<p><strong>ತುಮಕೂರು: </strong>ಜನವರಿ 2ರಂದು<strong></strong>ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಜನಸಂದಣಿ ಮತ್ತು ವಾಹನಗಳ ಸಂಚಾರ ದಟ್ಟಣೆ ಆಗುವುದರಿಂದ ಮಧ್ಯಾಹ್ನ 12ರಿಂದ ಸಂಜೆ 6ರವರೆಗೆ ಕೆಎಸ್ಆರ್ಟಿಸಿ ಬಸ್ಗಳು ಹಾಗೂ ವಾಹನಗಳ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.</p>.<p>ಬೆಂಗಳೂರು ಕಡೆಯಿಂದ ಬರುವ ವಾಹನಗಳು ಕ್ಯಾತ್ಸಂದ್ರ-ಬೈಪಾಸ್-ಹನುಮಂತಪುರ-ಕೋತಿತೋಪು-ಅಮಾನಿಕೆರೆ-ಕೋಡಿಸರ್ಕಲ್, ಗಾರ್ಡನ್ ರಸ್ತೆ-ಗುಬ್ಬಿ ಗೇಟ್ ಮುಖಾಂತರ ಶಿವಮೊಗ್ಗ ಕಡೆ ಚಲಿಸಬೇಕು.</p>.<p>ಬೆಂಗಳೂರು ಕಡೆಯಿಂದ ಬಂದು ಶಿರಾ ಕಡೆ ತೆರಳುವ ವಾಹನಗಳು ಕ್ಯಾತ್ಸಂದ್ರ-ಬೈಪಾಸ್-ಹನುಮಂತಪುರ-ಕೋತಿತೋಪು-ಅಮಾನಿಕೆರೆ-ಕೋಡಿಸರ್ಕಲ್-ಶಿರಾ ಗೇಟ್ ಮೂಲಕ ಎನ್ಎಚ್ 48ಕ್ಕೆ ಸಾಗಬೇಕು.</p>.<p>ಶಿವಮೊಗ್ಗ ಕಡೆಯಿಂದ ಬೆಂಗಳೂರು ಕಡೆಗೆ ಹೋಗುವ ವಾಹನಗಳು ಗುಬ್ಬಿ ಗೇಟ್-ಕಾಲ್ಟೆಕ್ಸ್-ಬಸ್ನಿಲ್ದಾಣ-ಕೋತಿತೋಪು-ಹನುಮಂತಪುರ ಬೈಪಾಸ್ ಮೂಲಕ ಎನ್ಎಚ್-48ರಲ್ಲಿ ಬೆಂಗಳೂರಿಗೆ ತೆರಳಬೇಕು.</p>.<p>ಶಿರಾ ಕಡೆಯಿಂದ ಬೆಂಗಳೂರು ಕಡೆಗೆ ಹೋಗುವ ವಾಹನಗಳು ಶಿರಾ ಗೇಟ್-ಕೋಡಿ ಸರ್ಕಲ್-ಅಮಾನಿಕೆರೆ, ಕೋತಿತೋಪು-ಹನುಮಂತಪುರ ಬೈಪಾಸ್ ಮೂಲಕ ಎನ್ಎಚ್-48ರಲ್ಲಿ ಬೆಂಗಳೂರು ಕಡೆಗೆ ಚಲಿಸಬೇಕು.</p>.<p>ಕುಣಿಗಲ್ ರಸ್ತೆ ಮೂಲಕ ಬರುವ ವಾಹನಗಳು ಕುಣಿಗಲ್ ಸರ್ಕಲ್-ಬಸ್ನಿಲ್ದಾಣ-ಕಾಲ್ಟೆಕ್ಸ್- ಕುಣಿಗಲ್ ಸರ್ಕಲ್ ಮೂಲಕ ಕುಣಿಗಲ್ ಕಡೆಗೆ ತೆರಳಬೇಕು.</p>.<p>ತುಮಕೂರು-ಬೆಂಗಳೂರು ವಾಹನಗಳು ತುಮಕೂರು ಬಸ್ ನಿಲ್ದಾಣದಿಂದ ಚರ್ಚ್ ಸರ್ಕಲ್-ಅಮಾನಿಕೆರೆ-ಹನುಮಂತಪುರ ಬೈಪಾಸ್ ಮುಖಾಂತರಎನ್ಎಚ್-48ರಲ್ಲಿ ಬೆಂಗಳೂರು ಕಡೆಗೆ ಸಾಗಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಜನವರಿ 2ರಂದು<strong></strong>ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಜನಸಂದಣಿ ಮತ್ತು ವಾಹನಗಳ ಸಂಚಾರ ದಟ್ಟಣೆ ಆಗುವುದರಿಂದ ಮಧ್ಯಾಹ್ನ 12ರಿಂದ ಸಂಜೆ 6ರವರೆಗೆ ಕೆಎಸ್ಆರ್ಟಿಸಿ ಬಸ್ಗಳು ಹಾಗೂ ವಾಹನಗಳ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.</p>.<p>ಬೆಂಗಳೂರು ಕಡೆಯಿಂದ ಬರುವ ವಾಹನಗಳು ಕ್ಯಾತ್ಸಂದ್ರ-ಬೈಪಾಸ್-ಹನುಮಂತಪುರ-ಕೋತಿತೋಪು-ಅಮಾನಿಕೆರೆ-ಕೋಡಿಸರ್ಕಲ್, ಗಾರ್ಡನ್ ರಸ್ತೆ-ಗುಬ್ಬಿ ಗೇಟ್ ಮುಖಾಂತರ ಶಿವಮೊಗ್ಗ ಕಡೆ ಚಲಿಸಬೇಕು.</p>.<p>ಬೆಂಗಳೂರು ಕಡೆಯಿಂದ ಬಂದು ಶಿರಾ ಕಡೆ ತೆರಳುವ ವಾಹನಗಳು ಕ್ಯಾತ್ಸಂದ್ರ-ಬೈಪಾಸ್-ಹನುಮಂತಪುರ-ಕೋತಿತೋಪು-ಅಮಾನಿಕೆರೆ-ಕೋಡಿಸರ್ಕಲ್-ಶಿರಾ ಗೇಟ್ ಮೂಲಕ ಎನ್ಎಚ್ 48ಕ್ಕೆ ಸಾಗಬೇಕು.</p>.<p>ಶಿವಮೊಗ್ಗ ಕಡೆಯಿಂದ ಬೆಂಗಳೂರು ಕಡೆಗೆ ಹೋಗುವ ವಾಹನಗಳು ಗುಬ್ಬಿ ಗೇಟ್-ಕಾಲ್ಟೆಕ್ಸ್-ಬಸ್ನಿಲ್ದಾಣ-ಕೋತಿತೋಪು-ಹನುಮಂತಪುರ ಬೈಪಾಸ್ ಮೂಲಕ ಎನ್ಎಚ್-48ರಲ್ಲಿ ಬೆಂಗಳೂರಿಗೆ ತೆರಳಬೇಕು.</p>.<p>ಶಿರಾ ಕಡೆಯಿಂದ ಬೆಂಗಳೂರು ಕಡೆಗೆ ಹೋಗುವ ವಾಹನಗಳು ಶಿರಾ ಗೇಟ್-ಕೋಡಿ ಸರ್ಕಲ್-ಅಮಾನಿಕೆರೆ, ಕೋತಿತೋಪು-ಹನುಮಂತಪುರ ಬೈಪಾಸ್ ಮೂಲಕ ಎನ್ಎಚ್-48ರಲ್ಲಿ ಬೆಂಗಳೂರು ಕಡೆಗೆ ಚಲಿಸಬೇಕು.</p>.<p>ಕುಣಿಗಲ್ ರಸ್ತೆ ಮೂಲಕ ಬರುವ ವಾಹನಗಳು ಕುಣಿಗಲ್ ಸರ್ಕಲ್-ಬಸ್ನಿಲ್ದಾಣ-ಕಾಲ್ಟೆಕ್ಸ್- ಕುಣಿಗಲ್ ಸರ್ಕಲ್ ಮೂಲಕ ಕುಣಿಗಲ್ ಕಡೆಗೆ ತೆರಳಬೇಕು.</p>.<p>ತುಮಕೂರು-ಬೆಂಗಳೂರು ವಾಹನಗಳು ತುಮಕೂರು ಬಸ್ ನಿಲ್ದಾಣದಿಂದ ಚರ್ಚ್ ಸರ್ಕಲ್-ಅಮಾನಿಕೆರೆ-ಹನುಮಂತಪುರ ಬೈಪಾಸ್ ಮುಖಾಂತರಎನ್ಎಚ್-48ರಲ್ಲಿ ಬೆಂಗಳೂರು ಕಡೆಗೆ ಸಾಗಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>