<p><strong>ತುಮಕೂರು:</strong> ಪ್ರಸ್ತುತ ಸಾಲಿಗೆ ಮಂಡನೆಯಾಗಿರುವ ರಾಜ್ಯ ಬಜೆಟ್ನಲ್ಲಿ ಜಿಲ್ಲೆಗೆ ಸಿಕ್ಕಿರುವ ಕೊಡುಗೆ ಅತ್ಯಲ್ಪ. ಬಿಡುಗಾಸು ಕೊಡಲಾಗಿದೆ ಎಂಬ ಆಕ್ಷೇಪ, ಅಸಮಾಧಾನ ವ್ಯಕ್ತವಾಗಿದೆ.</p>.<p>ಬೆಂಗಳೂರು ನಗರಕ್ಕೆ ಪರ್ಯಾಯವಾಗಿ ತುಮಕೂರು ನಗರ ಅಭಿವೃದ್ಧಿ ಕಾಣುತ್ತಿದ್ದರೂ ಅದಕ್ಕೆ ಅನುಗುಣವಾಗಿ ಅನುದಾನದ ನೆರವು ನೀಡಿಲ್ಲ. ಹೊಸ ಯೋಜನೆಗಳನ್ನೂ ಕೊಟ್ಟಿಲ್ಲ. ಅಲ್ಪಸ್ವಲ್ಪ ಕಾರ್ಯಕ್ರಮ ಪ್ರಕಟಿಸಿರುವುದನ್ನು ಹೊರತುಪಡಿಸಿದರೆ ಜಿಲ್ಲೆಗೆ ಏನೇನೂ ಸಿಕ್ಕಿಲ್ಲ ಎಂಬ ಮಾತುಗಳು ಕೇಳಿ ಬಂದಿವೆ.</p>.<p>‘ಗ್ರೇಟರ್ ತುಮಕೂರು’ ನಿರ್ಮಾಣದ ಕನಸಿಗೆ ಎಳ್ಳು ನೀರು ಬಿಡಲಾಗಿದೆ. ಈ ಬಗ್ಗೆ ಸಚಿವ ಜಿ.ಪರಮೇಶ್ವರ ಸದಾ ಪ್ರಸ್ತಾಪಿಸುತ್ತಲೇ ಬಂದಿದ್ದರು. ಆದರೆ ಅವರ ‘ಒಂಟಿ ಧ್ವನಿ’ಗೆ ಸಿದ್ದರಾಮಯ್ಯ ಅವರ ಕಡೆಯಿಂದ ಸ್ಪಂದನೆ ಸಿಕ್ಕಿಲ್ಲ.</p>.<p>ಪ್ರಮುಖವಾಗಿ ಐ.ಟಿ ಪಾರ್ಕ್ ನಿರ್ಮಾಣದ ಪ್ರಸ್ತಾಪವೇ ಇಲ್ಲವಾಗಿದೆ. ಬೆಂಗಳೂರಿನ ನಂತರ ಎರಡನೇ ಹಂತದ ನಗರವಾದ ತುಮಕೂರಿನಲ್ಲಿ ₹100 ಕೋಟಿ ವೆಚ್ಚದಲ್ಲಿ ಐ.ಟಿ ಪಾರ್ಕ್ ನಿರ್ಮಾಣ ಮಾಡಲು ಉದ್ದೇಶಿಸಿದ್ದು, ಅದಕ್ಕಾಗಿ ಪ್ರಸ್ತಾವ ಸಲ್ಲಿಸಲಾಗಿದೆ. ಈ ಬಾರಿಯ ಬಜೆಟ್ನಲ್ಲಿ ಜಿಲ್ಲೆಯ ಅಭಿವೃದ್ಧಿಗೆ ₹500 ಕೋಟಿವರೆಗೂ ನೆರವು ಸಿಗಲಿದೆ ಎಂಬ ವಿಶ್ವಾಸವನ್ನು ಪರಮೇಶ್ವರ ವ್ಯಕ್ತಪಡಿಸಿದ್ದರು. ಆದರೆ ಅಂತಹ ಆಶಾಗೋಪುರ ಕಳಚಿ ಬಿದ್ದಿದೆ.</p>.<p>ನಗರದಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಹಾಕಿ ಕ್ರೀಡಾಂಗಣ, ಈಜುಕೊಳ ನಿರ್ಮಾಣಕ್ಕೆ ₹6 ಕೋಟಿ ಅನುದಾನ ನೀಡುವುದಾಗಿ ನಗರದಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದರು. ಆದರೆ ಈಗ ಕೊಟ್ಟಿರುವುದು ₹3 ಕೋಟಿ ಮಾತ್ರ. ಭರವಸೆ ನೀಡಿದಷ್ಟು ಅನುದಾನ ಮೀಸಲಿಟ್ಟಿಲ್ಲ.</p>.<p><strong>ಮೆಟ್ರೊ:</strong> ನಮ್ಮ ಮೆಟ್ರೊ ಸಂಚಾರವನ್ನು ತುಮಕೂರು ವರೆಗೆ ವಿಸ್ತರಿಸುವ ಬಗ್ಗೆ ಪ್ರಸ್ತಾಪವೇ ಇಲ್ಲವಾಗಿದೆ. ಈ ಯೋಜನೆಗೆ ಡಿಪಿಆರ್ ಸಿದ್ಧವಾಗಿದ್ದು, ಮುಂದಿನ ಬಜೆಟ್ನಲ್ಲಿ ಅನುದಾನ ಮೀಸಲಿಡಬಹುದು ಎಂದು ನಿರೀಕ್ಷಿಸಲಾಗಿತ್ತು. ಈಗ ಅದಕ್ಕೂ ಮುಖ್ಯಮಂತ್ರಿ ಸ್ಪಂದಿಸಿಲ್ಲ.</p>.<p>ತುಮಕೂರು ನಗರ ವೇಗವಾಗಿ ಪ್ರಗತಿ ಕಾಣುತ್ತಿದ್ದು, ಮಹಾನಗರ ಪಾಲಿಕೆ ವ್ಯಾಪ್ತಿಗೆ 14 ಗ್ರಾಮ ಪಂಚಾಯಿತಿಗಳ 54 ಹಳ್ಳಿಗಳನ್ನು ಸೇರ್ಪಡೆ ಮಾಡಿಕೊಂಡು ಪಾಲಿಕೆ ವಿಸ್ತರಿಸಲು ಯೋಜನೆ ರೂಪಿಸಲಾಗಿದೆ. ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನ ಸಿಗುವ ನಿರೀಕ್ಷೆ ಹುಸಿಯಾಗಿದೆ.</p>.<p>ಜಿಲ್ಲೆಯಲ್ಲಿ ತೆಂಗು ಪಾರ್ಕ್, ಹುಣಸೆ ಹಾಗೂ ಹಲಸು ಅಭಿವೃದ್ಧಿ ಪಾರ್ಕ್, ಹುಣಸೆ ಹಣ್ಣು ಸಂಸ್ಕರಣೆ, ಮೌಲ್ಯವರ್ಧನೆಗೆ ನೆರವಾಗಲು ಶೀತಲೀಕರಣ ಘಟಕ ನಿರ್ಮಾಣದಂತಹ ಮಹತ್ವದ ಕೃಷಿ ಬೇಡಿಕೆಗಳಿಗೂ ಬಜೆಟ್ನಲ್ಲಿ ಒತ್ತು ಸಿಕ್ಕಿಲ್ಲ.</p>.<p>ನಗರದ ಹೊರ ವಲಯದಲ್ಲಿ ಕಬ್ಬನ್ಪಾರ್ಕ್, ಲಾಲ್ಬಾಗ್ ಮಾದರಿಯಲ್ಲಿ ಉದ್ಯಾನವನ ನಿರ್ಮಾಣ. ಹೂವಿನ ಮಾರುಕಟ್ಟೆ, ಶೀತಲೀಕರಣ ಘಟಕ, ಸೇಬು ಸೇರಿದಂತೆ ವಿವಿಧ ಹಣ್ಣು, ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ ಘಟಕ. ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆ ನಿರ್ವಹಣೆ. ಉದ್ಯಮ, ಉದ್ಯೋಗ, ವಸತಿ ದೃಷ್ಟಿಯಿಂದ ನಗರದ ಅಭಿವೃದ್ಧಿಗೆ ಅನುದಾನ ನೀಡುವಂತೆ ಜಿಲ್ಲಾ ಆಡಳಿತ ಬೇಡಿಕೆ ಪಟ್ಟಿ ಸಲ್ಲಿಸಿತ್ತು. ಈ ಯಾವ ಬೇಡಿಕೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ ಎಂಬ ಕೋಪ ಜಿಲ್ಲೆಯ ಜನರಲ್ಲಿ ಮೂಡಿದೆ.</p>.<blockquote>ಜಿಲ್ಲೆಗೆ ರಾಜ್ಯ ಬಜೆಟ್ನಲ್ಲಿ ಸಿಕ್ಕಿರುವ ಪ್ರಮುಖ ಯೋಜನೆ </blockquote>.<p>l ತುಮಕೂರಿನ ಗುಬ್ಬಿ ವೀರಣ್ಣ ಕಲಾಕ್ಷೇತ್ರದ ನವೀಕರಣಕ್ಕೆ ₹3 ಕೋಟಿ ಅನುದಾನ.</p><p>l ಕೊರಟಗೆರೆ ತಾಲ್ಲೂಕು ವಡೆಯರಪುರ ಬಳಿ 1.7 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಸಮತೋಲನ ಜಲಾಶಯ ನಿರ್ಮಾಣ.</p><p>l ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ₹3 ಕೋಟಿ ಅನುದಾನ.</p><p>l ತುಮಕೂರಿನಲ್ಲಿ ₹ 5 ಕೋಟಿ ವೆಚ್ಚದಲ್ಲಿ ಸೀಜಿಂಗ್ ಯಾರ್ಡ್ ನಿರ್ಮಾಣ.</p><p>l ತುಮಕೂರಿನಲ್ಲಿ ₹6 ಕೋಟಿಯಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥ ನಿರ್ಮಾಣ.</p><p>l ಕುಣಿಗಲ್, ತಿಪಟೂರು, ಮಧುಗಿರಿ, ಶಿರಾದಲ್ಲಿ ಶ್ರಮಿಕ ವಸತಿ ಶಾಲೆ ಆರಂಭ.</p><p>l ಚಿಕ್ಕನಾಯಕನಹಳ್ಳಿ ಕುಡಿಯುವ ನೀರಿನ ಯೋಜನೆ. ದೇವಸ್ಥಾನ ಹತ್ತಿರ ಚೆಕ್ ಡ್ಯಾಂ ನಿರ್ಮಾಣ.</p><p>l ಗುಬ್ಬಿ, ಶಿರಾ ತಾಲ್ಲೂಕಿನ 42 ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆ.</p><p>l ಗೂಳೂರು- ಹೆಬ್ಬೂರು ಕುಡಿಯುವ ನೀರಿನ ಯೋಜನೆ.</p><p>l ಶಿರಾ ತಾಲ್ಲೂಕಿನಲ್ಲಿ ಕೆರೆ ಏರಿ, ಕೋಡಿ ಅಭಿವೃದ್ಧಿ. ಯರಮಾದನಹಳ್ಳಿಯಲ್ಲಿ ಚೆಕ್ ಡ್ಯಾಂ ನಿರ್ಮಾಣ.</p><p>l ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಚೆಕ್ ಡ್ಯಾಂ ದುರಸ್ತಿ, ರಕ್ಷಣಾ ಕಾಮಗಾರಿ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಪ್ರಸ್ತುತ ಸಾಲಿಗೆ ಮಂಡನೆಯಾಗಿರುವ ರಾಜ್ಯ ಬಜೆಟ್ನಲ್ಲಿ ಜಿಲ್ಲೆಗೆ ಸಿಕ್ಕಿರುವ ಕೊಡುಗೆ ಅತ್ಯಲ್ಪ. ಬಿಡುಗಾಸು ಕೊಡಲಾಗಿದೆ ಎಂಬ ಆಕ್ಷೇಪ, ಅಸಮಾಧಾನ ವ್ಯಕ್ತವಾಗಿದೆ.</p>.<p>ಬೆಂಗಳೂರು ನಗರಕ್ಕೆ ಪರ್ಯಾಯವಾಗಿ ತುಮಕೂರು ನಗರ ಅಭಿವೃದ್ಧಿ ಕಾಣುತ್ತಿದ್ದರೂ ಅದಕ್ಕೆ ಅನುಗುಣವಾಗಿ ಅನುದಾನದ ನೆರವು ನೀಡಿಲ್ಲ. ಹೊಸ ಯೋಜನೆಗಳನ್ನೂ ಕೊಟ್ಟಿಲ್ಲ. ಅಲ್ಪಸ್ವಲ್ಪ ಕಾರ್ಯಕ್ರಮ ಪ್ರಕಟಿಸಿರುವುದನ್ನು ಹೊರತುಪಡಿಸಿದರೆ ಜಿಲ್ಲೆಗೆ ಏನೇನೂ ಸಿಕ್ಕಿಲ್ಲ ಎಂಬ ಮಾತುಗಳು ಕೇಳಿ ಬಂದಿವೆ.</p>.<p>‘ಗ್ರೇಟರ್ ತುಮಕೂರು’ ನಿರ್ಮಾಣದ ಕನಸಿಗೆ ಎಳ್ಳು ನೀರು ಬಿಡಲಾಗಿದೆ. ಈ ಬಗ್ಗೆ ಸಚಿವ ಜಿ.ಪರಮೇಶ್ವರ ಸದಾ ಪ್ರಸ್ತಾಪಿಸುತ್ತಲೇ ಬಂದಿದ್ದರು. ಆದರೆ ಅವರ ‘ಒಂಟಿ ಧ್ವನಿ’ಗೆ ಸಿದ್ದರಾಮಯ್ಯ ಅವರ ಕಡೆಯಿಂದ ಸ್ಪಂದನೆ ಸಿಕ್ಕಿಲ್ಲ.</p>.<p>ಪ್ರಮುಖವಾಗಿ ಐ.ಟಿ ಪಾರ್ಕ್ ನಿರ್ಮಾಣದ ಪ್ರಸ್ತಾಪವೇ ಇಲ್ಲವಾಗಿದೆ. ಬೆಂಗಳೂರಿನ ನಂತರ ಎರಡನೇ ಹಂತದ ನಗರವಾದ ತುಮಕೂರಿನಲ್ಲಿ ₹100 ಕೋಟಿ ವೆಚ್ಚದಲ್ಲಿ ಐ.ಟಿ ಪಾರ್ಕ್ ನಿರ್ಮಾಣ ಮಾಡಲು ಉದ್ದೇಶಿಸಿದ್ದು, ಅದಕ್ಕಾಗಿ ಪ್ರಸ್ತಾವ ಸಲ್ಲಿಸಲಾಗಿದೆ. ಈ ಬಾರಿಯ ಬಜೆಟ್ನಲ್ಲಿ ಜಿಲ್ಲೆಯ ಅಭಿವೃದ್ಧಿಗೆ ₹500 ಕೋಟಿವರೆಗೂ ನೆರವು ಸಿಗಲಿದೆ ಎಂಬ ವಿಶ್ವಾಸವನ್ನು ಪರಮೇಶ್ವರ ವ್ಯಕ್ತಪಡಿಸಿದ್ದರು. ಆದರೆ ಅಂತಹ ಆಶಾಗೋಪುರ ಕಳಚಿ ಬಿದ್ದಿದೆ.</p>.<p>ನಗರದಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಹಾಕಿ ಕ್ರೀಡಾಂಗಣ, ಈಜುಕೊಳ ನಿರ್ಮಾಣಕ್ಕೆ ₹6 ಕೋಟಿ ಅನುದಾನ ನೀಡುವುದಾಗಿ ನಗರದಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದರು. ಆದರೆ ಈಗ ಕೊಟ್ಟಿರುವುದು ₹3 ಕೋಟಿ ಮಾತ್ರ. ಭರವಸೆ ನೀಡಿದಷ್ಟು ಅನುದಾನ ಮೀಸಲಿಟ್ಟಿಲ್ಲ.</p>.<p><strong>ಮೆಟ್ರೊ:</strong> ನಮ್ಮ ಮೆಟ್ರೊ ಸಂಚಾರವನ್ನು ತುಮಕೂರು ವರೆಗೆ ವಿಸ್ತರಿಸುವ ಬಗ್ಗೆ ಪ್ರಸ್ತಾಪವೇ ಇಲ್ಲವಾಗಿದೆ. ಈ ಯೋಜನೆಗೆ ಡಿಪಿಆರ್ ಸಿದ್ಧವಾಗಿದ್ದು, ಮುಂದಿನ ಬಜೆಟ್ನಲ್ಲಿ ಅನುದಾನ ಮೀಸಲಿಡಬಹುದು ಎಂದು ನಿರೀಕ್ಷಿಸಲಾಗಿತ್ತು. ಈಗ ಅದಕ್ಕೂ ಮುಖ್ಯಮಂತ್ರಿ ಸ್ಪಂದಿಸಿಲ್ಲ.</p>.<p>ತುಮಕೂರು ನಗರ ವೇಗವಾಗಿ ಪ್ರಗತಿ ಕಾಣುತ್ತಿದ್ದು, ಮಹಾನಗರ ಪಾಲಿಕೆ ವ್ಯಾಪ್ತಿಗೆ 14 ಗ್ರಾಮ ಪಂಚಾಯಿತಿಗಳ 54 ಹಳ್ಳಿಗಳನ್ನು ಸೇರ್ಪಡೆ ಮಾಡಿಕೊಂಡು ಪಾಲಿಕೆ ವಿಸ್ತರಿಸಲು ಯೋಜನೆ ರೂಪಿಸಲಾಗಿದೆ. ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನ ಸಿಗುವ ನಿರೀಕ್ಷೆ ಹುಸಿಯಾಗಿದೆ.</p>.<p>ಜಿಲ್ಲೆಯಲ್ಲಿ ತೆಂಗು ಪಾರ್ಕ್, ಹುಣಸೆ ಹಾಗೂ ಹಲಸು ಅಭಿವೃದ್ಧಿ ಪಾರ್ಕ್, ಹುಣಸೆ ಹಣ್ಣು ಸಂಸ್ಕರಣೆ, ಮೌಲ್ಯವರ್ಧನೆಗೆ ನೆರವಾಗಲು ಶೀತಲೀಕರಣ ಘಟಕ ನಿರ್ಮಾಣದಂತಹ ಮಹತ್ವದ ಕೃಷಿ ಬೇಡಿಕೆಗಳಿಗೂ ಬಜೆಟ್ನಲ್ಲಿ ಒತ್ತು ಸಿಕ್ಕಿಲ್ಲ.</p>.<p>ನಗರದ ಹೊರ ವಲಯದಲ್ಲಿ ಕಬ್ಬನ್ಪಾರ್ಕ್, ಲಾಲ್ಬಾಗ್ ಮಾದರಿಯಲ್ಲಿ ಉದ್ಯಾನವನ ನಿರ್ಮಾಣ. ಹೂವಿನ ಮಾರುಕಟ್ಟೆ, ಶೀತಲೀಕರಣ ಘಟಕ, ಸೇಬು ಸೇರಿದಂತೆ ವಿವಿಧ ಹಣ್ಣು, ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ ಘಟಕ. ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆ ನಿರ್ವಹಣೆ. ಉದ್ಯಮ, ಉದ್ಯೋಗ, ವಸತಿ ದೃಷ್ಟಿಯಿಂದ ನಗರದ ಅಭಿವೃದ್ಧಿಗೆ ಅನುದಾನ ನೀಡುವಂತೆ ಜಿಲ್ಲಾ ಆಡಳಿತ ಬೇಡಿಕೆ ಪಟ್ಟಿ ಸಲ್ಲಿಸಿತ್ತು. ಈ ಯಾವ ಬೇಡಿಕೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ ಎಂಬ ಕೋಪ ಜಿಲ್ಲೆಯ ಜನರಲ್ಲಿ ಮೂಡಿದೆ.</p>.<blockquote>ಜಿಲ್ಲೆಗೆ ರಾಜ್ಯ ಬಜೆಟ್ನಲ್ಲಿ ಸಿಕ್ಕಿರುವ ಪ್ರಮುಖ ಯೋಜನೆ </blockquote>.<p>l ತುಮಕೂರಿನ ಗುಬ್ಬಿ ವೀರಣ್ಣ ಕಲಾಕ್ಷೇತ್ರದ ನವೀಕರಣಕ್ಕೆ ₹3 ಕೋಟಿ ಅನುದಾನ.</p><p>l ಕೊರಟಗೆರೆ ತಾಲ್ಲೂಕು ವಡೆಯರಪುರ ಬಳಿ 1.7 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಸಮತೋಲನ ಜಲಾಶಯ ನಿರ್ಮಾಣ.</p><p>l ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ₹3 ಕೋಟಿ ಅನುದಾನ.</p><p>l ತುಮಕೂರಿನಲ್ಲಿ ₹ 5 ಕೋಟಿ ವೆಚ್ಚದಲ್ಲಿ ಸೀಜಿಂಗ್ ಯಾರ್ಡ್ ನಿರ್ಮಾಣ.</p><p>l ತುಮಕೂರಿನಲ್ಲಿ ₹6 ಕೋಟಿಯಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥ ನಿರ್ಮಾಣ.</p><p>l ಕುಣಿಗಲ್, ತಿಪಟೂರು, ಮಧುಗಿರಿ, ಶಿರಾದಲ್ಲಿ ಶ್ರಮಿಕ ವಸತಿ ಶಾಲೆ ಆರಂಭ.</p><p>l ಚಿಕ್ಕನಾಯಕನಹಳ್ಳಿ ಕುಡಿಯುವ ನೀರಿನ ಯೋಜನೆ. ದೇವಸ್ಥಾನ ಹತ್ತಿರ ಚೆಕ್ ಡ್ಯಾಂ ನಿರ್ಮಾಣ.</p><p>l ಗುಬ್ಬಿ, ಶಿರಾ ತಾಲ್ಲೂಕಿನ 42 ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆ.</p><p>l ಗೂಳೂರು- ಹೆಬ್ಬೂರು ಕುಡಿಯುವ ನೀರಿನ ಯೋಜನೆ.</p><p>l ಶಿರಾ ತಾಲ್ಲೂಕಿನಲ್ಲಿ ಕೆರೆ ಏರಿ, ಕೋಡಿ ಅಭಿವೃದ್ಧಿ. ಯರಮಾದನಹಳ್ಳಿಯಲ್ಲಿ ಚೆಕ್ ಡ್ಯಾಂ ನಿರ್ಮಾಣ.</p><p>l ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಚೆಕ್ ಡ್ಯಾಂ ದುರಸ್ತಿ, ರಕ್ಷಣಾ ಕಾಮಗಾರಿ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>