ಮಾಗೋಡು ಕಂಬದ ರಂಗನಾಥ ದೇವರಿಗೆ ಹೂವೇ ಪ್ರಿಯವಾದ ವಸ್ತುವಾಗಿದೆ. ಹೂವಿನ ಹಾರವನ್ನು ತೇರಿಗೆ ಹಾಕುವುದು ವಾಡಿಕೆ ಮಾತ್ರವಲ್ಲ, ಭಕ್ತರು ತಮ್ಮ ಇಷ್ಟಾರ್ಥಗಳ ಈಡೇರಿಕೆಗೆ ಹರಕೆಯ ರೂಪದಲ್ಲಿ ಹೂವನ್ನು ಅರ್ಪಿಸುವುದು ಸಂಪ್ರದಾಯ. ತಮ್ಮ ಇಷ್ಟಾರ್ಥ ಪ್ರಾಪ್ತಿಯಾಗಿ ಹರಕೆಗಳು ಫಲಿಸಿದಾಗ ತಮ್ಮ ತೂಕದ ಹೂವಿನ ತುಲಾಭಾರ ನೀಡುವುದು ಹಿಂದಿನಿಂದ ನಡೆದುಕೊಂಡು ಬಂದಿರುವ ವಾಡಿಕೆ.