ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗ್ರಾಮ ಪಂಚಾಯಿತಿ ಸಭಾಂಗಣ ನಿರ್ಮಾಣಕ್ಕೆ ಅನುದಾನ’

Last Updated 4 ಜೂನ್ 2020, 10:06 IST
ಅಕ್ಷರ ಗಾತ್ರ

ಮಧುಗಿರಿ: ಗ್ರಾಮ ಪಂಚಾಯಿತಿ ಕಾರ್ಯಾಲಯಗಳು ಸಾರ್ವಜನಿಕ ಕೆಲಸಗಳನ್ನು ಶೀಘ್ರವಾಗಿ ಮಾಡಿಕೊಡಬೇಕು ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು.

ತಾಲ್ಲೂಕಿನ ದೊಡ್ಡೇರಿ ಹೋಬಳಿಯ ಕವಣದಾಲ ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ಗ್ರಾಮ ಪಂಚಾಯಿತಿ ಸಭಾಂಗಣ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು. ಗ್ರಾಮ ಠಾಣೆ ಸ್ಥಳವನ್ನು ಸಾರ್ವಜನಿಕ ಉಪಯೋಗಕ್ಕೆ ಬಳಸಿಕೊಳ್ಳಬೇಕು. ಗ್ರಾಮದ ಮೂಲ ಸೌಕರ್ಯಕ್ಕೆ ಹೆಚ್ಚು ಒತ್ತು ನೀಡಲಾಗುವುದು ಎಂದು ಹೇಳಿದರು.

ತಾಲ್ಲೂಕಿನಲ್ಲಿ ಮೂರು ಗ್ರಾಮಗಳಲ್ಲಿ ವಿದ್ಯುತ್ ಸ್ಥಾವರ ಘಟಕಗಳು ಮಂಜೂರಾಗಿದ್ದು, ಸ್ಥಳ ಪರಿಶೀಲಿಸುವಂತೆ ಅಧಿಕಾರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಇಂದಿರಾ ದೇನಾನಾಯ್ಕ ಮಾತನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿದ್ಧಗಂಗಮ್ಮ ನಾಗರಾಜು, ಉಪಾಧ್ಯಕ್ಷೆ ಅನುಸೂಯಾ, ಪಿಡಿಒ ಅಲ್ಮಾಸ್ ಮೌಲಾಜಾನ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಲಕ್ಷ್ಮಿನರಸಪ್ಪ, ಸದಸ್ಯ ದೊಡ್ಡಯ್ಯ, ನಿರ್ಮಿತಿ ಕೇಂದ್ರದ ಜೆ.ಇ.ಶಾಂತರಾಜು, ನಾರಾಯಣ್, ಆರ್.ಐ.ಚನ್ನವೀರಯ್ಯ, ಮುಖಂಡರಾದ ಕೃಷ್ಣಪ್ಪ, ಸಿಡದರಗಲ್ಲು ಶ್ರೀನಿವಾಸ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT