ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಯಂತ್ರಣ ಕಳೆದುಕೊಂಡ ಬಸ್‌: ಸ್ವಲ್ಪದರಲ್ಲೇ ತಪ್ಪಿದ ಭಾರಿ ಅನಾಹುತ

Last Updated 7 ಏಪ್ರಿಲ್ 2022, 16:27 IST
ಅಕ್ಷರ ಗಾತ್ರ

ತುಮಕೂರು: ಗುಬ್ಬಿ ತಾಲ್ಲೂಕು ನಿಟ್ಟೂರು ಹೋಬಳಿ ಹರೇನಹಳ್ಳಿ ಬಳಿ ಗುರುವಾರ ಕೆಎಸ್‌ಆರ್‌ಟಿಸಿ ಬಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಕಸ್ಮಿಕವಾಗಿ ಸೇತುವೆ ತಡೆಗೋಡೆ ಮೇಲೆ ಹತ್ತಿದೆ.

ಆದರೆ ಯಾವುದೇ ಪ್ರಾಣಾಪಾಯವಾಗಿಲ್ಲ. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್‌ನಲ್ಲಿ ಇದ್ದವರನ್ನು ಸುರಕ್ಷಿತವಾಗಿ ಕೆಳಗೆ ಇಳಿಸಲಾಯಿತು. ಬಸ್ ಬೆಂಗಳೂರಿನಿಂದ ಕಡೂರಿಗೆ ಹೋಗುತ್ತಿತ್ತು.

ಒಂದು ವೇಳೆ ಬಸ್ ಹಳ್ಳಕ್ಕೆ ಉರುಳಿ ಬಿದ್ದಿದ್ದರೆ ಭಾರಿ ಅನಾಹುತ ಸಂಭವಿಸುತ್ತಿತ್ತು. ಅದೃಷ್ಟವಶಾತ್ ಬಸ್ ಸೇತುವೆ ಮೇಲೆ ನಿಂತಿದ್ದರಿಂದ ಸಾವು ನೋವು ತಪ್ಪಿದಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT