<p><strong>ತುಮಕೂರು:</strong> ಕನಕದಾಸರು ದಾಸ ಸಾಹಿತ್ಯಕ್ಕೆ ವೈಶಿಷ್ಟಪೂರ್ಣವಾದ ಕೊಡುಗೆ ನೀಡಿದ್ದಾರೆ. ಕೀರ್ತನಕಾರರಾಗಿ, ತತ್ವಜ್ಞಾನಿಯಾಗಿ, ಸಂತರಾಗಿ, ದಾರ್ಶನಿಕರಾಗಿ ನಾಡಿನ ಸಾಂಸ್ಕೃತಿಕ ಪರಂಪರೆ ಮೆರೆದಿದ್ದಾರೆ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ.ಆಂಜಿನಪ್ಪ ಅಭಿಪ್ರಾಯಪಟ್ಟರು.</p>.<p>ಜೆಡಿಎಸ್ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ‘ವರ್ಣಾಶ್ರಮದ ವಿರುದ್ಧ, ಭಕ್ತಿ ಮಾರ್ಗದ ಮೂಲಕ ಧ್ವನಿ ಎತ್ತಿದರು. ಸಮಾನ ಸಮಾಜಕ್ಕಾಗಿ ಸಾಹಿತ್ಯದ ಮೂಲಕವೇ ಹೋರಾಡಿದ ದಾಸಶ್ರೇಷ್ಠರು. ಕನ್ನಡ ಸಾಹಿತ್ಯ, ಸಂಗೀತ ವಲಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದರು.</p>.<p>ಜೆಡಿಎಸ್ ನಗರ ಘಟಕದ ಅಧ್ಯಕ್ಷ ಬೆಳ್ಳಿ ಲೋಕೇಶ್, ‘ಸಮಸಮಾಜ ನಿರ್ಮಾಣಕ್ಕೆ ಕೀರ್ತನೆಗಳ ಮೂಲಕವೇ ಕನಕದಾಸರು ಅರಿವು ಮೂಡಿಸಿದರು’ ಎಂದರು.</p>.<p>ಮಹಾನಗರಪಾಲಿಕೆ ಉಪಮೇಯರ್ ಶಶಿಕಲಾ ಗಂಗಹನುಮಯ್ಯ, ಪಾಲಿಕೆ ಸದಸ್ಯ ಎಚ್.ಡಿ.ಕೆ.ಮಂಜುನಾಥ್, ಜೆಡಿಎಸ್ ಮುಖಂಡರಾದ ಗಂಗಣ್ಣ, ಆರ್.ದೇವರಾಜು, ಕೃಷ್ಣಮೂರ್ತಿ, ತಾಹೆರಾ ಕುಲ್ಸುಮ್, ಪ್ರಸನ್ನ, ಜಯಶ್ರೀ, ಎಂ.ಎನ್.ಚಲುವರಾಜು, ಗೊಲ್ಲಹಳ್ಳಿ ಬಾಲಕೃಷ್ಣ, ಬೈರೇಶ್ ದಿಬ್ಬೂರು, ಮಧು, ಆಶಾ ವಿಜಿಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಕನಕದಾಸರು ದಾಸ ಸಾಹಿತ್ಯಕ್ಕೆ ವೈಶಿಷ್ಟಪೂರ್ಣವಾದ ಕೊಡುಗೆ ನೀಡಿದ್ದಾರೆ. ಕೀರ್ತನಕಾರರಾಗಿ, ತತ್ವಜ್ಞಾನಿಯಾಗಿ, ಸಂತರಾಗಿ, ದಾರ್ಶನಿಕರಾಗಿ ನಾಡಿನ ಸಾಂಸ್ಕೃತಿಕ ಪರಂಪರೆ ಮೆರೆದಿದ್ದಾರೆ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ.ಆಂಜಿನಪ್ಪ ಅಭಿಪ್ರಾಯಪಟ್ಟರು.</p>.<p>ಜೆಡಿಎಸ್ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ‘ವರ್ಣಾಶ್ರಮದ ವಿರುದ್ಧ, ಭಕ್ತಿ ಮಾರ್ಗದ ಮೂಲಕ ಧ್ವನಿ ಎತ್ತಿದರು. ಸಮಾನ ಸಮಾಜಕ್ಕಾಗಿ ಸಾಹಿತ್ಯದ ಮೂಲಕವೇ ಹೋರಾಡಿದ ದಾಸಶ್ರೇಷ್ಠರು. ಕನ್ನಡ ಸಾಹಿತ್ಯ, ಸಂಗೀತ ವಲಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದರು.</p>.<p>ಜೆಡಿಎಸ್ ನಗರ ಘಟಕದ ಅಧ್ಯಕ್ಷ ಬೆಳ್ಳಿ ಲೋಕೇಶ್, ‘ಸಮಸಮಾಜ ನಿರ್ಮಾಣಕ್ಕೆ ಕೀರ್ತನೆಗಳ ಮೂಲಕವೇ ಕನಕದಾಸರು ಅರಿವು ಮೂಡಿಸಿದರು’ ಎಂದರು.</p>.<p>ಮಹಾನಗರಪಾಲಿಕೆ ಉಪಮೇಯರ್ ಶಶಿಕಲಾ ಗಂಗಹನುಮಯ್ಯ, ಪಾಲಿಕೆ ಸದಸ್ಯ ಎಚ್.ಡಿ.ಕೆ.ಮಂಜುನಾಥ್, ಜೆಡಿಎಸ್ ಮುಖಂಡರಾದ ಗಂಗಣ್ಣ, ಆರ್.ದೇವರಾಜು, ಕೃಷ್ಣಮೂರ್ತಿ, ತಾಹೆರಾ ಕುಲ್ಸುಮ್, ಪ್ರಸನ್ನ, ಜಯಶ್ರೀ, ಎಂ.ಎನ್.ಚಲುವರಾಜು, ಗೊಲ್ಲಹಳ್ಳಿ ಬಾಲಕೃಷ್ಣ, ಬೈರೇಶ್ ದಿಬ್ಬೂರು, ಮಧು, ಆಶಾ ವಿಜಿಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>