ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ನಿರೀಕ್ಷಿತ ಫಲಿತಾಂಶ ಬಂದಿದೆ. ಎಸ್.ಪಿ.ಮುದ್ದಹನುಮೇಗೌಡ ಅವರು ಸಜ್ಜನರು. ಅವರೂ ಒಕ್ಕಲಿಗರು. ಆದರೆ ಅವರಿಗೆ ಟಿಕೆಟ್ ತಪ್ಪಿಸಿ ದೇವೇಗೌಡರು ನಿಂತರು. ಮುದ್ದಹನುಮೇಗೌಡ ಅವರಿಗೆ ಟಿಕೆಟ್ ತಪ್ಪಿಸಿದ ಕಾರಣಕ್ಕೆ ದೇವೇಗೌಡರು ಸೋಲಬೇಕಾಯಿತು ಎಂದು ಮಧುಗಿರಿಯ ಮಾಜಿ ಶಾಸಕ ಕೆ.ಎನ್.ರಾಜಣ್ಣ ಮಾಧ್ಯಮಗಳಿಗೆ ತಿಳಿಸಿದರು.