ಜಿಲ್ಲೆಯವರೇ ಆದ ಲೇಖಕ ಎಚ್.ಎಸ್.ಶಿವಪ್ರಕಾಶ್ ಅವರನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಈಗಾಗಲೇ ಆಯ್ಕೆ ಮಾಡಲಾಗಿದೆ. ಎರಡು ದಿನಗಳ ಕಾಲ ನಡೆಯುವ ಸಮ್ಮೇಳನದ ಪ್ರತಿನಿಧಿಗಳಾಗಿ ಭಾಗವಹಿಸುವ ಸರ್ಕಾರಿ ಇಲಾಖೆಗಳ ನೌಕರರು, ಶಿಕ್ಷಕರು, ಅನುದಾನಿತ, ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು, ಇತರೆ ಸಿಬ್ಬಂದಿ ವರ್ಗಕ್ಕೆ ‘ಅನ್ಯಕಾರ್ಯ ನಿಮಿತ್ತ’ ರಜೆಯನ್ನು ಜಿಲ್ಲಾ ಆಡಳಿತ ಮಂಜೂರು ಮಾಡಿದೆ ಎಂದು ಹೇಳಿದ್ದಾರೆ.