<p>ಕೊರಟಗೆರೆ: ತಾಲ್ಲೂಕಿನ ಫ್ರೆಂಡ್ಸ್ ಗ್ರೂಪ್ ಹಾಗೂ ಜಗ್ಗೇಶ್ ಅಭಿಮಾನಿ ಬಳಗದಿಂದ ಉಚಿತ ಆಂಬುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮ ಗುರುವಾರ ನಡೆಯಿತು.</p>.<p>ಚಿತ್ರನಟ ಹಾಗೂ ಸಂಸದ ಜಗ್ಗೇಶ್ ಮಾತನಾಡಿ, ‘ಸಮಾಜ ಸೇವೆ ಎಂಬುದು ಕೇವಲ ಮಾತಿನಲ್ಲಿ ಉಳಿಯದೆ ಕೃತಿಯಲ್ಲಿ ಮೂಡಿಬರಬೇಕು. ಆಂಬುಲೆನ್ಸ್ ಸೇವೆ ಗ್ರಾಮೀಣ ಪ್ರದೇಶಗಳಲ್ಲಿ ತುರ್ತು ಸಂದರ್ಭದಲ್ಲಿ ಜೀವಗಳನ್ನು ಉಳಿಸಬಲ್ಲ ಮಹತ್ವದ ಕಾರ್ಯ’ ಎಂದು ಹೇಳಿದರು.</p>.<p>ಸಿದ್ದರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ಮಾನವ ಸೇವೆಯೇ ಮಾಧವ ಸೇವೆ. ಇಂತಹ ಸೇವಾ ಕಾರ್ಯಗಳು ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುತ್ತವೆ’ ಎಂದರು.</p>.<p>ಎಲೆರಾಂಪುರ ಕುಂಚಿಟಿಗ ಮಠದ ಹನುಮಂತನಾಥ ಸ್ವಾಮೀಜಿ, ‘ಗ್ರಾಮೀಣ ಭಾಗದಲ್ಲಿ ತುರ್ತು ಆರೋಗ್ಯ ಸೇವೆಗಳ ಕೊರತೆ ಇದೆ. ಈ ಆಂಬುಲೆನ್ಸ್ ಸೇವೆ ಆ ಕೊರತೆ ನೀಗಿಸಲು ಸಹಕಾರಿ’ ಎಂದರು.</p>.<p>ತಹಶೀಲ್ದಾರ್ ಕೆ. ಮಂಜುನಾಥ್ ಮಾತನಾಡಿದರು. ಕೆ.ವಿ.ಪುರುಷೋತ್ತಮ್ ಫ್ರೆಂಡ್ಸ್ ಗ್ರೂಪ್ ಹಾಗೂ ಜಗ್ಗೇಶ್ ಅಭಿಮಾನಿಗಳ ಸಂಘ ಕೈಗೊಂಡಿರುವ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಹಾಗೂ ಆರೋಗ್ಯ ಸೇವೆ ಬಗ್ಗೆ ವಿವರಣೆ ನೀಡಿದರು.</p>.<p>ಹಾಸ್ಯ ಕಲಾವಿದ ಬೌಬೌ ಜಯರಾಮ್ ತಂಡದಿಂದ ಹಾಸ್ಯ ಕಾರ್ಯಕ್ರಮ, ನಿವೃತ್ತ ಶಿಕ್ಷಕರಿಗೆ ಸನ್ಮಾನ ಮಾಡಲಾಯಿತು. ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು.</p>.<p>ಫ್ರೆಂಡ್ಸ್ ಗ್ರೂಪ್ ಅಧ್ಯಕ್ಷ ರವಿಕುಮಾರ್, ಪ್ರದೀಪ್ ಕುಮಾರ್, ಜಗ್ಗೇಶ್ ಅಭಿಮಾನಿ ಬಳಗದ ಅಧ್ಯಕ್ಷ ಮಲ್ಲಣ್ಣ, ಮಂಜುನಾಥ್, ವೈ.ಜಿ.ತೀರ್ಥೇಶ್, ಆರ್.ಮಲ್ಲಿಕಾರ್ಜುನ್, ಹನುಮಾನ್, ಎಚ್.ಕೆ.ಮಹಾಲಿಂಗಪ್ಪ, ಕೇಶವಮೂರ್ತಿ, ಬಾಲಪ್ಪ, ಸಾವಿತ್ರಮ್ಮ, ಹನುಮಂತರೆಡ್ಡಿ, ಪ್ರಸನ್ನಕುಮಾರ್, ರಘು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-17-158479678</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊರಟಗೆರೆ: ತಾಲ್ಲೂಕಿನ ಫ್ರೆಂಡ್ಸ್ ಗ್ರೂಪ್ ಹಾಗೂ ಜಗ್ಗೇಶ್ ಅಭಿಮಾನಿ ಬಳಗದಿಂದ ಉಚಿತ ಆಂಬುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮ ಗುರುವಾರ ನಡೆಯಿತು.</p>.<p>ಚಿತ್ರನಟ ಹಾಗೂ ಸಂಸದ ಜಗ್ಗೇಶ್ ಮಾತನಾಡಿ, ‘ಸಮಾಜ ಸೇವೆ ಎಂಬುದು ಕೇವಲ ಮಾತಿನಲ್ಲಿ ಉಳಿಯದೆ ಕೃತಿಯಲ್ಲಿ ಮೂಡಿಬರಬೇಕು. ಆಂಬುಲೆನ್ಸ್ ಸೇವೆ ಗ್ರಾಮೀಣ ಪ್ರದೇಶಗಳಲ್ಲಿ ತುರ್ತು ಸಂದರ್ಭದಲ್ಲಿ ಜೀವಗಳನ್ನು ಉಳಿಸಬಲ್ಲ ಮಹತ್ವದ ಕಾರ್ಯ’ ಎಂದು ಹೇಳಿದರು.</p>.<p>ಸಿದ್ದರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ಮಾನವ ಸೇವೆಯೇ ಮಾಧವ ಸೇವೆ. ಇಂತಹ ಸೇವಾ ಕಾರ್ಯಗಳು ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುತ್ತವೆ’ ಎಂದರು.</p>.<p>ಎಲೆರಾಂಪುರ ಕುಂಚಿಟಿಗ ಮಠದ ಹನುಮಂತನಾಥ ಸ್ವಾಮೀಜಿ, ‘ಗ್ರಾಮೀಣ ಭಾಗದಲ್ಲಿ ತುರ್ತು ಆರೋಗ್ಯ ಸೇವೆಗಳ ಕೊರತೆ ಇದೆ. ಈ ಆಂಬುಲೆನ್ಸ್ ಸೇವೆ ಆ ಕೊರತೆ ನೀಗಿಸಲು ಸಹಕಾರಿ’ ಎಂದರು.</p>.<p>ತಹಶೀಲ್ದಾರ್ ಕೆ. ಮಂಜುನಾಥ್ ಮಾತನಾಡಿದರು. ಕೆ.ವಿ.ಪುರುಷೋತ್ತಮ್ ಫ್ರೆಂಡ್ಸ್ ಗ್ರೂಪ್ ಹಾಗೂ ಜಗ್ಗೇಶ್ ಅಭಿಮಾನಿಗಳ ಸಂಘ ಕೈಗೊಂಡಿರುವ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಹಾಗೂ ಆರೋಗ್ಯ ಸೇವೆ ಬಗ್ಗೆ ವಿವರಣೆ ನೀಡಿದರು.</p>.<p>ಹಾಸ್ಯ ಕಲಾವಿದ ಬೌಬೌ ಜಯರಾಮ್ ತಂಡದಿಂದ ಹಾಸ್ಯ ಕಾರ್ಯಕ್ರಮ, ನಿವೃತ್ತ ಶಿಕ್ಷಕರಿಗೆ ಸನ್ಮಾನ ಮಾಡಲಾಯಿತು. ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು.</p>.<p>ಫ್ರೆಂಡ್ಸ್ ಗ್ರೂಪ್ ಅಧ್ಯಕ್ಷ ರವಿಕುಮಾರ್, ಪ್ರದೀಪ್ ಕುಮಾರ್, ಜಗ್ಗೇಶ್ ಅಭಿಮಾನಿ ಬಳಗದ ಅಧ್ಯಕ್ಷ ಮಲ್ಲಣ್ಣ, ಮಂಜುನಾಥ್, ವೈ.ಜಿ.ತೀರ್ಥೇಶ್, ಆರ್.ಮಲ್ಲಿಕಾರ್ಜುನ್, ಹನುಮಾನ್, ಎಚ್.ಕೆ.ಮಹಾಲಿಂಗಪ್ಪ, ಕೇಶವಮೂರ್ತಿ, ಬಾಲಪ್ಪ, ಸಾವಿತ್ರಮ್ಮ, ಹನುಮಂತರೆಡ್ಡಿ, ಪ್ರಸನ್ನಕುಮಾರ್, ರಘು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-17-158479678</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>