<p><strong>ತುಮಕೂರು</strong>: ಸಹಕಾರ ಸಚಿವರಾಗಿದ್ದ ಕೆ.ಎನ್.ರಾಜಣ್ಣ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಬೃಹತ್ ಹೋರಾಟ ರೂಪಿಸಲಾಗುವುದು ಎಂದು ವಾಲ್ಮೀಕಿ ಸಮುದಾಯದ ಮುಖಂಡರು ಇಲ್ಲಿ ಮಂಗಳವಾರ ಎಚ್ಚರಿಸಿದ್ದಾರೆ.</p>.<p>‘ಆ. 13ರಂದು ನಗರದ ಟೌನ್ಹಾಲ್ ಬಳಿ ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯದಿಂದ ಪ್ರತಿಭಟನೆ ನಡೆಸಲಾಗುವುದು. ಎರಡು ದಿನದಲ್ಲಿ ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ಇಲ್ಲದಿದ್ದರೆ ಹೋರಾಟ ಮುಂದುವರಿಸಲಾಗುವುದು’ ಎಂದು ಮುಖಂಡ ಸಿಂಗದಹಳ್ಳಿ ರಾಜಕುಮಾರ್ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>ವಾಲ್ಮೀಕಿ ಸಮುದಾಯದ ಇಬ್ಬರು ಸಚಿವರು ಸಂಪುಟದಿಂದ ಹೊರ ಬಂದಿದ್ದಾರೆ. ಇದರಿಂದ ಸಮಾಜಕ್ಕೆ ಆಘಾತವಾಗಿದೆ. ಕೂಡಲೇ ರಾಜಣ್ಣ ಅವರನ್ನು ಸಚಿವರನ್ನಾಗಿ ಮುಂದುವರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಇದಕ್ಕೆ ಬೆಲೆ ತೆರಬೇಕಾಗುತ್ತದೆ. ನವದೆಹಲಿಗೆ ನಿಯೋಗ ತೆರಳಿ ಹೈಕಮಾಂಡ್ ನಾಯಕರಲ್ಲೂ ಮನವಿ ಮಾಡಲಾಗುವುದು ಎಂದರು.</p>.<p>ಮಾಜಿ ಮೇಯರ್ ಬಿ.ಜಿ.ಕೃಷ್ಣಪ್ಪ, ವಾಲ್ಮೀಕಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪುರುಷೋತ್ತಮ, ಮುಖಂಡರಾದ ರಾಮಚಂದ್ರಯ್ಯ, ಲಕ್ಷ್ಮಿನಾರಾಯಣ, ಸರಸ್ವತಿ, ಪ್ರತಾಪ್ ಮದಕರಿ, ಪಿ.ಪಿ.ಬಸವರಾಜು, ಕೆಂಪಹನುಮಯ್ಯ, ಸೀತಕಲ್ಲು ಕೃಷ್ಣಯ್ಯ, ಕುಪ್ಪೂರು ಶ್ರೀಧರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಸಹಕಾರ ಸಚಿವರಾಗಿದ್ದ ಕೆ.ಎನ್.ರಾಜಣ್ಣ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಬೃಹತ್ ಹೋರಾಟ ರೂಪಿಸಲಾಗುವುದು ಎಂದು ವಾಲ್ಮೀಕಿ ಸಮುದಾಯದ ಮುಖಂಡರು ಇಲ್ಲಿ ಮಂಗಳವಾರ ಎಚ್ಚರಿಸಿದ್ದಾರೆ.</p>.<p>‘ಆ. 13ರಂದು ನಗರದ ಟೌನ್ಹಾಲ್ ಬಳಿ ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯದಿಂದ ಪ್ರತಿಭಟನೆ ನಡೆಸಲಾಗುವುದು. ಎರಡು ದಿನದಲ್ಲಿ ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ಇಲ್ಲದಿದ್ದರೆ ಹೋರಾಟ ಮುಂದುವರಿಸಲಾಗುವುದು’ ಎಂದು ಮುಖಂಡ ಸಿಂಗದಹಳ್ಳಿ ರಾಜಕುಮಾರ್ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>ವಾಲ್ಮೀಕಿ ಸಮುದಾಯದ ಇಬ್ಬರು ಸಚಿವರು ಸಂಪುಟದಿಂದ ಹೊರ ಬಂದಿದ್ದಾರೆ. ಇದರಿಂದ ಸಮಾಜಕ್ಕೆ ಆಘಾತವಾಗಿದೆ. ಕೂಡಲೇ ರಾಜಣ್ಣ ಅವರನ್ನು ಸಚಿವರನ್ನಾಗಿ ಮುಂದುವರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಇದಕ್ಕೆ ಬೆಲೆ ತೆರಬೇಕಾಗುತ್ತದೆ. ನವದೆಹಲಿಗೆ ನಿಯೋಗ ತೆರಳಿ ಹೈಕಮಾಂಡ್ ನಾಯಕರಲ್ಲೂ ಮನವಿ ಮಾಡಲಾಗುವುದು ಎಂದರು.</p>.<p>ಮಾಜಿ ಮೇಯರ್ ಬಿ.ಜಿ.ಕೃಷ್ಣಪ್ಪ, ವಾಲ್ಮೀಕಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪುರುಷೋತ್ತಮ, ಮುಖಂಡರಾದ ರಾಮಚಂದ್ರಯ್ಯ, ಲಕ್ಷ್ಮಿನಾರಾಯಣ, ಸರಸ್ವತಿ, ಪ್ರತಾಪ್ ಮದಕರಿ, ಪಿ.ಪಿ.ಬಸವರಾಜು, ಕೆಂಪಹನುಮಯ್ಯ, ಸೀತಕಲ್ಲು ಕೃಷ್ಣಯ್ಯ, ಕುಪ್ಪೂರು ಶ್ರೀಧರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>