<p><strong>ತುಮಕೂರು:</strong> ಶಿರಾ ಉಪಚುನಾವಣೆಯಲ್ಲಿ ಜೆಡಿಎಸ್ ತೀವ್ರವಾಗಿ ನೆಲ ಕಚ್ಚಿದೆ. ಆರಂಭದಿಂದಲೂ ಆ ಪಕ್ಷ ಗಮನಾರ್ಹವಾಗಿ ಮತಗಳನ್ನು ಪಡೆಯಲೇ ಇಲ್ಲ.</p>.<p>ಶಿರಾ ಜೆಡಿಎಸ್ನ ಪ್ರಮುಖ ನೆಲೆ ಎನಿಸಿತ್ತು. ದೇವೇಗೌಡರು, ಕುಮಾರಸ್ವಾಮಿ, ಪ್ರಜ್ವಲ್, ರೇವಣ್ಣ, ನಿಖಿಲ್ ಹೀಗೆ ಇಡೀ ಅವರ ಕುಟುಂಬವೇ ಕ್ಷೇತ್ರದಲ್ಲಿ ಬೀಡು ಬಿಟ್ಟಿತ್ತು. ಹುಲಿಕುಂಟೆ ಜವಾಬ್ದಾರಿಯನ್ನು ಪ್ರಜ್ವಲ್ ವಹಿಸಿಕೊಂಡಿದ್ದರು.</p>.<p>ಇಷ್ಟೆಲ್ಲ ಕಸರತ್ತು ಮಾಡಿದರೂ ಜೆಡಿಎಸ್ಗೆ ತೀವ್ರ ಹಿನ್ನಡೆ ಆಗಿದೆ. ಈ ಹಿಂದಿನ ಚುನಾವಣೆಗಳಲ್ಲಿ ಲೀಡ್ ಪಡೆದಿದ್ದ ಮತಗಟ್ಟೆಗಳಲ್ಲೇ ಉಪಚುನಾವಣೆಯಲ್ಲಿ ಜೆಡಿಎಸ್ ಮತವನ್ನು ಪಡೆದಿಲ್ಲ. ಈಗಾಗಲೇ ಜೆಡಿಎಸ್ನಿಂದ ಜಿಲ್ಲೆಯ ಹಲವು ನಾಯಕರು ಒಂದು ಕಾಲು ಹೊರಗಿಟ್ಟಿದ್ದಾರೆ. ಭದ್ರಕೋಟೆಯಲ್ಲಿನ ಸೋಲು ವಲಸೆಯನ್ನು ಹೆಚ್ಚಿಸಲಿದೆ ಎನ್ನಲಾಗುತ್ತಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/district/tumakuru/karnataka-politics-sira-by-election-bjp-candidate-dr-cm-rajesh-gowda-wins-778041.html" target="_blank">ಶಿರಾದ ಕೋಟೆಯಲ್ಲಿ ಹಾರಿದ ಕಮಲ ಧ್ವಜ</a></strong></p>.<p><strong>ಬಿಜೆಪಿಗೆ ಬಲ ನೀಡಿದ ಕಾಡುಗೊಲ್ಲರು<br />ತುಮಕೂರು:</strong> ಶಿರಾದಲ್ಲಿ ಕಾಡುಗೊಲ್ಲ ಸಮುದಾಯ ಹೆಚ್ಚಿನ ಪ್ರಮಾಣದಲ್ಲಿ ಬಿಜೆಪಿ ಬೆಂಬಲಿಸಿದೆ. ಆ ಸಮುದಾಯ ಹೆಚ್ಚಿರುವ ಗೌಡಗೆರೆ, ಕಳುವರಹಳ್ಳಿ, ಹುಲಿಕುಂಟೆ ಹೀಗೆ ಬಹುತೇಕ ಕಡೆಗಳಲ್ಲಿ ಬಿಜೆಪಿ ಹೆಚ್ಚು ಮತಗಳನ್ನು ಪಡೆದಿದೆ.</p>.<p>ಮೂರು ಅಭ್ಯರ್ಥಿಗಳು ಸಹ ಕುಂಚಿಟಿಗರೇ ಆಗಿದ್ದರು. ಈ ಸಮುದಾಯದ ನಂತರ ಶಿರಾದಲ್ಲಿ ಕಾಡುಗೊಲ್ಲರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು.</p>.<p>ಕಾಡುಗೊಲ್ಲರ ಅಭಿವೃದ್ಧಿ ನಿಗಮ ರಚನೆ ಜತೆಗೆ ಈ ಸಮುದಾಯದ 40ಕ್ಕೂ ಹೆಚ್ಚು ದೇಗುಲಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿತ್ತು.</p>.<p>ಕಾಡುಗೊಲ್ಲರ ಪ್ರಮುಖ ನಾಯಕ ಚಂಗಾವರ ಮಾರಣ್ಣ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು. ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ಶಿರಾ ನಗರಾಭಿವೃದ್ಧಿ ಪ್ರಾಧಿಕಾರಕ್ಜೆ ಈ ಸಮುದಾಯದ ಈರಣ್ಣ ಅವರನ್ನು ಸರ್ಕಾರ ನೇಮಕ ಮಾಡಿತು.</p>.<p>ಗೊಲ್ಲರ ಹಟ್ಟಿಗಳ ಯುವ ಸಮುದಾಯವನ್ನು ಪ್ರಮುಖವಾಗಿ ಸೆಳೆಯಿತು.</p>.<p>ಕಾಂಗ್ರೆಸ್ ಕಾಡುಗೊಲ್ಲರ ಸಾಸಲು ಸತೀಶ್ ಅವರನ್ನು ಜಿಲ್ಲಾ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಿತ್ತು. ಆದರೂ ಆ ಪಕ್ಷ ಕಾಡುಗೊಲ್ಲರ ಮತ ಸೆಳೆಯುವಲ್ಲಿ ಸೋತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಶಿರಾ ಉಪಚುನಾವಣೆಯಲ್ಲಿ ಜೆಡಿಎಸ್ ತೀವ್ರವಾಗಿ ನೆಲ ಕಚ್ಚಿದೆ. ಆರಂಭದಿಂದಲೂ ಆ ಪಕ್ಷ ಗಮನಾರ್ಹವಾಗಿ ಮತಗಳನ್ನು ಪಡೆಯಲೇ ಇಲ್ಲ.</p>.<p>ಶಿರಾ ಜೆಡಿಎಸ್ನ ಪ್ರಮುಖ ನೆಲೆ ಎನಿಸಿತ್ತು. ದೇವೇಗೌಡರು, ಕುಮಾರಸ್ವಾಮಿ, ಪ್ರಜ್ವಲ್, ರೇವಣ್ಣ, ನಿಖಿಲ್ ಹೀಗೆ ಇಡೀ ಅವರ ಕುಟುಂಬವೇ ಕ್ಷೇತ್ರದಲ್ಲಿ ಬೀಡು ಬಿಟ್ಟಿತ್ತು. ಹುಲಿಕುಂಟೆ ಜವಾಬ್ದಾರಿಯನ್ನು ಪ್ರಜ್ವಲ್ ವಹಿಸಿಕೊಂಡಿದ್ದರು.</p>.<p>ಇಷ್ಟೆಲ್ಲ ಕಸರತ್ತು ಮಾಡಿದರೂ ಜೆಡಿಎಸ್ಗೆ ತೀವ್ರ ಹಿನ್ನಡೆ ಆಗಿದೆ. ಈ ಹಿಂದಿನ ಚುನಾವಣೆಗಳಲ್ಲಿ ಲೀಡ್ ಪಡೆದಿದ್ದ ಮತಗಟ್ಟೆಗಳಲ್ಲೇ ಉಪಚುನಾವಣೆಯಲ್ಲಿ ಜೆಡಿಎಸ್ ಮತವನ್ನು ಪಡೆದಿಲ್ಲ. ಈಗಾಗಲೇ ಜೆಡಿಎಸ್ನಿಂದ ಜಿಲ್ಲೆಯ ಹಲವು ನಾಯಕರು ಒಂದು ಕಾಲು ಹೊರಗಿಟ್ಟಿದ್ದಾರೆ. ಭದ್ರಕೋಟೆಯಲ್ಲಿನ ಸೋಲು ವಲಸೆಯನ್ನು ಹೆಚ್ಚಿಸಲಿದೆ ಎನ್ನಲಾಗುತ್ತಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/district/tumakuru/karnataka-politics-sira-by-election-bjp-candidate-dr-cm-rajesh-gowda-wins-778041.html" target="_blank">ಶಿರಾದ ಕೋಟೆಯಲ್ಲಿ ಹಾರಿದ ಕಮಲ ಧ್ವಜ</a></strong></p>.<p><strong>ಬಿಜೆಪಿಗೆ ಬಲ ನೀಡಿದ ಕಾಡುಗೊಲ್ಲರು<br />ತುಮಕೂರು:</strong> ಶಿರಾದಲ್ಲಿ ಕಾಡುಗೊಲ್ಲ ಸಮುದಾಯ ಹೆಚ್ಚಿನ ಪ್ರಮಾಣದಲ್ಲಿ ಬಿಜೆಪಿ ಬೆಂಬಲಿಸಿದೆ. ಆ ಸಮುದಾಯ ಹೆಚ್ಚಿರುವ ಗೌಡಗೆರೆ, ಕಳುವರಹಳ್ಳಿ, ಹುಲಿಕುಂಟೆ ಹೀಗೆ ಬಹುತೇಕ ಕಡೆಗಳಲ್ಲಿ ಬಿಜೆಪಿ ಹೆಚ್ಚು ಮತಗಳನ್ನು ಪಡೆದಿದೆ.</p>.<p>ಮೂರು ಅಭ್ಯರ್ಥಿಗಳು ಸಹ ಕುಂಚಿಟಿಗರೇ ಆಗಿದ್ದರು. ಈ ಸಮುದಾಯದ ನಂತರ ಶಿರಾದಲ್ಲಿ ಕಾಡುಗೊಲ್ಲರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು.</p>.<p>ಕಾಡುಗೊಲ್ಲರ ಅಭಿವೃದ್ಧಿ ನಿಗಮ ರಚನೆ ಜತೆಗೆ ಈ ಸಮುದಾಯದ 40ಕ್ಕೂ ಹೆಚ್ಚು ದೇಗುಲಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿತ್ತು.</p>.<p>ಕಾಡುಗೊಲ್ಲರ ಪ್ರಮುಖ ನಾಯಕ ಚಂಗಾವರ ಮಾರಣ್ಣ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು. ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ಶಿರಾ ನಗರಾಭಿವೃದ್ಧಿ ಪ್ರಾಧಿಕಾರಕ್ಜೆ ಈ ಸಮುದಾಯದ ಈರಣ್ಣ ಅವರನ್ನು ಸರ್ಕಾರ ನೇಮಕ ಮಾಡಿತು.</p>.<p>ಗೊಲ್ಲರ ಹಟ್ಟಿಗಳ ಯುವ ಸಮುದಾಯವನ್ನು ಪ್ರಮುಖವಾಗಿ ಸೆಳೆಯಿತು.</p>.<p>ಕಾಂಗ್ರೆಸ್ ಕಾಡುಗೊಲ್ಲರ ಸಾಸಲು ಸತೀಶ್ ಅವರನ್ನು ಜಿಲ್ಲಾ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಿತ್ತು. ಆದರೂ ಆ ಪಕ್ಷ ಕಾಡುಗೊಲ್ಲರ ಮತ ಸೆಳೆಯುವಲ್ಲಿ ಸೋತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>