ತಾಲ್ಲೂಕಿನ ಕಳ್ಳಂಬೆಳ್ಳ ಹೋಬಳಿಯ ವಡ್ಡನಹಳ್ಳಿ ಗ್ರಾಮದ ಶಂಕರಲಿಂಗೇಗೌಡ ಹಾಗೂ ದಾಕ್ಷಾಯಿಣಿ ದಂಪತಿಗಳ ಪುತ್ರ ಭೂತೇಗೌಡ ವಡ್ಡನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ 1ರಿಂದ 7ನೇ ತರಗತಿಯವರೆಗೂ ವಿದ್ಯಾಭ್ಯಾಸ ಮಾಡಿದ್ದರು. ನಂತರ ಶಿರಾದ ಸೆಂಟ್ ಆನ್ಸ್ ಶಾಲೆಯಲ್ಲಿ ಪ್ರೌಢ ಶಿಕ್ಷಣ ಮುಗಿಸಿದರು. ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನಲ್ಲಿ ಪಿಯುಸಿ ಪೂರೈಸಿದರು. ನಂತರ ಎಂಜಿನಿಯರಿಂಗ್ ಪದವಿ ಪೂರೈಸಿದರು.