ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಭಾರತ ಜೋಡೊ ಮಾಡಲು ಬಂದಿದ್ದಾರೋ ಅಥವಾ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರನ್ನು ಜೋಡಿಸಲು ಬಂದಿದ್ದಾರೋ ಗೊತ್ತಿಲ್ಲ. ರಾಜ್ಯ ಸರ್ಕಾರವನ್ನು ಶೇ 40ರಷ್ಟು ಕಮಿಷನ್ ಸರ್ಕಾರ ಎಂದು ಟೀಕೆ ಮಾಡುತ್ತಿದ್ದಾರೆ. ರಾಹುಲ್, ಅವರ ತಾಯಿ ಸೋನಿಯಾ ಗಾಂಧಿ ಜಾಮೀನಿನ ಮೇಲೆ ಹೊರಗಡೆ ಇದ್ದಾರೆ. ಇದನ್ನು ಅರ್ಥ ಮಾಡಿಕೊಳ್ಳಬೇಕು. ಅಧಿಕಾರ ದಾಹದಿಂದ ಕಾಂಗ್ರೆಸ್ ಮುಖಂಡರು ಹಲವು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.