<p><strong>ಗುಬ್ಬಿ</strong>: ತಾಲ್ಲೂಕಿನ ಕಸಬಾ ಹೋಬಳಿ ಕಿಟ್ಟದಕುಪ್ಪೆ ಸರ್ಕಾರಿ ಶಾಲೆ ಆವರಣಕ್ಕೆ ಶುಕ್ರವಾರ ಗ್ರಾಮಸ್ಥರೇ ಕಾಂಕ್ರೀಟ್ ಹಾಕಿಸಿದರು.</p>.<p>ಕಾಂಕ್ರೀಟ್ ಹಾಕಿಸುವಂತೆ ಹಲವು ಬಾರಿ ಶಿಕ್ಷಣ ಇಲಾಖೆ ಹಾಗೂ ಜನಪ್ರತಿನಿಧಿಗಳಿಗೆ ಸ್ಥಳೀಯರು ಮನವಿ ಮಾಡಿದ್ದರು. ಆದರೆ ಜಲ್ಲಿಕಲ್ಲು ಮಾತ್ರ ಹಾಕಲಾಗಿತ್ತು. ಇದರಿಂದಾಗಿ ಅನೇಕ ಮಕ್ಕಳು ಎಡವಿ ಬಿದ್ದು ಗಾಯಮಾಡಿಕೊಂಡಿದ್ದರು. ಇದರಿಂದಾಗಿ ಗ್ರಾಮಸ್ಥರೇ ಕಾಂಕ್ರಿಟ್ ಹಾಕಿದ್ದಾರೆ.</p>.<p>ಗ್ರಾಮದ ಸರ್ಕಾರಿ ಶಾಲೆಯನ್ನು ಉಳಿಸಿಕೊಳ್ಳಬೇಕಿದೆ. ಆರ್ಥಿಕವಾಗಿ ಹಿಂದುಳಿದ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸಲು ಸಾಧ್ಯವಾಗುವುದಿಲ್ಲ. ಮಕ್ಕಳು ಶಿಕ್ಷಣದಿಂದ ವಂಚಿತರಾಗುವವರು ಎಂದು ಗ್ರಾಮಸ್ಥರು ಹೇಳಿದರು.</p>.<p>50 ವರ್ಷಗಳ ಇತಿಹಾಸವಿರುವ ಗ್ರಾಮದ ಸರ್ಕಾರಿ ಶಾಲೆಯಲ್ಲಿ 65 ಮಕ್ಕಳು ಕಲಿಯುತ್ತಿದ್ದಾರೆ. ಶಾಲಾ ಆವರಣದಲ್ಲಿ ಜಲ್ಲಿಕಲ್ಲು ಇದ್ದುದರಿಂದ ಮಕ್ಕಳು ತಿರುಗಾಡಲು ಭಯಪಡುವಂತಾಗಿತ್ತು. ಶಾಲೆಯ ಹಳೆಯ ವಿದ್ಯಾರ್ಥಿಗಳು ಹಾಗೂ ಕೆಲವು ಪೋಷಕರು ಒಟ್ಟಾಗಿ ದಾನಿಗಳ ಸಹಾಯ ಪಡೆದು ಕಾಂಕ್ರೀಟ್ ಹಾಕಿಸಿದ್ದಾರೆ.</p>.<p>ಶಾಲೆ ಆವರಣದಲ್ಲಿನ ಹಳೆಯ ಕೊಠಡಿ ಬೀಳುವ ಸ್ಥಿತಿಯಲ್ಲಿದೆ. ಅಧಿಕಾರಿಗಳು ತುರ್ತುಕ್ರಮ ಕೈಗೊಂಡು ಹಾಳಾಗಿರುವ ಕೊಠಡಿ ಕೆಡವಿ ಹೊಸ ಕೊಠಡಿ ನಿರ್ಮಿಸಲು ಮುಂದಾಗಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ. </p>
<p><strong>ಗುಬ್ಬಿ</strong>: ತಾಲ್ಲೂಕಿನ ಕಸಬಾ ಹೋಬಳಿ ಕಿಟ್ಟದಕುಪ್ಪೆ ಸರ್ಕಾರಿ ಶಾಲೆ ಆವರಣಕ್ಕೆ ಶುಕ್ರವಾರ ಗ್ರಾಮಸ್ಥರೇ ಕಾಂಕ್ರೀಟ್ ಹಾಕಿಸಿದರು.</p>.<p>ಕಾಂಕ್ರೀಟ್ ಹಾಕಿಸುವಂತೆ ಹಲವು ಬಾರಿ ಶಿಕ್ಷಣ ಇಲಾಖೆ ಹಾಗೂ ಜನಪ್ರತಿನಿಧಿಗಳಿಗೆ ಸ್ಥಳೀಯರು ಮನವಿ ಮಾಡಿದ್ದರು. ಆದರೆ ಜಲ್ಲಿಕಲ್ಲು ಮಾತ್ರ ಹಾಕಲಾಗಿತ್ತು. ಇದರಿಂದಾಗಿ ಅನೇಕ ಮಕ್ಕಳು ಎಡವಿ ಬಿದ್ದು ಗಾಯಮಾಡಿಕೊಂಡಿದ್ದರು. ಇದರಿಂದಾಗಿ ಗ್ರಾಮಸ್ಥರೇ ಕಾಂಕ್ರಿಟ್ ಹಾಕಿದ್ದಾರೆ.</p>.<p>ಗ್ರಾಮದ ಸರ್ಕಾರಿ ಶಾಲೆಯನ್ನು ಉಳಿಸಿಕೊಳ್ಳಬೇಕಿದೆ. ಆರ್ಥಿಕವಾಗಿ ಹಿಂದುಳಿದ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸಲು ಸಾಧ್ಯವಾಗುವುದಿಲ್ಲ. ಮಕ್ಕಳು ಶಿಕ್ಷಣದಿಂದ ವಂಚಿತರಾಗುವವರು ಎಂದು ಗ್ರಾಮಸ್ಥರು ಹೇಳಿದರು.</p>.<p>50 ವರ್ಷಗಳ ಇತಿಹಾಸವಿರುವ ಗ್ರಾಮದ ಸರ್ಕಾರಿ ಶಾಲೆಯಲ್ಲಿ 65 ಮಕ್ಕಳು ಕಲಿಯುತ್ತಿದ್ದಾರೆ. ಶಾಲಾ ಆವರಣದಲ್ಲಿ ಜಲ್ಲಿಕಲ್ಲು ಇದ್ದುದರಿಂದ ಮಕ್ಕಳು ತಿರುಗಾಡಲು ಭಯಪಡುವಂತಾಗಿತ್ತು. ಶಾಲೆಯ ಹಳೆಯ ವಿದ್ಯಾರ್ಥಿಗಳು ಹಾಗೂ ಕೆಲವು ಪೋಷಕರು ಒಟ್ಟಾಗಿ ದಾನಿಗಳ ಸಹಾಯ ಪಡೆದು ಕಾಂಕ್ರೀಟ್ ಹಾಕಿಸಿದ್ದಾರೆ.</p>.<p>ಶಾಲೆ ಆವರಣದಲ್ಲಿನ ಹಳೆಯ ಕೊಠಡಿ ಬೀಳುವ ಸ್ಥಿತಿಯಲ್ಲಿದೆ. ಅಧಿಕಾರಿಗಳು ತುರ್ತುಕ್ರಮ ಕೈಗೊಂಡು ಹಾಳಾಗಿರುವ ಕೊಠಡಿ ಕೆಡವಿ ಹೊಸ ಕೊಠಡಿ ನಿರ್ಮಿಸಲು ಮುಂದಾಗಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ. </p>