<p><strong>ಮಧುಗಿರಿ</strong>: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ನ ಮತದಾರರ ಪಟ್ಟಿಯಲ್ಲಿರುವ ಮರಣ ಹೊಂದಿರುವ ಸದಸ್ಯರ ಹೆಸರುಗಳನ್ನು ಕೈಬಿಡಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ಒತ್ತಾಯಿಸಿದರು.</p>.<p>ಪಟ್ಟಣದ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ನಿಂದ ಭಾನುವಾರ ನಡೆದ ಮತದಾರರ ಪಟ್ಟಿ ಪರಿಷ್ಕರಣೆ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಮುಂದಿನ ದಿನಗಳಲ್ಲಿ ತಾಲ್ಲೂಕು ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಚುನಾವಣೆಗಾಗಿ ಸದಸ್ಯರನ್ನು ಮಾಡದೆ ಕನ್ನಡವನ್ನು ಉಳಿಸಿ ಬೆಳಸುವಂತಹವರನ್ನು ಸದಸ್ಯರನ್ನಾಗಿ ಮಾಡಬೇಕು ಎಂದರು.</p>.<p>ಕಸಾಪ ಸದಸ್ಯತ್ವ ಹೊಂದಿ ಮೂರು ವರ್ಷಗಳ ನಂತರ ಅವರಿಗೆ ಮತದಾನದ ಅರ್ಹತೆ ನೀಡಲಾಗುತ್ತದೆ. ಇದರ ಬಗ್ಗೆ ಕೇಂದ್ರದಲ್ಲಿ ಚರ್ಚೆಗಳು ನಡೆಯುತ್ತಿವೆ. ಶೀಘ್ರ ತೀರ್ಮಾನವಾಗುತ್ತದೆ ಎಂದರು.</p>.<p>ಪಟ್ಟಣದಲ್ಲಿ ನಿರ್ಮಾಣವಾಗಿರುವ ಕನ್ನಡ ಸಾಹಿತ್ಯ ಪರಿಷತ್ ಭವನ ಜಿಲ್ಲೆಗೆ ಮಾದರಿಯಾಗಿದೆ. ಮತ್ತಷ್ಟು ಕಾರ್ಯಕ್ರಮಗಳನ್ನು ಮಾಡಬೇಕು ಎಂದು ತಾಲ್ಲೂಕು ಅಧ್ಯಕ್ಷರಿಗೆ ಸೂಚನೆ ನೀಡಿದರು.</p>.<p>ಪುರಸಭೆ ಸದಸ್ಯ ಆರ್.ಸುರೇಶ್, ಜಿಲ್ಲಾ ಕಸಾಪ ಕಾರ್ಯದರ್ಶಿಗಳಾದ ಯೋಗಿಶ್ವರಪ್ಪ, ಕಂಟನಗೆರೆ ಸಣ್ಣ ಹೊನ್ನಯ್ಯ, ತಾಲ್ಲೂಕು ಅಧ್ಯಕ್ಷೆ ಸಹನಾ ನಾಗೇಶ್, ಮಾಜಿ ಅಧ್ಯಕ್ಷರಾದ ಮಲನ ಮೂರ್ತಿ, ಪ್ರೊ.ಕೃಷ್ಣಪ್ಪ, ಕಾರ್ಯದರ್ಶಿ ರಂಗಧಾಮಯ್ಯ, ಖಜಾಂಚಿ ವೆಂಕಟೇಶ್ ಪ್ರಸಾದ್ ಹಾಗೂ ಪದಾಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಧುಗಿರಿ</strong>: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ನ ಮತದಾರರ ಪಟ್ಟಿಯಲ್ಲಿರುವ ಮರಣ ಹೊಂದಿರುವ ಸದಸ್ಯರ ಹೆಸರುಗಳನ್ನು ಕೈಬಿಡಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ಒತ್ತಾಯಿಸಿದರು.</p>.<p>ಪಟ್ಟಣದ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ನಿಂದ ಭಾನುವಾರ ನಡೆದ ಮತದಾರರ ಪಟ್ಟಿ ಪರಿಷ್ಕರಣೆ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಮುಂದಿನ ದಿನಗಳಲ್ಲಿ ತಾಲ್ಲೂಕು ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಚುನಾವಣೆಗಾಗಿ ಸದಸ್ಯರನ್ನು ಮಾಡದೆ ಕನ್ನಡವನ್ನು ಉಳಿಸಿ ಬೆಳಸುವಂತಹವರನ್ನು ಸದಸ್ಯರನ್ನಾಗಿ ಮಾಡಬೇಕು ಎಂದರು.</p>.<p>ಕಸಾಪ ಸದಸ್ಯತ್ವ ಹೊಂದಿ ಮೂರು ವರ್ಷಗಳ ನಂತರ ಅವರಿಗೆ ಮತದಾನದ ಅರ್ಹತೆ ನೀಡಲಾಗುತ್ತದೆ. ಇದರ ಬಗ್ಗೆ ಕೇಂದ್ರದಲ್ಲಿ ಚರ್ಚೆಗಳು ನಡೆಯುತ್ತಿವೆ. ಶೀಘ್ರ ತೀರ್ಮಾನವಾಗುತ್ತದೆ ಎಂದರು.</p>.<p>ಪಟ್ಟಣದಲ್ಲಿ ನಿರ್ಮಾಣವಾಗಿರುವ ಕನ್ನಡ ಸಾಹಿತ್ಯ ಪರಿಷತ್ ಭವನ ಜಿಲ್ಲೆಗೆ ಮಾದರಿಯಾಗಿದೆ. ಮತ್ತಷ್ಟು ಕಾರ್ಯಕ್ರಮಗಳನ್ನು ಮಾಡಬೇಕು ಎಂದು ತಾಲ್ಲೂಕು ಅಧ್ಯಕ್ಷರಿಗೆ ಸೂಚನೆ ನೀಡಿದರು.</p>.<p>ಪುರಸಭೆ ಸದಸ್ಯ ಆರ್.ಸುರೇಶ್, ಜಿಲ್ಲಾ ಕಸಾಪ ಕಾರ್ಯದರ್ಶಿಗಳಾದ ಯೋಗಿಶ್ವರಪ್ಪ, ಕಂಟನಗೆರೆ ಸಣ್ಣ ಹೊನ್ನಯ್ಯ, ತಾಲ್ಲೂಕು ಅಧ್ಯಕ್ಷೆ ಸಹನಾ ನಾಗೇಶ್, ಮಾಜಿ ಅಧ್ಯಕ್ಷರಾದ ಮಲನ ಮೂರ್ತಿ, ಪ್ರೊ.ಕೃಷ್ಣಪ್ಪ, ಕಾರ್ಯದರ್ಶಿ ರಂಗಧಾಮಯ್ಯ, ಖಜಾಂಚಿ ವೆಂಕಟೇಶ್ ಪ್ರಸಾದ್ ಹಾಗೂ ಪದಾಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>