<p>ಕೊಡಿಗೇನಹಳ್ಳಿ: ಪುರವರ ಹೋಬಳಿ ಕೋಡ್ಲಾಪುರದಲ್ಲಿ ಮಾತಂಗಿ ಕಲಾ ಮತ್ತು ಸಾಂಸ್ಕೃತಿಕ ಬಳಗದ ಯುವಕರು ಅಂಬೇಡ್ಕರ್ ಜಯಂತಿ ಆಚರಿಸಿದರು.</p>.<p>ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರದ ಫಲಕ ಅಳವಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನೀಲಿ ಬಾವುಟಗಳನ್ನು ಹಿಡಿದು ಜೈಕಾರ ಹಾಕುತ್ತ ತಮಟೆ ವಾದ್ಯಗಳನ್ನು ಬಾರಿಸಿದರು.</p>.<p>ಮಾತಂಗಿ ಸಂಘದ ಅಧ್ಯಕ್ಷ ಕೆ.ಎಸ್. ವಿಜಯ್ ಕುಮಾರ್ ಮಾತನಾಡಿ, ಅಂಬೇಡ್ಕರ್ ನೀಡಿದ ಸಂವಿಧಾನದ ಅಡಿಯಲ್ಲಿ ಎಲ್ಲರೂ ಸಮಾನತೆಯಿಂದ ಬಾಳುತ್ತಿದ್ದೇವೆ. ಅವರ ಆಶಯದಂತೆ ಶಿಕ್ಷಣ ಮತ್ತು ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.</p>.<p>ಸಂಘದ ಉಪಾಧ್ಯಕ್ಷ ನಾರಾಯಣಪ್ಪ, ನಿರ್ದೇಶಕರಾದ ಪಾರ್ವತಮ್ಮ, ವೆಂಕಟ್, ನಾರಾಯಣ್, ತಾ.ಪಂ.ಮಾಜಿ ಸದಸ್ಯ ಶ್ರೀನಿವಾಸ್, ಗಣೇಶಪ್ಪ, ಎಂ.ಎನ್, ಶಾಂತವೇಣಿ ಮಾತಂಗಿ ಕಲಾ ಮತ್ತು ಸಾಂಸ್ಕೃತಿಕ ಬಳಗದ ಮುಖ್ಯಸ್ಥರು, ಗ್ರಾಮಸ್ಥರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-17-399546555</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಡಿಗೇನಹಳ್ಳಿ: ಪುರವರ ಹೋಬಳಿ ಕೋಡ್ಲಾಪುರದಲ್ಲಿ ಮಾತಂಗಿ ಕಲಾ ಮತ್ತು ಸಾಂಸ್ಕೃತಿಕ ಬಳಗದ ಯುವಕರು ಅಂಬೇಡ್ಕರ್ ಜಯಂತಿ ಆಚರಿಸಿದರು.</p>.<p>ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರದ ಫಲಕ ಅಳವಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನೀಲಿ ಬಾವುಟಗಳನ್ನು ಹಿಡಿದು ಜೈಕಾರ ಹಾಕುತ್ತ ತಮಟೆ ವಾದ್ಯಗಳನ್ನು ಬಾರಿಸಿದರು.</p>.<p>ಮಾತಂಗಿ ಸಂಘದ ಅಧ್ಯಕ್ಷ ಕೆ.ಎಸ್. ವಿಜಯ್ ಕುಮಾರ್ ಮಾತನಾಡಿ, ಅಂಬೇಡ್ಕರ್ ನೀಡಿದ ಸಂವಿಧಾನದ ಅಡಿಯಲ್ಲಿ ಎಲ್ಲರೂ ಸಮಾನತೆಯಿಂದ ಬಾಳುತ್ತಿದ್ದೇವೆ. ಅವರ ಆಶಯದಂತೆ ಶಿಕ್ಷಣ ಮತ್ತು ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.</p>.<p>ಸಂಘದ ಉಪಾಧ್ಯಕ್ಷ ನಾರಾಯಣಪ್ಪ, ನಿರ್ದೇಶಕರಾದ ಪಾರ್ವತಮ್ಮ, ವೆಂಕಟ್, ನಾರಾಯಣ್, ತಾ.ಪಂ.ಮಾಜಿ ಸದಸ್ಯ ಶ್ರೀನಿವಾಸ್, ಗಣೇಶಪ್ಪ, ಎಂ.ಎನ್, ಶಾಂತವೇಣಿ ಮಾತಂಗಿ ಕಲಾ ಮತ್ತು ಸಾಂಸ್ಕೃತಿಕ ಬಳಗದ ಮುಖ್ಯಸ್ಥರು, ಗ್ರಾಮಸ್ಥರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-17-399546555</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>