<p><strong>ತುಮಕೂರು:</strong> ಜಿಲ್ಲಾ ಪಂಚಾಯಿತಿಯಲ್ಲಿ ಶುಕ್ರವಾರ ನಡೆಯುತ್ತಿರುವ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತರಾಟೆಗೆ ತೆಗೆದುಕೊಂಡರು.<br /><br />ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಾಸ್ಟೆಲ್ ಕಟ್ಟಡ, ಸಮುದಾಯ ಭವನ ನಿರ್ಮಾಣ, ಸ್ಮಶಾನಗಳಿಗೆ ತಂತಿಬೇಲಿ ನಿರ್ಮಿಸಲು ತಡ ಮಾಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಅಧಿಕಾರ ಇರುವುದು ಮೋಜು ಮಾಡಲು ಅಲ್ಲ, ಇದು ಕೆಲಸ ಮಾಡುವ ರೀತಿಯೆ? ಕುರ್ಚಿ ಬಿಟ್ಟು ಎದ್ದು ಬಂದರೆ ಏನಾಗುತ್ತದೆ ಗೊತ್ತಾ ಎಂದು ಗುಡುಗಿದರು.</p>.<p>ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಪ್ರೇಮ ಅವರನ್ನು ಮುಕ್ಕಾಲು ಗಂಟೆ ಸಭೆಯಲ್ಲಿ ನಿಲ್ಲಿಸಿಕೊಂಡು ತರಾಟೆಗೆ ತೆಗೆದುಕೊಂಡರು.<br /><br /><strong>ಮದಲೂರು ಕೆರೆಗೆ ನೀರು ಬಿಟ್ಟರೆ ಜೈಲು</strong><br />ಹಾಸನದ ಗೊರೂರು ಜಲಾಶಯದಿಂದ ತುಮಕೂರು ಜಿಲ್ಲೆಯ ನಾಲೆಗಳಿಗೆ ಭಾನುವಾರದಿಂದ ನೀರು ಬಿಡಲಾಗುತ್ತದೆ. ಶಿರಾ, ಕಳ್ಳಂಬೆಳ್ಳ ಕೆರೆಗೆ ಮಾತ್ರ ನೀರು ಹರಿಸಬೇಕು. ಮದಲೂರು ಕೆರೆಗೆ ನೀರು ಹರಿಸಿದರೆ ಜೈಲಿಗೆ ಕಳುಹಿಸಲಾಗುವುದು ಎಂದು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಸಿದರು.<br /><br />ಶಿರಾ ಉಪಚುನಾವಣೆ ಸಮಯದಲ್ಲಿ ಶಿರಾ ತಾಲ್ಲೂಕಿನ ಮದಲೂರು ಕೆರೆಗೆ ನೀರು ಹರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಜಿಲ್ಲಾ ಪಂಚಾಯಿತಿಯಲ್ಲಿ ಶುಕ್ರವಾರ ನಡೆಯುತ್ತಿರುವ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತರಾಟೆಗೆ ತೆಗೆದುಕೊಂಡರು.<br /><br />ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಾಸ್ಟೆಲ್ ಕಟ್ಟಡ, ಸಮುದಾಯ ಭವನ ನಿರ್ಮಾಣ, ಸ್ಮಶಾನಗಳಿಗೆ ತಂತಿಬೇಲಿ ನಿರ್ಮಿಸಲು ತಡ ಮಾಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಅಧಿಕಾರ ಇರುವುದು ಮೋಜು ಮಾಡಲು ಅಲ್ಲ, ಇದು ಕೆಲಸ ಮಾಡುವ ರೀತಿಯೆ? ಕುರ್ಚಿ ಬಿಟ್ಟು ಎದ್ದು ಬಂದರೆ ಏನಾಗುತ್ತದೆ ಗೊತ್ತಾ ಎಂದು ಗುಡುಗಿದರು.</p>.<p>ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಪ್ರೇಮ ಅವರನ್ನು ಮುಕ್ಕಾಲು ಗಂಟೆ ಸಭೆಯಲ್ಲಿ ನಿಲ್ಲಿಸಿಕೊಂಡು ತರಾಟೆಗೆ ತೆಗೆದುಕೊಂಡರು.<br /><br /><strong>ಮದಲೂರು ಕೆರೆಗೆ ನೀರು ಬಿಟ್ಟರೆ ಜೈಲು</strong><br />ಹಾಸನದ ಗೊರೂರು ಜಲಾಶಯದಿಂದ ತುಮಕೂರು ಜಿಲ್ಲೆಯ ನಾಲೆಗಳಿಗೆ ಭಾನುವಾರದಿಂದ ನೀರು ಬಿಡಲಾಗುತ್ತದೆ. ಶಿರಾ, ಕಳ್ಳಂಬೆಳ್ಳ ಕೆರೆಗೆ ಮಾತ್ರ ನೀರು ಹರಿಸಬೇಕು. ಮದಲೂರು ಕೆರೆಗೆ ನೀರು ಹರಿಸಿದರೆ ಜೈಲಿಗೆ ಕಳುಹಿಸಲಾಗುವುದು ಎಂದು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಸಿದರು.<br /><br />ಶಿರಾ ಉಪಚುನಾವಣೆ ಸಮಯದಲ್ಲಿ ಶಿರಾ ತಾಲ್ಲೂಕಿನ ಮದಲೂರು ಕೆರೆಗೆ ನೀರು ಹರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>