<p><strong>ತುಮಕೂರು: </strong>ಕಾಂಗ್ರೆಸ್ನಲ್ಲಿಯೇ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಬಣಗಳು ಇವೆ. ಅವರಲ್ಲಿಯೇ ಒಗ್ಗಟ್ಟು ಇಲ್ಲ. ಹೀಗುರುವಾಗ ಸಿದ್ದರಾಮಯ್ಯ ಬಿಜೆಪಿ ಟೀಕಿಸುತ್ತಾರೆ. ಕಳ್ಳ ಪರರ ನಂಬ ಎನ್ನುವ ಸ್ಥಿತಿ ಅವರದ್ದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಟೀಕಿಸಿದರು.</p>.<p>ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿಯೇ ಹೊಂದಾಣಿಕೆ ಕೊರತೆ ಇದೆ ಎಂದರು.</p>.<p>ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆ ಕುರಿತು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ವ್ಯಕ್ತಪಡಿಸುತ್ತಿರುವ ಅಭಿಪ್ರಾಯ ಅವರ ವೈಯಕ್ತಿಕ. ಈ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಆದರೆ ಮುಂದಿನ ಮೂರು ವರ್ಷಗಳ ಕಾಲ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಎಂದರು.</p>.<p>ಶಿರಾ ಮತ್ತು ಆರ್.ಆರ್.ನಗರ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿಯೇ ಸಾಧಿಸುತ್ತದೆ. ವಿಧಾನ ಪರಿಷತ್ ನ ನಾಲ್ಕು ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಪರಿಷತ್ ನಲ್ಲಿ ಬಲ ಹೆಚ್ಚಿಸಿಕೊಳ್ಳಲಿದೆ ಎಂದರು.</p>.<p>ಸಾರಿಗೆ ಇಲಾಖೆಯ ನಾಲ್ಕು ನಿಗಮಗಳಲ್ಲಿ ಬಸ್ ಗಳಲ್ಲಿ ನಿತ್ಯ ಎರಡು ಕೋಟಿ ಜನರು ಸಂಚರಿಸುತ್ತಿದ್ದರು. ಆದರೆ ಈಗ ಶೇ 30 ರಷ್ಟು ಜನರು ಸಂಚರಿಸುತ್ತಿದ್ದಾರೆ. ನೌಕರರಿಗೆ ವೇತನಕೊಡಲು ಹಣ ಇಲ್ಲದ ಸ್ಥಿತಿ ಇದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಕಾಂಗ್ರೆಸ್ನಲ್ಲಿಯೇ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಬಣಗಳು ಇವೆ. ಅವರಲ್ಲಿಯೇ ಒಗ್ಗಟ್ಟು ಇಲ್ಲ. ಹೀಗುರುವಾಗ ಸಿದ್ದರಾಮಯ್ಯ ಬಿಜೆಪಿ ಟೀಕಿಸುತ್ತಾರೆ. ಕಳ್ಳ ಪರರ ನಂಬ ಎನ್ನುವ ಸ್ಥಿತಿ ಅವರದ್ದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಟೀಕಿಸಿದರು.</p>.<p>ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿಯೇ ಹೊಂದಾಣಿಕೆ ಕೊರತೆ ಇದೆ ಎಂದರು.</p>.<p>ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆ ಕುರಿತು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ವ್ಯಕ್ತಪಡಿಸುತ್ತಿರುವ ಅಭಿಪ್ರಾಯ ಅವರ ವೈಯಕ್ತಿಕ. ಈ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಆದರೆ ಮುಂದಿನ ಮೂರು ವರ್ಷಗಳ ಕಾಲ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಎಂದರು.</p>.<p>ಶಿರಾ ಮತ್ತು ಆರ್.ಆರ್.ನಗರ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿಯೇ ಸಾಧಿಸುತ್ತದೆ. ವಿಧಾನ ಪರಿಷತ್ ನ ನಾಲ್ಕು ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಪರಿಷತ್ ನಲ್ಲಿ ಬಲ ಹೆಚ್ಚಿಸಿಕೊಳ್ಳಲಿದೆ ಎಂದರು.</p>.<p>ಸಾರಿಗೆ ಇಲಾಖೆಯ ನಾಲ್ಕು ನಿಗಮಗಳಲ್ಲಿ ಬಸ್ ಗಳಲ್ಲಿ ನಿತ್ಯ ಎರಡು ಕೋಟಿ ಜನರು ಸಂಚರಿಸುತ್ತಿದ್ದರು. ಆದರೆ ಈಗ ಶೇ 30 ರಷ್ಟು ಜನರು ಸಂಚರಿಸುತ್ತಿದ್ದಾರೆ. ನೌಕರರಿಗೆ ವೇತನಕೊಡಲು ಹಣ ಇಲ್ಲದ ಸ್ಥಿತಿ ಇದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>