<p><strong>ಕೊಡಿಗೇನಹಳ್ಳಿ:</strong> ಹೋಬಳಿಯ ದೊಡ್ಡಮಾಲ್ಲೂರು ಗ್ರಾಮದಲ್ಲಿ 30 ವರ್ಷದಿಂದ ಸಾಗುವಳಿ ಮಾಡುತ್ತಿದ್ದ ರೈತರಿಗೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮದ ಕೆಲವರಿಂದ ವಂಚನೆಯಾಗಿದೆ ಎಂದು ಆರೋಪಿಸಿ ದೊಡ್ಡಮಾಲೂರಿನ ಕೆಲವು ರೈತರು ಶುಕ್ರವಾರ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ದೂರು ಸಲ್ಲಿಸಿದರು.</p>.<p>ರೈತ ಪಟೇಲ್ ಸಂಜೀವ್ ಗೌಡ ಮಾತನಾಡಿ, ದೊಡ್ಡಮಾಲ್ಲೂರು ಗ್ರಾಮದ ಹೊರವಲಯದಲ್ಲಿರುವ ಸರ್ಕಾರಿ ಗೋಮಾಳದಲ್ಲಿ ಸಾಗುವಳಿ ಮಾಡಿಕೊಂಡು ಬರುತ್ತಿದ್ದ ಹಲವು ರೈತರ ಜಮೀನಿಗೆ ಕೆಲವರು ನಕಲಿ ದಾಖಲೆ ಸೃಷ್ಟಿಸಿಕೊಂಡು 16 ಏಕರೆ ಜಮೀನು ಮಾರಾಟಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ.<br><br>ರೈತ ನಟರಾಜು ಮಾತನಾಡಿ, ಈ ಭಾಗದ 500 ಏಕರೆ ಜಾಗದ ದಾಖಲೆ ಇಲ್ಲವೆಂದು ಕಂದಾಯ ಇಲಾಖೆ ಅಧಿಕಾರಿಗಳು ಕೆಲ ಸರ್ವೆ ನಂಬರ್ಗಳಿಗೆ ನಕಲಿ ದಾಖಲೆಗಳು ಸೃಷ್ಟಿಸಿ ಖಾತೆ ಪಹಣಿ ಮಾಡಿದ್ದಾರೆ. ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ವೆಂಕಟಪ್ಪ, ಗೋವಿಂದಪ್ಪ, ಅಂಜಿನಪ್ಪ, ಹನುಮಂತರಾಯ, ಲಿಂಗಪ್ಪ, ಕೃಷ್ಣಪ್ಪ, ಗೋಪಾಲ್, ಹರಿಪ್ರಸಾದ್, ರಾಮಾಂಜಿ, ರಾಮಕೃಷ್ಣಯ್ಯ, ಯಲ್ಲಪ್ಪ, ಅಂಜಪ್ಪ, ಸಂಜೀವಮೂರ್ತಿ, ಬಾಲು, ಬಲರಾಮು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಡಿಗೇನಹಳ್ಳಿ:</strong> ಹೋಬಳಿಯ ದೊಡ್ಡಮಾಲ್ಲೂರು ಗ್ರಾಮದಲ್ಲಿ 30 ವರ್ಷದಿಂದ ಸಾಗುವಳಿ ಮಾಡುತ್ತಿದ್ದ ರೈತರಿಗೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮದ ಕೆಲವರಿಂದ ವಂಚನೆಯಾಗಿದೆ ಎಂದು ಆರೋಪಿಸಿ ದೊಡ್ಡಮಾಲೂರಿನ ಕೆಲವು ರೈತರು ಶುಕ್ರವಾರ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ದೂರು ಸಲ್ಲಿಸಿದರು.</p>.<p>ರೈತ ಪಟೇಲ್ ಸಂಜೀವ್ ಗೌಡ ಮಾತನಾಡಿ, ದೊಡ್ಡಮಾಲ್ಲೂರು ಗ್ರಾಮದ ಹೊರವಲಯದಲ್ಲಿರುವ ಸರ್ಕಾರಿ ಗೋಮಾಳದಲ್ಲಿ ಸಾಗುವಳಿ ಮಾಡಿಕೊಂಡು ಬರುತ್ತಿದ್ದ ಹಲವು ರೈತರ ಜಮೀನಿಗೆ ಕೆಲವರು ನಕಲಿ ದಾಖಲೆ ಸೃಷ್ಟಿಸಿಕೊಂಡು 16 ಏಕರೆ ಜಮೀನು ಮಾರಾಟಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ.<br><br>ರೈತ ನಟರಾಜು ಮಾತನಾಡಿ, ಈ ಭಾಗದ 500 ಏಕರೆ ಜಾಗದ ದಾಖಲೆ ಇಲ್ಲವೆಂದು ಕಂದಾಯ ಇಲಾಖೆ ಅಧಿಕಾರಿಗಳು ಕೆಲ ಸರ್ವೆ ನಂಬರ್ಗಳಿಗೆ ನಕಲಿ ದಾಖಲೆಗಳು ಸೃಷ್ಟಿಸಿ ಖಾತೆ ಪಹಣಿ ಮಾಡಿದ್ದಾರೆ. ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ವೆಂಕಟಪ್ಪ, ಗೋವಿಂದಪ್ಪ, ಅಂಜಿನಪ್ಪ, ಹನುಮಂತರಾಯ, ಲಿಂಗಪ್ಪ, ಕೃಷ್ಣಪ್ಪ, ಗೋಪಾಲ್, ಹರಿಪ್ರಸಾದ್, ರಾಮಾಂಜಿ, ರಾಮಕೃಷ್ಣಯ್ಯ, ಯಲ್ಲಪ್ಪ, ಅಂಜಪ್ಪ, ಸಂಜೀವಮೂರ್ತಿ, ಬಾಲು, ಬಲರಾಮು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>