ಕೆಲವು ದಿನಗಳಿಂದ ಪ್ರತಿ ದಿನ ಸಂಜೆ ಮಳೆಯಾಗುತ್ತಿದ್ದು, ಸೋಮವಾರ ಸಂಜೆ 4 ಗಂಟೆಗೆ ಶುರುವಾದ ಮಳೆ ಒಂದು ಗಂಟೆಗೂ ಹೆಚ್ಚು ಕಾಲ ಸುರಿಯಿತು. ನಗರದ ವಿವಿಧ ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡಿದರು. ಉಪ್ಪಾರಹಳ್ಳಿ ಮೇಲ್ಸೇತುವೆ ಬಳಿ ಟ್ರಾಫಿಕ್ ಸಮಸ್ಯೆಯಿಂದ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಕೆಇಬಿ ಕಚೇರಿ ಮುಂಭಾಗದ ಹೊರಪೇಟೆ ರಸ್ತೆ ಮಳೆ ನೀರಿನಿಂದ ಕೆರೆಯಂತಾಗಿತ್ತು. ನೀರಿನ ಮಧ್ಯೆ ಕೆಟ್ಟು ನಿಂತಿದ್ದ ಆಟೊ, ಬೈಕ್ಗಳನ್ನು ಸವಾರರು ತಳ್ಳಿಕೊಂಡು ಹೋಗುತ್ತಿದ್ದ ದೃಶ್ಯಗಳು ಕಂಡು ಬಂದವು.