ಕೊಡಿಗೇನಹಳ್ಳಿ (ತುಮಕೂರು ಜಿಲ್ಲೆ): ಹೋಬಳಿಯ ಕಡಗತ್ತೂರು ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದ ಘರ್ಷಣೆಯಲ್ಲಿ ಬೈಕ್ಗೆ ಬೆಂಕಿ ಹಚ್ಚಿ ಸುಟ್ಟು ಹಾಕಲಾಗಿದೆ. ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಜೆಡಿಎಸ್ ಪಕ್ಷದ ಮುದ್ದಪ್ಪ ಮತ್ತು ಕಾಂಗ್ರೆಸ್ ಪಕ್ಷದ ಕೃಷ್ಣಪ್ಪ ಎಂಬುವರ ಮಧ್ಯೆ ನಡೆದ ಗಲಾಟೆ ಕೊನೆಗೆ ರಾಜಕೀಯ ತಿರುವು ಪಡೆದುಕೊಂಡಿದೆ. ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದೆ.
ಮುದ್ದಪ್ಪ ಅವರಿಗೆ ಸೇರಿದ ಬೈಕ್ಗೆ ಕೆಲವರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದರೆ, ಇದಕ್ಕೆ ಪ್ರತಿಕಾರವಾಗಿ ಕೃಷ್ಣಪ್ಪ ಮೇಲೆ ಹಲ್ಲೆ ನಡೆದಿದ್ದು, ತಲೆಗೆ ಪೆಟ್ಟು ಬಿದ್ದಿದೆ. ಸ್ಥಳಕ್ಕೆ ಬಂದಿದ್ದ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇನ್ನೂ ಪ್ರಕರಣ ದಾಖಲಾಗಿಲ್ಲ.