<p><strong>ತಿಪಟೂರು:</strong> ಗ್ರಾಮದೇವತೆ ಕೆಂಪಮ್ಮ ದೇವಿ ಜಾತ್ರೆ ಅಂಗವಾಗಿ ಭಾನುವಾರ ಮಳೆಯ ನಡುವೆ ರಥೋತ್ಸವ ನೆರವೇರಿತು.</p>.<p>ಮೇ 14ರಿಂದ 18ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಭಾನುವಾರ ರಥೋತ್ಸವ ನಡೆಯಿತು. ರಾತ್ರಿ ಸಿಡಿ ಉತ್ಸವ, ಉಯ್ಯಾಲೆ ಉತ್ಸವ ನಡೆಯಿತು.</p>.<p>ರಥಕ್ಕೆ ಭಕ್ತರು ಬಾಳೇಹಣ್ಣು, ತೆಂಗಿನಕಾಯಿ, ಮೆಣಸು, ಹಣವನ್ನು ಅರ್ಪಿಸಿದರು. ಯುವಕರು ಬಾಳೆಹಣ್ಣಿನ ಮೇಲೆ ‘ಆರ್ಸಿಬಿ ಈ ಬಾರಿ ಕಪ್ ಗೆಲ್ಲಲಿ’ ಎಂಬ ಬರಹಗಳನ್ನು ಬರೆದು ರಥಕ್ಕೆ ಅರ್ಪಿಸಿದರು.</p>.<p>ರಥೋತ್ಸವದಲ್ಲಿ ಧೂತರಾಯನ ಕುಣಿತ ಸೇರಿದಂತೆ ವಿವಿಧ ಜನಪದ ಕಲಾತಂಡಗಳು ಭಾಗವಹಿಸಿದ್ದು ಜಾತ್ರೆಯ ಮೆರುಗು ಹೆಚ್ಚಿಸಿತು.</p>.<p>ರಥೋತ್ಸವ ಅಂಗವಾಗಿ ಭಾನುವಾರ ಲೋಕೇಶ್ವರ ಅಭಿಮಾನಿ ಬಳಗ, ಕೋಡಿ ಸರ್ಕಲ್, ಅರಳೀಕಟ್ಟೆ ಸಿದ್ಧಿವಿನಾಯಕ ಸೇವಾ ಸಂಘದಿಂದ ಕಲ್ಲೇಶ್ವರ ದೇವಾಲಯದ ಆವರಣದಲ್ಲಿ ಅನ್ನಸಂತರ್ಪಣೆ ಏರ್ಪಡಿಸಲಾಗುತ್ತಿತ್ತು. ಆದರೆ ಈ ಬಾರಿ ಚುನಾವಣಾ ನೀತಿ ಸಂಹಿತೆ ಇರುವುದರಿಂದ ತಾಲ್ಲೂಕು ಆಡಳಿತದಿಂದ ಅನುಮತಿ ದೊರೆಯದ ಕಾರಣ ಅನ್ನಸಂತರ್ಪಣೆಯನ್ನು ಸ್ಥಗಿತಗೊಳಿಸಲಾಗಿತ್ತು.</p>.<p>ಮಾಜಿ ಸಚಿವ ಬಿ.ಸಿ.ನಾಗೇಶ್, ದೇಗುಲ ಸಮಿತಿಯ ಚಂದ್ರಶೇಖರ್, ಶ್ರೀಕಂಠ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು:</strong> ಗ್ರಾಮದೇವತೆ ಕೆಂಪಮ್ಮ ದೇವಿ ಜಾತ್ರೆ ಅಂಗವಾಗಿ ಭಾನುವಾರ ಮಳೆಯ ನಡುವೆ ರಥೋತ್ಸವ ನೆರವೇರಿತು.</p>.<p>ಮೇ 14ರಿಂದ 18ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಭಾನುವಾರ ರಥೋತ್ಸವ ನಡೆಯಿತು. ರಾತ್ರಿ ಸಿಡಿ ಉತ್ಸವ, ಉಯ್ಯಾಲೆ ಉತ್ಸವ ನಡೆಯಿತು.</p>.<p>ರಥಕ್ಕೆ ಭಕ್ತರು ಬಾಳೇಹಣ್ಣು, ತೆಂಗಿನಕಾಯಿ, ಮೆಣಸು, ಹಣವನ್ನು ಅರ್ಪಿಸಿದರು. ಯುವಕರು ಬಾಳೆಹಣ್ಣಿನ ಮೇಲೆ ‘ಆರ್ಸಿಬಿ ಈ ಬಾರಿ ಕಪ್ ಗೆಲ್ಲಲಿ’ ಎಂಬ ಬರಹಗಳನ್ನು ಬರೆದು ರಥಕ್ಕೆ ಅರ್ಪಿಸಿದರು.</p>.<p>ರಥೋತ್ಸವದಲ್ಲಿ ಧೂತರಾಯನ ಕುಣಿತ ಸೇರಿದಂತೆ ವಿವಿಧ ಜನಪದ ಕಲಾತಂಡಗಳು ಭಾಗವಹಿಸಿದ್ದು ಜಾತ್ರೆಯ ಮೆರುಗು ಹೆಚ್ಚಿಸಿತು.</p>.<p>ರಥೋತ್ಸವ ಅಂಗವಾಗಿ ಭಾನುವಾರ ಲೋಕೇಶ್ವರ ಅಭಿಮಾನಿ ಬಳಗ, ಕೋಡಿ ಸರ್ಕಲ್, ಅರಳೀಕಟ್ಟೆ ಸಿದ್ಧಿವಿನಾಯಕ ಸೇವಾ ಸಂಘದಿಂದ ಕಲ್ಲೇಶ್ವರ ದೇವಾಲಯದ ಆವರಣದಲ್ಲಿ ಅನ್ನಸಂತರ್ಪಣೆ ಏರ್ಪಡಿಸಲಾಗುತ್ತಿತ್ತು. ಆದರೆ ಈ ಬಾರಿ ಚುನಾವಣಾ ನೀತಿ ಸಂಹಿತೆ ಇರುವುದರಿಂದ ತಾಲ್ಲೂಕು ಆಡಳಿತದಿಂದ ಅನುಮತಿ ದೊರೆಯದ ಕಾರಣ ಅನ್ನಸಂತರ್ಪಣೆಯನ್ನು ಸ್ಥಗಿತಗೊಳಿಸಲಾಗಿತ್ತು.</p>.<p>ಮಾಜಿ ಸಚಿವ ಬಿ.ಸಿ.ನಾಗೇಶ್, ದೇಗುಲ ಸಮಿತಿಯ ಚಂದ್ರಶೇಖರ್, ಶ್ರೀಕಂಠ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>