<p><strong>ಕೊರಟಗೆರೆ:</strong> ಪಟ್ಟಣದ ಹೃದಯ ಭಾಗದಲ್ಲಿರುವ ಸರ್ಕಾರಿ ಬಸ್ ನಿಲ್ದಾಣದ ಬಳಿ ಹಲವು ವರ್ಷಗಳಿಂದ ತೆರೆದ ಸ್ಥಿತಿಯಲ್ಲಿರುವ ದೊಡ್ಡ ಚರಂಡಿ ಅಪಾಯಕ್ಕೆ ಆಹ್ವಾನ ನೀಡುವಂತಿದೆ.</p><p>ಬಸ್ ಒಳಗೆ ಪ್ರವೇಶಿಸುವ ಹಾಗೂ ಹೊರಗೆ ಬರುವ ಮುಖ್ಯ ದಾರಿಯಲ್ಲಿಯೇ ಬಾಯ್ತೆರೆದುಕೊಂಡಿರುವ ಈ ಚರಂಡಿ ನಿತ್ಯದ ಸಂಚಾರಕ್ಕೆ<br>ಅಡ್ಡಿಯಾಗಿದೆ.</p><p>ಪ್ರತಿದಿನ ನೂರಾರು ವಾಹನ, ವಿದ್ಯಾರ್ಥಿಗಳು, ಪಾದಚಾರಿಗಳು ಈ ದಾರಿಯಲ್ಲೇ ಸಂಚರಿಸುತ್ತಾರೆ. ರೇಣುಕಾ ಆಸ್ಪತ್ರೆ, ರವೀಂದ್ರ ಭಾರತಿ ಶಾಲೆ, ಕಾಳಿದಾಸ ಪ್ರೌಢಶಾಲೆ ಮೊದಲಾದ ಶಿಕ್ಷಣ ಹಾಗೂ ಆರೋಗ್ಯ ಸಂಸ್ಥೆಗಳ ವಿದ್ಯಾರ್ಥಿಗಳು ಮತ್ತು ರೋಗಿಗಳು ಈ ಮಾರ್ಗವನ್ನು ದಿನಂಪ್ರತಿ ಬಳಸುತ್ತಾರೆ. ಅದೇ ಸ್ಥಳದ ರಸ್ತೆಯಲ್ಲಿ ಇತ್ತೀಚೆಗೆ ದೊಡ್ಡ ಗುಂಡಿ ಬಿದ್ದಿದ್ದು, ಅಪಘಾತಕ್ಕೆ ಇನ್ನಷ್ಟು ಕಾರಣವಾಗಿದೆ. </p><p>ಹಗಲಿನಲ್ಲಿ ಹೇಗಾದರೂ ಈ ಚರಂಡಿಯನ್ನು ತಪ್ಪಿಸಿಕೊಂಡು ಹೋಗಬಹುದಾದರೂ, ರಾತ್ರಿ ವಾಹನ ಸವಾರರಿಗೆ ಇದು ಸ್ಪಷ್ಟವಾಗಿ ಕಾಣದೇ ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ಅನೇಕರು ಈ ಜಾಗದಲ್ಲಿ ಬಿದ್ದು ಗಾಯಗೊಂಡಿದ್ದು, ಕೈಕಾಲು ಮುರಿದುಕೊಂಡಿರುವ ನಿದರ್ಶನಗಳಿವೆ. </p><p>ಇದೇ ಜಾಗದಲ್ಲೇ ಖಾಸಗಿ ಬಸ್ ನಿಲ್ದಾಣವೂ ಇರುವುದರಿಂದ ಪ್ರಯಾಣಿಕರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಚರಂಡಿ ದುರಸ್ತಿಗೊಳಿಸಿ ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.</p><p>ಹಲವು ಬಾರಿ ಸಂಬಂಧಪಟ್ಟವರಿಗೆ ತಿಳಿಸಿದ್ದರೂ ಶಾಶ್ವತ ಪರಿಹಾರ ಸಿಕ್ಕಿಲ್ಲ ಎನ್ನುತ್ತಾರೆ ಸ್ಥಳೀಯರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊರಟಗೆರೆ:</strong> ಪಟ್ಟಣದ ಹೃದಯ ಭಾಗದಲ್ಲಿರುವ ಸರ್ಕಾರಿ ಬಸ್ ನಿಲ್ದಾಣದ ಬಳಿ ಹಲವು ವರ್ಷಗಳಿಂದ ತೆರೆದ ಸ್ಥಿತಿಯಲ್ಲಿರುವ ದೊಡ್ಡ ಚರಂಡಿ ಅಪಾಯಕ್ಕೆ ಆಹ್ವಾನ ನೀಡುವಂತಿದೆ.</p><p>ಬಸ್ ಒಳಗೆ ಪ್ರವೇಶಿಸುವ ಹಾಗೂ ಹೊರಗೆ ಬರುವ ಮುಖ್ಯ ದಾರಿಯಲ್ಲಿಯೇ ಬಾಯ್ತೆರೆದುಕೊಂಡಿರುವ ಈ ಚರಂಡಿ ನಿತ್ಯದ ಸಂಚಾರಕ್ಕೆ<br>ಅಡ್ಡಿಯಾಗಿದೆ.</p><p>ಪ್ರತಿದಿನ ನೂರಾರು ವಾಹನ, ವಿದ್ಯಾರ್ಥಿಗಳು, ಪಾದಚಾರಿಗಳು ಈ ದಾರಿಯಲ್ಲೇ ಸಂಚರಿಸುತ್ತಾರೆ. ರೇಣುಕಾ ಆಸ್ಪತ್ರೆ, ರವೀಂದ್ರ ಭಾರತಿ ಶಾಲೆ, ಕಾಳಿದಾಸ ಪ್ರೌಢಶಾಲೆ ಮೊದಲಾದ ಶಿಕ್ಷಣ ಹಾಗೂ ಆರೋಗ್ಯ ಸಂಸ್ಥೆಗಳ ವಿದ್ಯಾರ್ಥಿಗಳು ಮತ್ತು ರೋಗಿಗಳು ಈ ಮಾರ್ಗವನ್ನು ದಿನಂಪ್ರತಿ ಬಳಸುತ್ತಾರೆ. ಅದೇ ಸ್ಥಳದ ರಸ್ತೆಯಲ್ಲಿ ಇತ್ತೀಚೆಗೆ ದೊಡ್ಡ ಗುಂಡಿ ಬಿದ್ದಿದ್ದು, ಅಪಘಾತಕ್ಕೆ ಇನ್ನಷ್ಟು ಕಾರಣವಾಗಿದೆ. </p><p>ಹಗಲಿನಲ್ಲಿ ಹೇಗಾದರೂ ಈ ಚರಂಡಿಯನ್ನು ತಪ್ಪಿಸಿಕೊಂಡು ಹೋಗಬಹುದಾದರೂ, ರಾತ್ರಿ ವಾಹನ ಸವಾರರಿಗೆ ಇದು ಸ್ಪಷ್ಟವಾಗಿ ಕಾಣದೇ ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ಅನೇಕರು ಈ ಜಾಗದಲ್ಲಿ ಬಿದ್ದು ಗಾಯಗೊಂಡಿದ್ದು, ಕೈಕಾಲು ಮುರಿದುಕೊಂಡಿರುವ ನಿದರ್ಶನಗಳಿವೆ. </p><p>ಇದೇ ಜಾಗದಲ್ಲೇ ಖಾಸಗಿ ಬಸ್ ನಿಲ್ದಾಣವೂ ಇರುವುದರಿಂದ ಪ್ರಯಾಣಿಕರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಚರಂಡಿ ದುರಸ್ತಿಗೊಳಿಸಿ ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.</p><p>ಹಲವು ಬಾರಿ ಸಂಬಂಧಪಟ್ಟವರಿಗೆ ತಿಳಿಸಿದ್ದರೂ ಶಾಶ್ವತ ಪರಿಹಾರ ಸಿಕ್ಕಿಲ್ಲ ಎನ್ನುತ್ತಾರೆ ಸ್ಥಳೀಯರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>