ಸಿದ್ದಯ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸ್ನೇಹಿತರಾಗಿದ್ದರು. ಸಿದ್ದರಾಮಯ್ಯ ಇತ್ತೀಚೆಗೆ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.
ಸದಾ ಚೈತನ್ಯದ ಚಿಲುಮೆಯಂತಿದ್ದ, ದೊಡ್ಡ ಕನಸುಗಳನ್ನು ಇಟ್ಟುಕೊಂಡಿದ್ದ, ನನ್ನ ಬಹುಕಾಲದ ಗೆಳೆಯ, ಸೈದ್ಧಾಂತಿಕ ಸಂಗಾತಿ, ಕವಿ ಕೆ.ಬಿ.ಸಿದ್ದಯ್ಯನವರ ಸಾವು ನನಗೆ ಆಘಾತವನ್ನುಂಟು ಮಾಡಿದೆ. ಆವರ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು. pic.twitter.com/BLmT4H6QTE
ಮಧ್ಯಾಹ್ನ ತುಮಕೂರಿಗೆ ಪಾರ್ಥಿವ ಶರೀರವನ್ನು ತರಲಾಗುವುದು. ಟೌನ್ ಹಾಲ್ ಬಳಿ ಸಾರ್ವಜನಿಕರ ಅಂತಿಮ ದರ್ಶನಕ್ಕಿಡಲಾಗುವುದು. ಸಂಜೆ ತೋಟದಲ್ಲಿ ಅಂತ್ಯಕ್ರಿಯೆ ಜರುಗಲಿದೆ ಎಂದು ಸಿದ್ದಯ್ಯ ಅವರಆಪ್ತರು ತಿಳಿಸಿದ್ದಾರೆ.