<p><strong>ಗುಬ್ಬಿ</strong>: ತಾಲ್ಲೂಕಿನ ಕಸಬಾ ಹೋಬಳಿ ಕಿಟ್ಟದಕುಪ್ಪೆ ಸರ್ಕಾರಿ ಶಾಲೆ ಆವರಣಕ್ಕೆ ಶುಕ್ರವಾರ ಗ್ರಾಮಸ್ಥರೇ ಕಾಂಕ್ರೀಟ್ ಹಾಕಿಸಿದರು.</p>.<p>ಕಾಂಕ್ರೀಟ್ ಹಾಕಿಸುವಂತೆ ಹಲವು ಬಾರಿ ಶಿಕ್ಷಣ ಇಲಾಖೆ ಹಾಗೂ ಜನಪ್ರತಿನಿಧಿಗಳಿಗೆ ಸ್ಥಳೀಯರು ಮನವಿ ಮಾಡಿದ್ದರು. ಆದರೆ ಜಲ್ಲಿಕಲ್ಲು ಮಾತ್ರ ಹಾಕಲಾಗಿತ್ತು. ಇದರಿಂದಾಗಿ ಅನೇಕ ಮಕ್ಕಳು ಎಡವಿ ಬಿದ್ದು ಗಾಯಮಾಡಿಕೊಂಡಿದ್ದರು. ಇದರಿಂದಾಗಿ ಗ್ರಾಮಸ್ಥರೇ ಕಾಂಕ್ರಿಟ್ ಹಾಕಿದ್ದಾರೆ.</p>.<p>ಗ್ರಾಮದ ಸರ್ಕಾರಿ ಶಾಲೆಯನ್ನು ಉಳಿಸಿಕೊಳ್ಳಬೇಕಿದೆ. ಆರ್ಥಿಕವಾಗಿ ಹಿಂದುಳಿದ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸಲು ಸಾಧ್ಯವಾಗುವುದಿಲ್ಲ. ಮಕ್ಕಳು ಶಿಕ್ಷಣದಿಂದ ವಂಚಿತರಾಗುವವರು ಎಂದು ಗ್ರಾಮಸ್ಥರು ಹೇಳಿದರು.</p>.<p>50 ವರ್ಷಗಳ ಇತಿಹಾಸವಿರುವ ಗ್ರಾಮದ ಸರ್ಕಾರಿ ಶಾಲೆಯಲ್ಲಿ 65 ಮಕ್ಕಳು ಕಲಿಯುತ್ತಿದ್ದಾರೆ. ಶಾಲಾ ಆವರಣದಲ್ಲಿ ಜಲ್ಲಿಕಲ್ಲು ಇದ್ದುದರಿಂದ ಮಕ್ಕಳು ತಿರುಗಾಡಲು ಭಯಪಡುವಂತಾಗಿತ್ತು. ಶಾಲೆಯ ಹಳೆಯ ವಿದ್ಯಾರ್ಥಿಗಳು ಹಾಗೂ ಕೆಲವು ಪೋಷಕರು ಒಟ್ಟಾಗಿ ದಾನಿಗಳ ಸಹಾಯ ಪಡೆದು ಕಾಂಕ್ರೀಟ್ ಹಾಕಿಸಿದ್ದಾರೆ.</p>.<p>ಶಾಲೆ ಆವರಣದಲ್ಲಿನ ಹಳೆಯ ಕೊಠಡಿ ಬೀಳುವ ಸ್ಥಿತಿಯಲ್ಲಿದೆ. ಅಧಿಕಾರಿಗಳು ತುರ್ತುಕ್ರಮ ಕೈಗೊಂಡು ಹಾಳಾಗಿರುವ ಕೊಠಡಿ ಕೆಡವಿ ಹೊಸ ಕೊಠಡಿ ನಿರ್ಮಿಸಲು ಮುಂದಾಗಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಬ್ಬಿ</strong>: ತಾಲ್ಲೂಕಿನ ಕಸಬಾ ಹೋಬಳಿ ಕಿಟ್ಟದಕುಪ್ಪೆ ಸರ್ಕಾರಿ ಶಾಲೆ ಆವರಣಕ್ಕೆ ಶುಕ್ರವಾರ ಗ್ರಾಮಸ್ಥರೇ ಕಾಂಕ್ರೀಟ್ ಹಾಕಿಸಿದರು.</p>.<p>ಕಾಂಕ್ರೀಟ್ ಹಾಕಿಸುವಂತೆ ಹಲವು ಬಾರಿ ಶಿಕ್ಷಣ ಇಲಾಖೆ ಹಾಗೂ ಜನಪ್ರತಿನಿಧಿಗಳಿಗೆ ಸ್ಥಳೀಯರು ಮನವಿ ಮಾಡಿದ್ದರು. ಆದರೆ ಜಲ್ಲಿಕಲ್ಲು ಮಾತ್ರ ಹಾಕಲಾಗಿತ್ತು. ಇದರಿಂದಾಗಿ ಅನೇಕ ಮಕ್ಕಳು ಎಡವಿ ಬಿದ್ದು ಗಾಯಮಾಡಿಕೊಂಡಿದ್ದರು. ಇದರಿಂದಾಗಿ ಗ್ರಾಮಸ್ಥರೇ ಕಾಂಕ್ರಿಟ್ ಹಾಕಿದ್ದಾರೆ.</p>.<p>ಗ್ರಾಮದ ಸರ್ಕಾರಿ ಶಾಲೆಯನ್ನು ಉಳಿಸಿಕೊಳ್ಳಬೇಕಿದೆ. ಆರ್ಥಿಕವಾಗಿ ಹಿಂದುಳಿದ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸಲು ಸಾಧ್ಯವಾಗುವುದಿಲ್ಲ. ಮಕ್ಕಳು ಶಿಕ್ಷಣದಿಂದ ವಂಚಿತರಾಗುವವರು ಎಂದು ಗ್ರಾಮಸ್ಥರು ಹೇಳಿದರು.</p>.<p>50 ವರ್ಷಗಳ ಇತಿಹಾಸವಿರುವ ಗ್ರಾಮದ ಸರ್ಕಾರಿ ಶಾಲೆಯಲ್ಲಿ 65 ಮಕ್ಕಳು ಕಲಿಯುತ್ತಿದ್ದಾರೆ. ಶಾಲಾ ಆವರಣದಲ್ಲಿ ಜಲ್ಲಿಕಲ್ಲು ಇದ್ದುದರಿಂದ ಮಕ್ಕಳು ತಿರುಗಾಡಲು ಭಯಪಡುವಂತಾಗಿತ್ತು. ಶಾಲೆಯ ಹಳೆಯ ವಿದ್ಯಾರ್ಥಿಗಳು ಹಾಗೂ ಕೆಲವು ಪೋಷಕರು ಒಟ್ಟಾಗಿ ದಾನಿಗಳ ಸಹಾಯ ಪಡೆದು ಕಾಂಕ್ರೀಟ್ ಹಾಕಿಸಿದ್ದಾರೆ.</p>.<p>ಶಾಲೆ ಆವರಣದಲ್ಲಿನ ಹಳೆಯ ಕೊಠಡಿ ಬೀಳುವ ಸ್ಥಿತಿಯಲ್ಲಿದೆ. ಅಧಿಕಾರಿಗಳು ತುರ್ತುಕ್ರಮ ಕೈಗೊಂಡು ಹಾಳಾಗಿರುವ ಕೊಠಡಿ ಕೆಡವಿ ಹೊಸ ಕೊಠಡಿ ನಿರ್ಮಿಸಲು ಮುಂದಾಗಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>