<p><strong>ತುಮಕೂರು</strong>: ಕನಕಪುರ– ದಾಬಸ್ಪೇಟೆ– ಬೆಂಗಳೂರು ರಿಂಗ್ ರಸ್ತೆ (ಬಿಆರ್ಆರ್) ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಒತ್ತಾಯಿಸಿದ್ದಾರೆ.</p>.<p>ನಗರದ ಸಿದ್ಧಗಂಗಾ ಮಠಕ್ಕೆ ಶನಿವಾರ ಕೇಂದ್ರ ಜಲ ಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭೇಟಿ ನೀಡಿದರು. ಈ ವೇಳೆ ರೈತರ ಸಮ್ಮುಖದಲ್ಲಿ ಭೂ ಸ್ವಾಧೀನ ಕೈಬಿಡುವಂತೆ ಒತ್ತಾಯಿಸಿ ಸಚಿವರಿಗೆ ಸ್ವಾಮೀಜಿ ಪತ್ರ ಸಲ್ಲಿಸಿದರು.</p>.<p>‘ಭಾರತ ಮಾಲಾ ಯೋಜನೆಯಡಿ 2019ರಲ್ಲಿ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಕನಕಪುರ- ರಾಮನಗರ- ಮಾಗಡಿ- ಶಿವಗಂಗೆ ಮಾರ್ಗವಾಗಿ ದಾಬಸ್ಪೇಟೆ ಸೇರುವ ಬೆಂಗಳೂರು ರಿಂಗ್ ರಸ್ತೆಗೆ ಭೂ ಸ್ವಾಧೀನ ಮಾಡಿಕೊಳ್ಳ ಲಾಗಿದೆ. ಭೂಮಿ ಕಳೆದುಕೊಂಡ ರೈತರಿಗೆ ಇದುವರೆಗೆ ಪರಿಹಾರ ನೀಡಿಲ್ಲ’ <br />ಎಂದರು.</p>.<p>‘ತಾತ್ಕಾಲಿಕವಾಗಿ ಯೋಜನೆ ನಿಲ್ಲಿಸಿದ್ದು, ಪರಿಹಾರ ಕೊಡಲು ಸಾಧ್ಯವಿಲ್ಲ’ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ರೈತರಿಗೆ ಭೂಮಿಯೂ ಇಲ್ಲ, ಪರಿಹಾರವೂ ಸಿಗದಂತಾಗಿದೆ. ಸೂಕ್ತ ಪರಿಹಾರ ವಿತರಿಸಬೇಕು, ಇಲ್ಲವೇ ಭೂಮಿ ವಾಪಸ್ ನೀಡಲಿ’ ಎಂದು ಒತ್ತಾಯಿಸಿದರು.</p>.<p>ಶಿವಗಂಗೆ ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ‘ಭೂ ಸ್ವಾಧೀನದ ಹಣ ಬರಲಿದೆ ಎಂದು ರೈತರು ಸಾಲ ಮಾಡಿ ಮನೆ ನಿರ್ಮಿಸಿ, ಮದುವೆ ಮಾಡಿದ್ದಾರೆ. ಇದೀಗ ಸಾಲಕ್ಕೆ ಬಡ್ಡಿ ಕಟ್ಟಲು ಪರದಾಡುತ್ತಿದ್ದಾರೆ. ಸ್ವಾಧೀನ ಕೈ ಬಿಡುವಂತೆ ಕೇಂದ್ರಕ್ಕೆ ಮನವರಿಕೆ ಮಾಡಿಕೊಡಬೇಕು’ ಎಂದು ಹೇಳಿದರು.</p>.<p>ಸಚಿವ ವಿ.ಸೋಮಣ್ಣ, ‘ಮಧ್ಯವರ್ತಿಗಳು ಕೆಲವೇ ಲಕ್ಷ ನೀಡಿ ರೈತರ ಭೂಮಿ ಖರೀದಿಸುತ್ತಿದ್ದಾರೆ. ಹೆದ್ದಾರಿ ಕಾಮಗಾರಿ ಪರ ಮಾತನಾಡಿದರೆ ದಲ್ಲಾಳಿ ಪರ ಮಾತಾಡಿದಂತೆ. ಆದರೂ ಕೇಂದ್ರ ಹೆದ್ದಾರಿ, ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಜತೆ ಈ ಯೋಜನೆಯ ಬಗ್ಗೆ ಚರ್ಚಿಸಿ, ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>ವಕೀಲ ಸಿ.ಕೆ.ಮಹೇಂದ್ರ, ರೈತ ಮುಖಂಡರಾದ ಉಮೇಶ್ ಕಂಬಾಳು, ಕರಿಮಣ್ಣೆಯ ದೇವಕುಮಾರ್, ದಾಬಸ್ಪೇಟೆ ಗಟ್ಟಿಬೈರಪ್ಪ, ರಮೇಶ್, ಗುರುಪ್ರಸಾದ್, ಶಿವಗಂಗೆಯ ಸುರೇಶ್, ಬೆಳಗುಂಬ ನಾಗೇಂದ್ರಕುಮಾರ್, ಪ್ರಕಾಶ್ ರಂಗೇನಹಳ್ಳಿ, ಗುಡೇಮಾರನಹಳ್ಳಿ ಶಿವರುದ್ರಪ್ಪ, ಮಾಗಡಿ ಬೋರಯ್ಯ, ಬೀರಗೊಂಡನಹಳ್ಳಿ ನಾರಾಯಣಗೌಡ, ಬಿಡದಿಯ ಶ್ರೀಧರ್, ರಾಮನಗರ ಹೇಮಂತಕುಮಾರ್ ಮೊದಲಾದವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಕನಕಪುರ– ದಾಬಸ್ಪೇಟೆ– ಬೆಂಗಳೂರು ರಿಂಗ್ ರಸ್ತೆ (ಬಿಆರ್ಆರ್) ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಒತ್ತಾಯಿಸಿದ್ದಾರೆ.</p>.<p>ನಗರದ ಸಿದ್ಧಗಂಗಾ ಮಠಕ್ಕೆ ಶನಿವಾರ ಕೇಂದ್ರ ಜಲ ಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭೇಟಿ ನೀಡಿದರು. ಈ ವೇಳೆ ರೈತರ ಸಮ್ಮುಖದಲ್ಲಿ ಭೂ ಸ್ವಾಧೀನ ಕೈಬಿಡುವಂತೆ ಒತ್ತಾಯಿಸಿ ಸಚಿವರಿಗೆ ಸ್ವಾಮೀಜಿ ಪತ್ರ ಸಲ್ಲಿಸಿದರು.</p>.<p>‘ಭಾರತ ಮಾಲಾ ಯೋಜನೆಯಡಿ 2019ರಲ್ಲಿ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಕನಕಪುರ- ರಾಮನಗರ- ಮಾಗಡಿ- ಶಿವಗಂಗೆ ಮಾರ್ಗವಾಗಿ ದಾಬಸ್ಪೇಟೆ ಸೇರುವ ಬೆಂಗಳೂರು ರಿಂಗ್ ರಸ್ತೆಗೆ ಭೂ ಸ್ವಾಧೀನ ಮಾಡಿಕೊಳ್ಳ ಲಾಗಿದೆ. ಭೂಮಿ ಕಳೆದುಕೊಂಡ ರೈತರಿಗೆ ಇದುವರೆಗೆ ಪರಿಹಾರ ನೀಡಿಲ್ಲ’ <br />ಎಂದರು.</p>.<p>‘ತಾತ್ಕಾಲಿಕವಾಗಿ ಯೋಜನೆ ನಿಲ್ಲಿಸಿದ್ದು, ಪರಿಹಾರ ಕೊಡಲು ಸಾಧ್ಯವಿಲ್ಲ’ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ರೈತರಿಗೆ ಭೂಮಿಯೂ ಇಲ್ಲ, ಪರಿಹಾರವೂ ಸಿಗದಂತಾಗಿದೆ. ಸೂಕ್ತ ಪರಿಹಾರ ವಿತರಿಸಬೇಕು, ಇಲ್ಲವೇ ಭೂಮಿ ವಾಪಸ್ ನೀಡಲಿ’ ಎಂದು ಒತ್ತಾಯಿಸಿದರು.</p>.<p>ಶಿವಗಂಗೆ ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ‘ಭೂ ಸ್ವಾಧೀನದ ಹಣ ಬರಲಿದೆ ಎಂದು ರೈತರು ಸಾಲ ಮಾಡಿ ಮನೆ ನಿರ್ಮಿಸಿ, ಮದುವೆ ಮಾಡಿದ್ದಾರೆ. ಇದೀಗ ಸಾಲಕ್ಕೆ ಬಡ್ಡಿ ಕಟ್ಟಲು ಪರದಾಡುತ್ತಿದ್ದಾರೆ. ಸ್ವಾಧೀನ ಕೈ ಬಿಡುವಂತೆ ಕೇಂದ್ರಕ್ಕೆ ಮನವರಿಕೆ ಮಾಡಿಕೊಡಬೇಕು’ ಎಂದು ಹೇಳಿದರು.</p>.<p>ಸಚಿವ ವಿ.ಸೋಮಣ್ಣ, ‘ಮಧ್ಯವರ್ತಿಗಳು ಕೆಲವೇ ಲಕ್ಷ ನೀಡಿ ರೈತರ ಭೂಮಿ ಖರೀದಿಸುತ್ತಿದ್ದಾರೆ. ಹೆದ್ದಾರಿ ಕಾಮಗಾರಿ ಪರ ಮಾತನಾಡಿದರೆ ದಲ್ಲಾಳಿ ಪರ ಮಾತಾಡಿದಂತೆ. ಆದರೂ ಕೇಂದ್ರ ಹೆದ್ದಾರಿ, ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಜತೆ ಈ ಯೋಜನೆಯ ಬಗ್ಗೆ ಚರ್ಚಿಸಿ, ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>ವಕೀಲ ಸಿ.ಕೆ.ಮಹೇಂದ್ರ, ರೈತ ಮುಖಂಡರಾದ ಉಮೇಶ್ ಕಂಬಾಳು, ಕರಿಮಣ್ಣೆಯ ದೇವಕುಮಾರ್, ದಾಬಸ್ಪೇಟೆ ಗಟ್ಟಿಬೈರಪ್ಪ, ರಮೇಶ್, ಗುರುಪ್ರಸಾದ್, ಶಿವಗಂಗೆಯ ಸುರೇಶ್, ಬೆಳಗುಂಬ ನಾಗೇಂದ್ರಕುಮಾರ್, ಪ್ರಕಾಶ್ ರಂಗೇನಹಳ್ಳಿ, ಗುಡೇಮಾರನಹಳ್ಳಿ ಶಿವರುದ್ರಪ್ಪ, ಮಾಗಡಿ ಬೋರಯ್ಯ, ಬೀರಗೊಂಡನಹಳ್ಳಿ ನಾರಾಯಣಗೌಡ, ಬಿಡದಿಯ ಶ್ರೀಧರ್, ರಾಮನಗರ ಹೇಮಂತಕುಮಾರ್ ಮೊದಲಾದವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>