ತುಮಕೂರು: ಕನಕದಾಸರು ದಾಸ ಸಾಹಿತ್ಯಕ್ಕೆ ವೈಶಿಷ್ಟಪೂರ್ಣವಾದ ಕೊಡುಗೆ ನೀಡಿದ್ದಾರೆ. ಕೀರ್ತನಕಾರರಾಗಿ, ತತ್ವಜ್ಞಾನಿಯಾಗಿ, ಸಂತರಾಗಿ, ದಾರ್ಶನಿಕರಾಗಿ ನಾಡಿನ ಸಾಂಸ್ಕೃತಿಕ ಪರಂಪರೆ ಮೆರೆದಿದ್ದಾರೆ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ.ಆಂಜಿನಪ್ಪ ಅಭಿಪ್ರಾಯಪಟ್ಟರು.
ಜೆಡಿಎಸ್ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ‘ವರ್ಣಾಶ್ರಮದ ವಿರುದ್ಧ, ಭಕ್ತಿ ಮಾರ್ಗದ ಮೂಲಕ ಧ್ವನಿ ಎತ್ತಿದರು. ಸಮಾನ ಸಮಾಜಕ್ಕಾಗಿ ಸಾಹಿತ್ಯದ ಮೂಲಕವೇ ಹೋರಾಡಿದ ದಾಸಶ್ರೇಷ್ಠರು. ಕನ್ನಡ ಸಾಹಿತ್ಯ, ಸಂಗೀತ ವಲಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದರು.
ಜೆಡಿಎಸ್ ನಗರ ಘಟಕದ ಅಧ್ಯಕ್ಷ ಬೆಳ್ಳಿ ಲೋಕೇಶ್, ‘ಸಮಸಮಾಜ ನಿರ್ಮಾಣಕ್ಕೆ ಕೀರ್ತನೆಗಳ ಮೂಲಕವೇ ಕನಕದಾಸರು ಅರಿವು ಮೂಡಿಸಿದರು’ ಎಂದರು.