ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: 'ರಾಜೀವ ಭವನ' ಉದ್ಘಾಟಿಸಿದ ಖರ್ಗೆ

Last Updated 5 ಮಾರ್ಚ್ 2023, 9:54 IST
ಅಕ್ಷರ ಗಾತ್ರ

ತುಮಕೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೊರಟಗೆರೆ ಪಟ್ಟಣದಲ್ಲಿ ಭಾನುವಾರ ಕಾಂಗ್ರೆಸ್ ಕಚೇರಿ 'ರಾಜೀವ ಭವನ' ಉದ್ಘಾಟಿಸಿ, ಕಾಂಗ್ರೆಸ್ ಜಿಲ್ಲಾ ಸಮಾವೇಶಕ್ಕೆ ಚಾಲನೆ ನೀಡಿದರು.

ಪಟ್ಟಣಕ್ಕೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕ ಡಾ.ಜಿ.ಪರಮೇಶ್ವರ ಖರ್ಗೆ ಅವರಿಗೆ ಸಾಥ್ ನೀಡಿದರು.

ಶಾಸಕ ವೆಂಕಟರಮಣಪ್ಪ, ಮುಖಂಡರಾದ ಕೆ.ಎಚ್. ಮುನಿಯಪ್ಪ, ಕೆ.ಎನ್. ರಾಜಣ್ಣ, ಎಚ್.ಆಂಜನೇಯ, ಚಂದ್ರಶೇಖರ್ ಗೌಡ ಇತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT