<p><strong>ತುಮಕೂರು</strong>: ಈ ಹಿಂದಿನಿಂದಲೂ ಸಾಹಿತ್ಯಾತ್ಮಕ ಕಲಾತ್ಮಕವಾಗಿ ಕನ್ನಡ ನಾಡು ಶ್ರೀಮಂತವಾದುದು.</p>.<p>ಪಂಪ, ರನ್ನ, ಕುಮಾರ ವ್ಯಾಸ ಹೀಗೆ ಹಲವು ಕವಿಗಳು, ಸಾಹಿತಿಗಳು ಭಾಷೆಯ ಬೆಳವಣಿಗೆಗೆ ಅಡಿಪಾಯ ಹಾಕಿದರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.</p>.<p>ನಗರದ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು</p>.<p>ಮಾತೃಭಾಷೆಯನ್ನು ನಾವು ಹೆಚ್ಚು ಹೆಚ್ಚು ಬಳಸಬೇಕು. ಇದರಿಂದ ಕನ್ನಡವನ್ನು ಬೆಳೆಸಬಹುದು. ಮಾತೃಭಾಷೆಯಿಂದ ಮಕ್ಕಳಲ್ಲಿ ಆತ್ಮವಿಶ್ವಾಸ, ತಿಳಿವಳಿಕೆ ಹೆಚ್ಚುತ್ತದೆ. ಆದ್ದರಿಂದ ಪೋಷಕರು ತಮ್ಮ ಮಕ್ಕಳಿಗೆ ಮಾತೃಭಾಷೆ ಕಲಿಸಲು ಒತ್ತು ನೀಡಬೇಕು ಎಂದರು.</p>.<p>ಕನ್ನಡ ನಾಡಿನ ಏಕೀಕರಣಕ್ಕೆ ಹಲವರು ದುಡಿದರು. ಅವರನ್ನು ಸ್ಮರಿಸಬೇಕು. ಜೈನಧರ್ಮ, ವೀರಶೈವ ಧರ್ಮ ಕನ್ನಡ ಸಾಹಿತ್ಯಕ್ಕೆ ದೊಡ್ಡ ಕೊಡುಗೆ ನೀಡಿದೆ ಎಂದರು.</p>.<p>ತುಮಕೂರು ಜಿಲ್ಲೆಯಲ್ಲಿ ನರಸಿಂಹರಾಜು, ಗುಬ್ಬಿ ವೀರಣ್ಣ ಹೀಗೆ ರಾಜ್ಯದ ರಂಗಕಲೆಯ ಬೇರು ತುಮಕೂರು ಜಿಲ್ಲೆಯಲ್ಲಿ ಇದೆ. ಇದು ನಮ್ಮ ಹೆಮ್ಮೆ.</p>.<p>ಶಿವಕುಮಾರ ಸ್ವಾಮೀಜಿ ಅವರು ತುಮಕೂರು ಜಿಲ್ಲೆಗೆ ತಮ್ಮದೇ ಆದ ಛಾಪು ನೀಡಿದ್ದಾರೆ. ಇಂದು ಅನ್ನ ಮತ್ತು ಅಕ್ಷರಕ್ಕೆ ನಾವು ಹಾಹಾಕಾರ ಪಡಬೇಕಾದ ಸ್ಥಿತಿ ಇಲ್ಲ ಎಂದು ಹೇಳಿದರು.</p>.<p>ಹೇಮಾವತಿ ಜತೆಗೆ ಜಿಲ್ಲೆಯಲ್ಲಿ ಎತ್ತಿನಹೊಳೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆ ಜಿಲ್ಲೆಯಲ್ಲಿ ಜಾರಿ ಆಗಿದೆ. ಇನ್ನು ಎರಡು ವರ್ಷಗಳಲ್ಲಿ ಇಡೀ ಜಿಲ್ಲೆ ಹಸಿರು ನಾಡಾಗುತ್ತದೆ ಎಂದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಈ ಹಿಂದಿನಿಂದಲೂ ಸಾಹಿತ್ಯಾತ್ಮಕ ಕಲಾತ್ಮಕವಾಗಿ ಕನ್ನಡ ನಾಡು ಶ್ರೀಮಂತವಾದುದು.</p>.<p>ಪಂಪ, ರನ್ನ, ಕುಮಾರ ವ್ಯಾಸ ಹೀಗೆ ಹಲವು ಕವಿಗಳು, ಸಾಹಿತಿಗಳು ಭಾಷೆಯ ಬೆಳವಣಿಗೆಗೆ ಅಡಿಪಾಯ ಹಾಕಿದರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.</p>.<p>ನಗರದ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು</p>.<p>ಮಾತೃಭಾಷೆಯನ್ನು ನಾವು ಹೆಚ್ಚು ಹೆಚ್ಚು ಬಳಸಬೇಕು. ಇದರಿಂದ ಕನ್ನಡವನ್ನು ಬೆಳೆಸಬಹುದು. ಮಾತೃಭಾಷೆಯಿಂದ ಮಕ್ಕಳಲ್ಲಿ ಆತ್ಮವಿಶ್ವಾಸ, ತಿಳಿವಳಿಕೆ ಹೆಚ್ಚುತ್ತದೆ. ಆದ್ದರಿಂದ ಪೋಷಕರು ತಮ್ಮ ಮಕ್ಕಳಿಗೆ ಮಾತೃಭಾಷೆ ಕಲಿಸಲು ಒತ್ತು ನೀಡಬೇಕು ಎಂದರು.</p>.<p>ಕನ್ನಡ ನಾಡಿನ ಏಕೀಕರಣಕ್ಕೆ ಹಲವರು ದುಡಿದರು. ಅವರನ್ನು ಸ್ಮರಿಸಬೇಕು. ಜೈನಧರ್ಮ, ವೀರಶೈವ ಧರ್ಮ ಕನ್ನಡ ಸಾಹಿತ್ಯಕ್ಕೆ ದೊಡ್ಡ ಕೊಡುಗೆ ನೀಡಿದೆ ಎಂದರು.</p>.<p>ತುಮಕೂರು ಜಿಲ್ಲೆಯಲ್ಲಿ ನರಸಿಂಹರಾಜು, ಗುಬ್ಬಿ ವೀರಣ್ಣ ಹೀಗೆ ರಾಜ್ಯದ ರಂಗಕಲೆಯ ಬೇರು ತುಮಕೂರು ಜಿಲ್ಲೆಯಲ್ಲಿ ಇದೆ. ಇದು ನಮ್ಮ ಹೆಮ್ಮೆ.</p>.<p>ಶಿವಕುಮಾರ ಸ್ವಾಮೀಜಿ ಅವರು ತುಮಕೂರು ಜಿಲ್ಲೆಗೆ ತಮ್ಮದೇ ಆದ ಛಾಪು ನೀಡಿದ್ದಾರೆ. ಇಂದು ಅನ್ನ ಮತ್ತು ಅಕ್ಷರಕ್ಕೆ ನಾವು ಹಾಹಾಕಾರ ಪಡಬೇಕಾದ ಸ್ಥಿತಿ ಇಲ್ಲ ಎಂದು ಹೇಳಿದರು.</p>.<p>ಹೇಮಾವತಿ ಜತೆಗೆ ಜಿಲ್ಲೆಯಲ್ಲಿ ಎತ್ತಿನಹೊಳೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆ ಜಿಲ್ಲೆಯಲ್ಲಿ ಜಾರಿ ಆಗಿದೆ. ಇನ್ನು ಎರಡು ವರ್ಷಗಳಲ್ಲಿ ಇಡೀ ಜಿಲ್ಲೆ ಹಸಿರು ನಾಡಾಗುತ್ತದೆ ಎಂದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>