ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳ ವೇತನ ಪರಿಷ್ಕರಣೆ ಸಂಬಂಧ ಔರಾದಕರ್ ವರದಿ ಜಾರಿಮಾಡಲಾಗಿದೆ. ಇದರಿಂದ ಕೆಲವರಿಗೆ ಸರಿಯಾದ ಪ್ರಮಾಣದಲ್ಲಿ ವೇತನ ಹೆಚ್ಚಳವಾಗಿಲ್ಲ ಎಂಬ ಅಸಮಾಧಾನ ಇದೆ. ಈ ಬಗ್ಗೆ ಆರ್ಥಿಕ ಇಲಾಖೆ ಜತೆ ಚರ್ಚಿಸಿದ್ದು, ಹೆಚ್ಚುವರಿಯಾಗಿ ಭತ್ಯೆ ನೀಡುವ ಮೂಲಕ ವ್ಯತ್ಯಾಸವನ್ನು ಸರಿಪಡಿಸಲಾಗಿದೆ. ರಾಜ್ಯದಲ್ಲಿ ₹200 ಕೋಟಿ ವೆಚ್ಚದಲ್ಲಿ 100 ಹೊಸ ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗುತ್ತಿದೆ. ಪೊಲೀಸರಿಗೆ ಸುಸಜ್ಜಿತವಾದ ಮನೆ, ಠಾಣೆ ನಿರ್ಮಿಸಿ ಕೊಡಲಾಗುತ್ತಿದೆ ಎಂದರು.