<p><strong>ಕೊರಟಗೆರೆ:</strong> ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜೂನ್ 30ರಿಂದ ಕೊರಟಗೆರೆ ಪಟ್ಟಣದಲ್ಲಿ ಜನತಾ ಕರ್ಫ್ಯೂ ನಡೆಸುವುದಾಗಿ ಸಾರ್ವಜನಿಕರು ತಹಶೀಲ್ದಾರ್ ನೇತೃತ್ವದಲ್ಲಿ ಸಭೆ ನಡೆಸಿ ತೀರ್ಮಾನಿಸಿದರು.</p>.<p>ತಾಲ್ಲೂಕಿನಲ್ಲಿ ಒಂದು ವಾರದಲ್ಲಿ ಮೂರು ಕೊರೊನಾ ಸೋಂಕು ಪ್ರಕರಣ ಕಂಡು ಬಂದ ಕಾರಣ ವರ್ತಕರು, ಹೋಟೆಲ್ ಮಾಲೀಕರು, ಬಟ್ಟೆ ವ್ಯಾಪಾರಿಗಳು, ಹಣ್ಣು- ತರಕಾರಿ ವ್ಯಾಪಾರಿಗಳು, ಚಿನ್ನ, ಬೆಳ್ಳಿ ವ್ಯಾಪಾರಿಗಳು ಸಭೆ ಸೇರಿದ್ದರು. ಪ್ರತಿ ದಿನ ಬೆಳಿಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಎಲ್ಲ ರೀತಿಯ ವಹಿವಾಟುಗಳು ನಡೆಯಲಿದ್ದು, ಆನಂತರ ಸ್ಥಗಿತಗೊಳಿಸಲು ನಿರ್ಧಾರ ಕೈಗೊಳ್ಳಲಾಯಿತು.</p>.<p>ಸಭೆಯಲ್ಲಿ ತಹಶೀಲ್ದಾರ್ ಬಿ.ಎಂ.ಗೋವಿಂದರಾಜು, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಕ್ಷ್ಮಣಕುಮಾರ, ಆರೋಗ್ಯ ನಿರೀಕ್ಷಕ ರೈಸ್ ಅಹಮದ್, ಸದಸ್ಯರಾದ ಕೆ.ಆರ್.ಓಬಳರಾಜು, ನಾಗರಾಜು, ಪ್ರದೀಪ್, ನರಸಿಂಹಪ್ಪ, ಪುಟ್ಟನರಸಪ್ಪ, ಮುಖಂಡರಾದ ರಮೇಶ್, ಗಣೇಶ್, ಶ್ರೀನಿವಾಸ್, ತುಂಗಾಮಂಜು, ಧರ್ಮಣ್ಣ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊರಟಗೆರೆ:</strong> ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜೂನ್ 30ರಿಂದ ಕೊರಟಗೆರೆ ಪಟ್ಟಣದಲ್ಲಿ ಜನತಾ ಕರ್ಫ್ಯೂ ನಡೆಸುವುದಾಗಿ ಸಾರ್ವಜನಿಕರು ತಹಶೀಲ್ದಾರ್ ನೇತೃತ್ವದಲ್ಲಿ ಸಭೆ ನಡೆಸಿ ತೀರ್ಮಾನಿಸಿದರು.</p>.<p>ತಾಲ್ಲೂಕಿನಲ್ಲಿ ಒಂದು ವಾರದಲ್ಲಿ ಮೂರು ಕೊರೊನಾ ಸೋಂಕು ಪ್ರಕರಣ ಕಂಡು ಬಂದ ಕಾರಣ ವರ್ತಕರು, ಹೋಟೆಲ್ ಮಾಲೀಕರು, ಬಟ್ಟೆ ವ್ಯಾಪಾರಿಗಳು, ಹಣ್ಣು- ತರಕಾರಿ ವ್ಯಾಪಾರಿಗಳು, ಚಿನ್ನ, ಬೆಳ್ಳಿ ವ್ಯಾಪಾರಿಗಳು ಸಭೆ ಸೇರಿದ್ದರು. ಪ್ರತಿ ದಿನ ಬೆಳಿಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಎಲ್ಲ ರೀತಿಯ ವಹಿವಾಟುಗಳು ನಡೆಯಲಿದ್ದು, ಆನಂತರ ಸ್ಥಗಿತಗೊಳಿಸಲು ನಿರ್ಧಾರ ಕೈಗೊಳ್ಳಲಾಯಿತು.</p>.<p>ಸಭೆಯಲ್ಲಿ ತಹಶೀಲ್ದಾರ್ ಬಿ.ಎಂ.ಗೋವಿಂದರಾಜು, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಕ್ಷ್ಮಣಕುಮಾರ, ಆರೋಗ್ಯ ನಿರೀಕ್ಷಕ ರೈಸ್ ಅಹಮದ್, ಸದಸ್ಯರಾದ ಕೆ.ಆರ್.ಓಬಳರಾಜು, ನಾಗರಾಜು, ಪ್ರದೀಪ್, ನರಸಿಂಹಪ್ಪ, ಪುಟ್ಟನರಸಪ್ಪ, ಮುಖಂಡರಾದ ರಮೇಶ್, ಗಣೇಶ್, ಶ್ರೀನಿವಾಸ್, ತುಂಗಾಮಂಜು, ಧರ್ಮಣ್ಣ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>