<p>ಬೆಂಗಳೂರು: ರಾಜ್ಯದ ಹಾಸನ, ಚಿಕ್ಕಮಗಳೂರು, ಮೈಸೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು ಜಿಲ್ಲೆಗಳ ವಿವಿಧೆಡೆ ಶುಕ್ರವಾರ ರಾತ್ರಿ ಹಾಗೂ ಶನಿವಾರ ಉತ್ತಮ ಮಳೆಯಾಗಿದೆ.</p>.<p>ಹಾಸನ ಜಿಲ್ಲೆಯ ಅರಸೀಕೆರೆ, ಜಾವಗಲ್ ಹಾಗೂ ಸುತ್ತಮುತ್ತ ಶುಕ್ರವಾರ ಮಧ್ಯರಾತ್ರಿ ಬಿರುಗಾಳಿ, ಜೋರು ಮಳೆಯಿಂದಾಗಿ ತೆಂಗು, ಬಾಳೆ, ಅಡಿಕೆ ಬೆಳೆ ನೆಲಕಚ್ಚಿವೆ.</p>.<p>ಜಾವಗಲ್ನಲ್ಲಿ ಭಾರಿ ಮಳೆ– ಗಾಳಿಗೆ 15ಕ್ಕೂ ಹೆಚ್ಚು ವಿದ್ಯುತ್ ಕಂಬ ಉರುಳಿದರೆ, ಅರಸೀಕೆರೆ ತಾಲ್ಲೂಕಿನ ಸಲುಪರಹಳ್ಳಿ, ಉಂಡಿಗನಾಳುವಿನಲ್ಲಿ ಅಡಿಕೆ ಬೆಳೆಗೆ ಹಾನಿಯಾಗಿದೆ. ಮುದ್ದನಹಳ್ಳಿಯಲ್ಲಿ 200ಕ್ಕೂ ಹೆಚ್ಚು ಬಾಳೆಗಿಡಗಳಿಗೆ ಹಾನಿಯಾಗಿದೆ.</p>.<p>ಮೈಸೂರು ಜಿಲ್ಲೆಯಾದ್ಯಂತ ಗುಡುಗು–ಸಿಡಿಲು ಸಹಿತ ಮಳೆ ಯಾಗಿದ್ದು, ನಂಜನಗೂಡು ತಾಲ್ಲೂಕು ದಾಸನೂರಿನಲ್ಲಿ ಗರಿಷ್ಠ ಅಂದರೆ 5.2 ಸೆಂ.ಮೀ. ಮಳೆ ಯಾಗಿದೆ. ಎಚ್.ಡಿ. ಕೋಟೆ ತಾಲ್ಲೂಕು ಹಂಪಾಪುರ ಹೋಬಳಿಯ ಎಂ.ಕನ್ನೇನಹಳ್ಳಿಯಲ್ಲಿ ಸಿಡಿಲು ಬಡಿದು ಹಸು ಮೃತಪಟ್ಟಿತು.</p>.<p>ಚಿಕ್ಕಮಗಳೂರು ನಗರದಲ್ಲಿ ಶುಕ್ರವಾರ ಮಧ್ಯರಾತ್ರಿ ಬಿರುಗಾಳಿ ಸಹಿತ ಮಳೆ ಅಬ್ಬರಿಸಿದೆ. ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ಕಂಬ, ಮರ ಉರುಳಿವೆ. ಕೆಲ ಮನೆಗಳ ಚಾವಣಿ ಶೀಟ್ಗಳು ಹಾರಿಹೋಗಿವೆ. ಶನಿವಾರ ಇಡೀ ದಿನ ನಗರದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.</p>.<p>ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನಲ್ಲಿ ಬಿರುಗಾಳಿ ಸಹಿತ ಮಳೆಗೆ 70ಕ್ಕೂ ಹೆಚ್ಚು ಕಂಬಗಳು ಬಿದ್ದಿವೆ. ಹೂವಿನ ತೋಟಗಳು ಬಿರುಗಾಳಿಗೆ ಸಿಲುಕಿ ಹಾಳಾಗಿವೆ. ಕೆಜಿಎಫ್ ತಾಲ್ಲೂಕಿನಲ್ಲಿ ಬೆಳೆ ಹಾನಿಯಾಗಿದೆ.</p>.<p>ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನಲ್ಲಿ ಗಾಳಿ ಸಹಿತ ಮಳೆಗೆ ನೂರಾರು ತೆಂಗು, ಅಡಿಕೆ, ಬಾಳೆ, ದಾಳಿಂಬೆ ಗಿಡ, ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ. 15ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಹುಳಿಯಾರು ಹೋಬಳಿ ಬೋರನ ಕಣಿವೆ ಪ್ರೌಢಶಾಲೆ ಅಡುಗೆ ಮನೆ ಚಾವಣಿ ಹಾರಿಹೋಗಿದೆ.</p>.<p>ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಲಿನ ಪ್ರದೇಶಗಳಲ್ಲಿ ಶನಿವಾರ ಸಂಜೆ ಸುರಿದ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತು. ಬೆಂಗಳೂರು– ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯಗೊಂಡಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-51-470953596</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ರಾಜ್ಯದ ಹಾಸನ, ಚಿಕ್ಕಮಗಳೂರು, ಮೈಸೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು ಜಿಲ್ಲೆಗಳ ವಿವಿಧೆಡೆ ಶುಕ್ರವಾರ ರಾತ್ರಿ ಹಾಗೂ ಶನಿವಾರ ಉತ್ತಮ ಮಳೆಯಾಗಿದೆ.</p>.<p>ಹಾಸನ ಜಿಲ್ಲೆಯ ಅರಸೀಕೆರೆ, ಜಾವಗಲ್ ಹಾಗೂ ಸುತ್ತಮುತ್ತ ಶುಕ್ರವಾರ ಮಧ್ಯರಾತ್ರಿ ಬಿರುಗಾಳಿ, ಜೋರು ಮಳೆಯಿಂದಾಗಿ ತೆಂಗು, ಬಾಳೆ, ಅಡಿಕೆ ಬೆಳೆ ನೆಲಕಚ್ಚಿವೆ.</p>.<p>ಜಾವಗಲ್ನಲ್ಲಿ ಭಾರಿ ಮಳೆ– ಗಾಳಿಗೆ 15ಕ್ಕೂ ಹೆಚ್ಚು ವಿದ್ಯುತ್ ಕಂಬ ಉರುಳಿದರೆ, ಅರಸೀಕೆರೆ ತಾಲ್ಲೂಕಿನ ಸಲುಪರಹಳ್ಳಿ, ಉಂಡಿಗನಾಳುವಿನಲ್ಲಿ ಅಡಿಕೆ ಬೆಳೆಗೆ ಹಾನಿಯಾಗಿದೆ. ಮುದ್ದನಹಳ್ಳಿಯಲ್ಲಿ 200ಕ್ಕೂ ಹೆಚ್ಚು ಬಾಳೆಗಿಡಗಳಿಗೆ ಹಾನಿಯಾಗಿದೆ.</p>.<p>ಮೈಸೂರು ಜಿಲ್ಲೆಯಾದ್ಯಂತ ಗುಡುಗು–ಸಿಡಿಲು ಸಹಿತ ಮಳೆ ಯಾಗಿದ್ದು, ನಂಜನಗೂಡು ತಾಲ್ಲೂಕು ದಾಸನೂರಿನಲ್ಲಿ ಗರಿಷ್ಠ ಅಂದರೆ 5.2 ಸೆಂ.ಮೀ. ಮಳೆ ಯಾಗಿದೆ. ಎಚ್.ಡಿ. ಕೋಟೆ ತಾಲ್ಲೂಕು ಹಂಪಾಪುರ ಹೋಬಳಿಯ ಎಂ.ಕನ್ನೇನಹಳ್ಳಿಯಲ್ಲಿ ಸಿಡಿಲು ಬಡಿದು ಹಸು ಮೃತಪಟ್ಟಿತು.</p>.<p>ಚಿಕ್ಕಮಗಳೂರು ನಗರದಲ್ಲಿ ಶುಕ್ರವಾರ ಮಧ್ಯರಾತ್ರಿ ಬಿರುಗಾಳಿ ಸಹಿತ ಮಳೆ ಅಬ್ಬರಿಸಿದೆ. ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ಕಂಬ, ಮರ ಉರುಳಿವೆ. ಕೆಲ ಮನೆಗಳ ಚಾವಣಿ ಶೀಟ್ಗಳು ಹಾರಿಹೋಗಿವೆ. ಶನಿವಾರ ಇಡೀ ದಿನ ನಗರದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.</p>.<p>ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನಲ್ಲಿ ಬಿರುಗಾಳಿ ಸಹಿತ ಮಳೆಗೆ 70ಕ್ಕೂ ಹೆಚ್ಚು ಕಂಬಗಳು ಬಿದ್ದಿವೆ. ಹೂವಿನ ತೋಟಗಳು ಬಿರುಗಾಳಿಗೆ ಸಿಲುಕಿ ಹಾಳಾಗಿವೆ. ಕೆಜಿಎಫ್ ತಾಲ್ಲೂಕಿನಲ್ಲಿ ಬೆಳೆ ಹಾನಿಯಾಗಿದೆ.</p>.<p>ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನಲ್ಲಿ ಗಾಳಿ ಸಹಿತ ಮಳೆಗೆ ನೂರಾರು ತೆಂಗು, ಅಡಿಕೆ, ಬಾಳೆ, ದಾಳಿಂಬೆ ಗಿಡ, ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ. 15ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಹುಳಿಯಾರು ಹೋಬಳಿ ಬೋರನ ಕಣಿವೆ ಪ್ರೌಢಶಾಲೆ ಅಡುಗೆ ಮನೆ ಚಾವಣಿ ಹಾರಿಹೋಗಿದೆ.</p>.<p>ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಲಿನ ಪ್ರದೇಶಗಳಲ್ಲಿ ಶನಿವಾರ ಸಂಜೆ ಸುರಿದ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತು. ಬೆಂಗಳೂರು– ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯಗೊಂಡಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-51-470953596</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>