ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಅಧಿಕಾರಿಗಳಿಗೆ ಸಚಿವ ಜೆ.ಸಿ.ಮಾಧುಸ್ವಾಮಿ ತರಾಟೆ

Last Updated 23 ಜುಲೈ 2021, 8:26 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲಾ ಪಂಚಾಯಿತಿಯಲ್ಲಿ ಶುಕ್ರವಾರ ನಡೆಯುತ್ತಿರುವ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತರಾಟೆಗೆ ತೆಗೆದುಕೊಂಡರು.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಾಸ್ಟೆಲ್ ಕಟ್ಟಡ, ಸಮುದಾಯ ಭವನ ನಿರ್ಮಾಣ, ಸ್ಮಶಾನಗಳಿಗೆ ತಂತಿಬೇಲಿ ನಿರ್ಮಿಸಲು ತಡ ಮಾಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

ಅಧಿಕಾರ ಇರುವುದು ಮೋಜು ಮಾಡಲು ಅಲ್ಲ, ಇದು ಕೆಲಸ ಮಾಡುವ ರೀತಿಯೆ? ಕುರ್ಚಿ ಬಿಟ್ಟು ಎದ್ದು ಬಂದರೆ ಏನಾಗುತ್ತದೆ ಗೊತ್ತಾ ಎಂದು ಗುಡುಗಿದರು.

ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಪ್ರೇಮ ಅವರನ್ನು ಮುಕ್ಕಾಲು ಗಂಟೆ ಸಭೆಯಲ್ಲಿ ನಿಲ್ಲಿಸಿಕೊಂಡು ತರಾಟೆಗೆ ತೆಗೆದುಕೊಂಡರು.

ಮದಲೂರು ಕೆರೆಗೆ ನೀರು ಬಿಟ್ಟರೆ ಜೈಲು
ಹಾಸನದ ಗೊರೂರು ಜಲಾಶಯದಿಂದ ತುಮಕೂರು ಜಿಲ್ಲೆಯ ನಾಲೆಗಳಿಗೆ ಭಾನುವಾರದಿಂದ ನೀರು ಬಿಡಲಾಗುತ್ತದೆ. ಶಿರಾ, ಕಳ್ಳಂಬೆಳ್ಳ ಕೆರೆಗೆ ಮಾತ್ರ ನೀರು ಹರಿಸಬೇಕು. ಮದಲೂರು ಕೆರೆಗೆ ನೀರು ಹರಿಸಿದರೆ ಜೈಲಿಗೆ ಕಳುಹಿಸಲಾಗುವುದು ಎಂದು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಸಿದರು.

ಶಿರಾ ಉಪಚುನಾವಣೆ ಸಮಯದಲ್ಲಿ ಶಿರಾ ತಾಲ್ಲೂಕಿನ ಮದಲೂರು ಕೆರೆಗೆ ನೀರು ಹರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT