇಕೆ, ಕುರಿ ಸಾಕಾಣಿಕೆಯನ್ನೇ ಕಾಯಕವನ್ನಾಗಿಸಿಕೊಂಡಿದ್ದಾರೆ.</p>.<p>ಕಾಡುಗೊಲ್ಲ ಸಮುದಾಯಕ್ಕೆ ಪುರಾತನ ಇತಿಹಾಸವಿದ್ದು, ಒಗ್ಗಟ್ಟಿನ ಕೊರತೆಯಿಂದಾಗಿ ಸಮುದಾಯಕ್ಕೆ ಸಿಗಬೇಕಾಗಿರುವ ಮೀಸಲಾತಿ ಇಲ್ಲವಾಗುತ್ತಿದೆ. ಪರಿಸ್ಥಿತಿ ಅರಿತು ವೈಯಕ್ತಿಕ ಪ್ರತಿಷ್ಠೆ ಬದಿಗಿಟ್ಟು ಸಮುದಾಯದ ಹಿತದೃಷ್ಟಿಯಿಂದ ಒಗ್ಗೂಡಬೇಕಿದೆ. ಈಗ ಮೈಮರೆತಲ್ಲಿ ಮುಂದೆ ಸವಲತ್ತುಗಳನ್ನು ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ ಎನ್ನುವುದನ್ನು ಸಮುದಾಯದವರು ಅರಿತು ಕೊಳ್ಳಬೇಕು ಎಂದು ತಿಳಿಸಿದರು.</p>.<p>ಮುಖಂಡ ಬಿ.ದೊಡ್ಡಯ್ಯ ಮಾತನಾಡಿ, ಕಾಡುಗೊಲ್ಲ ಸಮುದಾಯವು ಸಾಮಾಜಿಕ ತುಳಿತಕ್ಕೆ ಒಳಗಾಗಿದ್ದು ಬುಡಕಟ್ಟು ಸಮುದಾಯದ ಲಕ್ಷಣಗಳನ್ನು ಹೊಂದಿರುವುದರಿಂದ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕಿದೆ. ಸಮುದಾಯದವರಲ್ಲಿ ಅರಿವು ಮೂಡಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದ್ದು ಎಲ್ಲರೂ ಕಡ್ಡಾಯವಾಗಿ ಕಾಡುಗೊಲ್ಲ ಎಂದೇ ನಮೂದಿಸುವಂತೆ ತಿಳಿಸಿದರು.</p>.<p>ದೊಡ್ಡೇಗೌಡ ಮಾತನಾಡಿ, ಕಾಡುಗೊಲ್ಲರ ಅಸ್ತಿತ್ವದ ಬಗ್ಗೆ ಧ್ವನಿಯಾದ ರಾಜ್ಯ ಕಾಡುಗೊಲ್ಲರ ಸಂಘವು ಈಗ ಗಣತಿಯ ಜಾಗೃತಿಗೆ ಮುಂದಾಗಿದೆ ಎಂದರು.</p>.<p>ಕಂಬೇರಹಟ್ಟಿ ನಾಗರಾಜು, ಜಿ.ಪಂ. ಮಾಜಿ ಸದಸ್ಯೆ ಯಶೋಧಮ್ಮ, ಶಿವಣ್ಣ, ನಾಗರಾಜು, ಈಶ್ವರಪ್ಪ, ಬಸವರಾಜು, ಬಾಲರಾಜು, ಬಸವರಾಜು, ರವೀಶ್, ನಾಗರಾಜು, ಅಯ್ಯಣ್ಣ, ಮಂಜುನಾಥ್, ನಿಂಗರಾಜು, ಮಹಾಲಿಂಗಯ್ಯ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>