ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಬೆಳಗುಂಬ ರಸ್ತೆಯನ್ನೂ ವಿಸ್ತರಣೆ ಮಾಡಲಾಗುತ್ತಿದೆ. ತಮ್ಮಯ್ಯ ಆಸ್ಪತ್ರೆಯಿಂದ ರಾಷ್ಟ್ರೀಯ ಹೆದ್ದಾರಿವರೆಗೂ ಕೆಲಸ ವೇಗ ಪಡೆದುಕೊಂಡಿದೆ. ಆದರೆ ಕೋತಿತೋಪಿನಿಂದ ತಮ್ಮಯ್ಯ ಆಸ್ಪತ್ರೆವರೆಗೂ ಒತ್ತುವರಿಯಿಂದಾಗಿ ಕೆಲಸಕ್ಕೆ ಅಡ್ಡಿಯಾಗಿತ್ತು. ಈಗ ತೆರವು ಕಾರ್ಯಾಚರಣೆ ಪೂರ್ಣಗೊಂಡಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕೆಲಸಗಳು ಚುರುಕುಪಡೆದುಕೊಳ್ಳಲಿವೆ.