<p><strong>ತುಮಕೂರು:</strong> ಕೋಲ್ಕತ್ತ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಕೊಲೆ ಖಂಡನೀಯ. ಇದು ಇಡೀ ಸಮಾಜ ತಲೆತಗ್ಗಿಸುವ ವಿಷಯ ಎಂದು ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಚ್.ವಿ.ರಂಗಸ್ವಾಮಿ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಎಲ್ಲ ವರ್ಗದ ಮಹಿಳೆಯರಿಗೆ ಸುರಕ್ಷತೆಯ ಕೊರತೆ ಇದೆ. ಸರ್ಕಾರ ಕೂಡಲೇ ಈ ಪ್ರಕರಣದ ಆರೋಪಿಗಳನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು. ವೈದ್ಯಕೀಯ ಶಿಕ್ಷಣ ಪಡೆಯುವುದು ಸಣ್ಣ ವಿಷಯವಲ್ಲ. ಸಾಕಷ್ಟು ಶ್ರಮವಹಿಸಿ ಈ ವೃತ್ತಿಯನ್ನು ಆರಿಸಿಕೊಂಡು ಬಂದಿರುತ್ತಾರೆ. ಜೀವ ಉಳಿಸುವ ವೈದ್ಯರ ಸ್ಥಿತಿ ಹೀಗಾದರೆ, ಜನಸಾಮಾನ್ಯರ ಪಾಡೇನು?’ ಎಂದು ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.</p>.<p>ತಮ್ಮದಲ್ಲದ ತಪ್ಪಿಗೆ ವೈದ್ಯರು ಹಲ್ಲೆಗೆ ಗುರಿಯಾಗುತ್ತಿದ್ದಾರೆ. ಇದರಿಂದ ಇತ್ತೀಚಿನ ದಿನಗಳಲ್ಲಿ ವೈದ್ಯಕೀಯ ಕ್ಷೇತ್ರಕ್ಕೆ ಬರುವ ಮಹಿಳೆಯರ ಸಂಖ್ಯೆ ಕುಸಿದಿದೆ. ಇದು ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ಹಾಗಾಗಿ ಸರ್ಕಾರ ಸೂಕ್ತ ಕ್ರಮ ನಡೆಸಬೇಕು ಎಂದು ಒತ್ತಾಯಿಸಿದರು.</p>.<p>ಲೇಖಕಿ ಬಾ.ಹ.ರಮಾಕುಮಾರಿ, ‘ಹೆಣ್ಣು ಮಕ್ಕಳ ಸುರಕ್ಷತೆಯ ಬಗ್ಗೆ ಮನ ಪರಿವರ್ತನೆಯಾಗಬೇಕು. ಹೆಣ್ಣನ್ನು ನೋಡುವ ದೃಷ್ಟಿಕೋನ ಬದಲಾಗದ ಹೊರತು ಇಂತಹ ಘಟನೆಗಳು ನಿಲ್ಲುವುದಿಲ್ಲ. ಕೋಲ್ಕತ್ತ ಘಟನೆಯ ವಿರುದ್ಧ ಎಲ್ಲರು ಹೋರಾಟಕ್ಕೆ ಇಳಿಯಬೇಕು. ಆಳುವ ಸರ್ಕಾರಕ್ಕೆ ಪ್ರತಿರೋಧದ ಧ್ವನಿ ತಟ್ಟುವಂತೆ ಮಾಡಬೇಕು’ ಎಂದರು.</p>.<p>ವೈದ್ಯಕೀಯ ಸಂಘದ ಡಾ.ಮಹೇಶ್, ಡಾ.ಡಿ.ಹನುಮಕ್ಕ, ಡಾ.ಅನಿತಾ ಬಿ.ಗೌಡ, ಡಾ.ಕೆ.ಶೃತಿ ಇತರರು ಹಾಜರಿದ್ದರು.</p>.<p>ವಿದ್ಯಾರ್ಥಿನಿ ಕೊಲೆ ಖಂಡಿಸಿ ಮೇಣದ ಬತ್ತಿ ಮೆರವಣಿಗೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಕೋಲ್ಕತ್ತ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಕೊಲೆ ಖಂಡನೀಯ. ಇದು ಇಡೀ ಸಮಾಜ ತಲೆತಗ್ಗಿಸುವ ವಿಷಯ ಎಂದು ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಚ್.ವಿ.ರಂಗಸ್ವಾಮಿ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಎಲ್ಲ ವರ್ಗದ ಮಹಿಳೆಯರಿಗೆ ಸುರಕ್ಷತೆಯ ಕೊರತೆ ಇದೆ. ಸರ್ಕಾರ ಕೂಡಲೇ ಈ ಪ್ರಕರಣದ ಆರೋಪಿಗಳನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು. ವೈದ್ಯಕೀಯ ಶಿಕ್ಷಣ ಪಡೆಯುವುದು ಸಣ್ಣ ವಿಷಯವಲ್ಲ. ಸಾಕಷ್ಟು ಶ್ರಮವಹಿಸಿ ಈ ವೃತ್ತಿಯನ್ನು ಆರಿಸಿಕೊಂಡು ಬಂದಿರುತ್ತಾರೆ. ಜೀವ ಉಳಿಸುವ ವೈದ್ಯರ ಸ್ಥಿತಿ ಹೀಗಾದರೆ, ಜನಸಾಮಾನ್ಯರ ಪಾಡೇನು?’ ಎಂದು ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.</p>.<p>ತಮ್ಮದಲ್ಲದ ತಪ್ಪಿಗೆ ವೈದ್ಯರು ಹಲ್ಲೆಗೆ ಗುರಿಯಾಗುತ್ತಿದ್ದಾರೆ. ಇದರಿಂದ ಇತ್ತೀಚಿನ ದಿನಗಳಲ್ಲಿ ವೈದ್ಯಕೀಯ ಕ್ಷೇತ್ರಕ್ಕೆ ಬರುವ ಮಹಿಳೆಯರ ಸಂಖ್ಯೆ ಕುಸಿದಿದೆ. ಇದು ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ಹಾಗಾಗಿ ಸರ್ಕಾರ ಸೂಕ್ತ ಕ್ರಮ ನಡೆಸಬೇಕು ಎಂದು ಒತ್ತಾಯಿಸಿದರು.</p>.<p>ಲೇಖಕಿ ಬಾ.ಹ.ರಮಾಕುಮಾರಿ, ‘ಹೆಣ್ಣು ಮಕ್ಕಳ ಸುರಕ್ಷತೆಯ ಬಗ್ಗೆ ಮನ ಪರಿವರ್ತನೆಯಾಗಬೇಕು. ಹೆಣ್ಣನ್ನು ನೋಡುವ ದೃಷ್ಟಿಕೋನ ಬದಲಾಗದ ಹೊರತು ಇಂತಹ ಘಟನೆಗಳು ನಿಲ್ಲುವುದಿಲ್ಲ. ಕೋಲ್ಕತ್ತ ಘಟನೆಯ ವಿರುದ್ಧ ಎಲ್ಲರು ಹೋರಾಟಕ್ಕೆ ಇಳಿಯಬೇಕು. ಆಳುವ ಸರ್ಕಾರಕ್ಕೆ ಪ್ರತಿರೋಧದ ಧ್ವನಿ ತಟ್ಟುವಂತೆ ಮಾಡಬೇಕು’ ಎಂದರು.</p>.<p>ವೈದ್ಯಕೀಯ ಸಂಘದ ಡಾ.ಮಹೇಶ್, ಡಾ.ಡಿ.ಹನುಮಕ್ಕ, ಡಾ.ಅನಿತಾ ಬಿ.ಗೌಡ, ಡಾ.ಕೆ.ಶೃತಿ ಇತರರು ಹಾಜರಿದ್ದರು.</p>.<p>ವಿದ್ಯಾರ್ಥಿನಿ ಕೊಲೆ ಖಂಡಿಸಿ ಮೇಣದ ಬತ್ತಿ ಮೆರವಣಿಗೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>