<p><strong>ಕೊರಟಗೆರೆ:</strong> ಕೋಳಾಲ ಹೋಬಳಿಯ ಕಂತೆವಡೇರಹಳ್ಳಿ ಬಳಿ ಆಸ್ತಿ ಹಂಚಿಕೆವಿಚಾರವಾಗಿ ಅಣ್ಣನೇ ತಮ್ಮನನ್ನು ಕೊಲೆ ಮಾಡಿದ್ದು, ಆರೋಪಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.</p>.<p>ತಾಲ್ಲೂಕಿನ ಊರ್ಡಿಗೆರೆ ಹೋಬಳಿ ದೊಡ್ಡತಿಮ್ಮಯ್ಯನಪಾಳ್ಯದ ಬೈಲಹನುಮಯ್ಯ (36) ಕೊಲೆಯಾದವರು. ವಿಷ್ಣುಕುಮಾರ್ (38) ಬಂಧಿತ ಆರೋಪಿ. ಇವರ ತಂದೆಗೆ ನಾಲ್ಕು ಎಕರೆ ಜಮೀನು, 2 ಬೊಲೆರೊ ವಾಹನಗಳಿವೆ. ಆಸ್ತಿ ಹಂಚಿಕೆ ವಿಚಾರವಾಗಿ ಪದೇ ಪದೇ ಗಲಾಟೆಗಳು ನಡೆಯುತ್ತಿದ್ದವು.</p>.<p>ಮೇ 25ರಂದು ರಾತ್ರಿ ಜಮೀನು ಹಂಚಿಕೆಗಾಗಿ ಮಾತುಕತೆ ನಡೆದಿತ್ತು. ಮಾತಿಗೆ ಮಾತು ಬೆಳೆದು ಪರಸ್ಪರ ಕೈಕೈ ಮಿಲಾಯಿಸಿಕೊಂಡಿದ್ದರು. ವಿಷ್ಣುಕುಮಾರ್ ಚಾಕು, ದೊಣ್ಣೆಯಿಂದ ಬೈಲಹನುಮಯ್ಯ ಮೇಲೆ ಹಲ್ಲೆ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಬೈಲಹನುಮಯ್ಯ ಮೃತಪಟ್ಟಿದ್ದರು. ಈ ಕುರಿತು ಮೇ 26ರಂದು ಕೋಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಶೇಷ ತಂಡ ಆರೋಪಿಯನ್ನು ಬಂಧಿಸಿದೆ.</p>.<p>‘ಕೊರಟಗೆರೆ ಇನ್ಸ್ಪೆಕ್ಟರ್ ಪುರುಷೋತ್ತಮ್, ಕೋಳಾಲ ಪಿಎಸ್ಐ ಎಸ್.ಆರ್.ಅಭಿಷೇಕ್, ಸಿಬ್ಬಂದಿ ಬಿ.ಎಲ್.ಮಧುಕುಮಾರ್, ಎ.ವಿ.ಪ್ರಕಾಶ್ ಅವರ ತಂಡ ಆರೋಪಿ ಪತ್ತೆಗೆ ಕಾರ್ಯಾಚರಣೆ ನಡೆಸಿತ್ತು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-17-1302475525</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊರಟಗೆರೆ:</strong> ಕೋಳಾಲ ಹೋಬಳಿಯ ಕಂತೆವಡೇರಹಳ್ಳಿ ಬಳಿ ಆಸ್ತಿ ಹಂಚಿಕೆವಿಚಾರವಾಗಿ ಅಣ್ಣನೇ ತಮ್ಮನನ್ನು ಕೊಲೆ ಮಾಡಿದ್ದು, ಆರೋಪಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.</p>.<p>ತಾಲ್ಲೂಕಿನ ಊರ್ಡಿಗೆರೆ ಹೋಬಳಿ ದೊಡ್ಡತಿಮ್ಮಯ್ಯನಪಾಳ್ಯದ ಬೈಲಹನುಮಯ್ಯ (36) ಕೊಲೆಯಾದವರು. ವಿಷ್ಣುಕುಮಾರ್ (38) ಬಂಧಿತ ಆರೋಪಿ. ಇವರ ತಂದೆಗೆ ನಾಲ್ಕು ಎಕರೆ ಜಮೀನು, 2 ಬೊಲೆರೊ ವಾಹನಗಳಿವೆ. ಆಸ್ತಿ ಹಂಚಿಕೆ ವಿಚಾರವಾಗಿ ಪದೇ ಪದೇ ಗಲಾಟೆಗಳು ನಡೆಯುತ್ತಿದ್ದವು.</p>.<p>ಮೇ 25ರಂದು ರಾತ್ರಿ ಜಮೀನು ಹಂಚಿಕೆಗಾಗಿ ಮಾತುಕತೆ ನಡೆದಿತ್ತು. ಮಾತಿಗೆ ಮಾತು ಬೆಳೆದು ಪರಸ್ಪರ ಕೈಕೈ ಮಿಲಾಯಿಸಿಕೊಂಡಿದ್ದರು. ವಿಷ್ಣುಕುಮಾರ್ ಚಾಕು, ದೊಣ್ಣೆಯಿಂದ ಬೈಲಹನುಮಯ್ಯ ಮೇಲೆ ಹಲ್ಲೆ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಬೈಲಹನುಮಯ್ಯ ಮೃತಪಟ್ಟಿದ್ದರು. ಈ ಕುರಿತು ಮೇ 26ರಂದು ಕೋಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಶೇಷ ತಂಡ ಆರೋಪಿಯನ್ನು ಬಂಧಿಸಿದೆ.</p>.<p>‘ಕೊರಟಗೆರೆ ಇನ್ಸ್ಪೆಕ್ಟರ್ ಪುರುಷೋತ್ತಮ್, ಕೋಳಾಲ ಪಿಎಸ್ಐ ಎಸ್.ಆರ್.ಅಭಿಷೇಕ್, ಸಿಬ್ಬಂದಿ ಬಿ.ಎಲ್.ಮಧುಕುಮಾರ್, ಎ.ವಿ.ಪ್ರಕಾಶ್ ಅವರ ತಂಡ ಆರೋಪಿ ಪತ್ತೆಗೆ ಕಾರ್ಯಾಚರಣೆ ನಡೆಸಿತ್ತು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-17-1302475525</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>