ರಥೋತ್ಸವ ಅಂಗವಾಗಿ ಭಾನುವಾರ ಲೋಕೇಶ್ವರ ಅಭಿಮಾನಿ ಬಳಗ, ಕೋಡಿ ಸರ್ಕಲ್, ಅರಳೀಕಟ್ಟೆ ಸಿದ್ಧಿವಿನಾಯಕ ಸೇವಾ ಸಂಘದಿಂದ ಕಲ್ಲೇಶ್ವರ ದೇವಾಲಯದ ಆವರಣದಲ್ಲಿ ಅನ್ನಸಂತರ್ಪಣೆ ಏರ್ಪಡಿಸಲಾಗುತ್ತಿತ್ತು. ಆದರೆ ಈ ಬಾರಿ ಚುನಾವಣಾ ನೀತಿ ಸಂಹಿತೆ ಇರುವುದರಿಂದ ತಾಲ್ಲೂಕು ಆಡಳಿತದಿಂದ ಅನುಮತಿ ದೊರೆಯದ ಕಾರಣ ಅನ್ನಸಂತರ್ಪಣೆಯನ್ನು ಸ್ಥಗಿತಗೊಳಿಸಲಾಗಿತ್ತು.