<p><strong>ಶಿರಾ</strong>: ನಾಡಪ್ರಭು ಕೆಂಪೇಗೌಡರ ಆಡಳಿತ ಇಂದಿನ ಯುವಕರಿಗೆ ಆದರ್ಶವಾಗಬೇಕು ಎಂದು ಸ್ಫಟಿಕಪುರಿ ಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಪಟ್ಟನಾಯಕನಹಳ್ಳಿ ಜಾತ್ರಾ ಮಹೋತ್ಸವದ ವಸ್ತು ಪ್ರದರ್ಶನದ ವೇದಿಕೆಯಲ್ಲಿ ಗುರುವಾರ ಕೆಂಪೇಗೌಡ ಸಾಮ್ರಾಜ್ಯ ಸ್ಥಾಪನೆ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಜಗತ್ತಿನ ಭೂಪಟದಲ್ಲಿ ಬೆಂಗಳೂರ ನಗರ ಕಂಗೊಳಿಸುವಂತೆ ಮಾಡಿದ ನಾಡಪ್ರಭು ಕೆಂಪೇಗೌಡರ ಪಠ್ಯಕ್ರಮಗಳನ್ನು ಸರ್ಕಾರ ಎಲ್ಕೆಜಿಯಿಂದ ಪದವಿವರೆಗೂ ಅಳವಡಿಸಬೇಕು. ‘ನಮ್ಮ ಮೆಟ್ರೊ’ಗೆ ಕೆಂಪೇಗೌಡ ಮೆಟ್ರೊ ಎಂದು ನಾಮಕರಣ ಮಾಡಬೇಕು ಎಂದರು.</p>.<p>ಮದಲೂರು ನರಸಿಂಹಮೂರ್ತಿ, ನಾದೂರು ಗ್ರಾ.ಪಂ ಅಧ್ಯಕ್ಷ ತುಳಸಿ ಮಧುಸೂದನ್, ಮಾಜಿ ಅಧ್ಯಕ್ಷೆ ಮೆಹರ್ ತಾಜ್ ಬಾಬು, ತಾ.ಪಂ ಮಾಜಿ ಸದಸ್ಯ ಕೆ.ಎಂ.ಶ್ರೀನಿವಾಸ್, ಕುಮಾರ್, ಪೂಜಾರ ಮುದ್ದನಹಳ್ಳಿ ಮುದ್ದರಾಜು, ಶಿವಣ್ಣ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ</strong>: ನಾಡಪ್ರಭು ಕೆಂಪೇಗೌಡರ ಆಡಳಿತ ಇಂದಿನ ಯುವಕರಿಗೆ ಆದರ್ಶವಾಗಬೇಕು ಎಂದು ಸ್ಫಟಿಕಪುರಿ ಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಪಟ್ಟನಾಯಕನಹಳ್ಳಿ ಜಾತ್ರಾ ಮಹೋತ್ಸವದ ವಸ್ತು ಪ್ರದರ್ಶನದ ವೇದಿಕೆಯಲ್ಲಿ ಗುರುವಾರ ಕೆಂಪೇಗೌಡ ಸಾಮ್ರಾಜ್ಯ ಸ್ಥಾಪನೆ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಜಗತ್ತಿನ ಭೂಪಟದಲ್ಲಿ ಬೆಂಗಳೂರ ನಗರ ಕಂಗೊಳಿಸುವಂತೆ ಮಾಡಿದ ನಾಡಪ್ರಭು ಕೆಂಪೇಗೌಡರ ಪಠ್ಯಕ್ರಮಗಳನ್ನು ಸರ್ಕಾರ ಎಲ್ಕೆಜಿಯಿಂದ ಪದವಿವರೆಗೂ ಅಳವಡಿಸಬೇಕು. ‘ನಮ್ಮ ಮೆಟ್ರೊ’ಗೆ ಕೆಂಪೇಗೌಡ ಮೆಟ್ರೊ ಎಂದು ನಾಮಕರಣ ಮಾಡಬೇಕು ಎಂದರು.</p>.<p>ಮದಲೂರು ನರಸಿಂಹಮೂರ್ತಿ, ನಾದೂರು ಗ್ರಾ.ಪಂ ಅಧ್ಯಕ್ಷ ತುಳಸಿ ಮಧುಸೂದನ್, ಮಾಜಿ ಅಧ್ಯಕ್ಷೆ ಮೆಹರ್ ತಾಜ್ ಬಾಬು, ತಾ.ಪಂ ಮಾಜಿ ಸದಸ್ಯ ಕೆ.ಎಂ.ಶ್ರೀನಿವಾಸ್, ಕುಮಾರ್, ಪೂಜಾರ ಮುದ್ದನಹಳ್ಳಿ ಮುದ್ದರಾಜು, ಶಿವಣ್ಣ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>