<p><strong>ತುಮಕೂರು</strong>: ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಾಣಗೊಂಡ ದೇವರಾಜ ಅರಸು ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಉದ್ಘಾಟನೆಯಾಗಿ ಆರು ತಿಂಗಳು ಕಳೆದ ನಂತರ ಜನರ ಬಳಕೆಗೆ ಮುಕ್ತವಾಗಿದೆ.</p>.<p>ಬಸ್ ನಿಲ್ದಾಣದಲ್ಲಿ ಜುಲೈ 27ರಿಂದ ವಾಹನಗಳ ಸಂಚಾರ ಆರಂಭವಾಗಲಿದೆ. ಸುಮಾರು ₹111 ಕೋಟಿ ವೆಚ್ಚದಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಿಸಲಾಗಿದೆ. ಕಾಮಗಾರಿ ಆರಂಭವಾಗಿ 5 ವರ್ಷಗಳು ಕಳೆದ ನಂತರ ಕೊನೆಗೂ ವಾಹನಗಳ ಸಂಚಾರಕ್ಕೆ ಅವಕಾಶ ಸಿಕ್ಕಿದೆ. 2022ರ ವೇಳೆಗೆ ಕಾಮಗಾರಿ ಮುಗಿಸುವ ಗುರಿ ನಿಗದಿ ಪಡಿಸಲಾಗಿತ್ತು. ನಿಗದಿತ ಸಮಯಕ್ಕಿಂತ ಎರಡೂವರೆ ವರ್ಷ ವಿಳಂಬವಾಗಿದೆ ಕೆಲಸ ಪೂರ್ಣಗೊಳಿಸಲಾಗಿದೆ.</p>.<p>ಜ. 29ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಸ್ ನಿಲ್ದಾಣ ಉದ್ಘಾಟಿಸಿದ್ದರು. ನಿಲ್ದಾಣಕ್ಕೆ ದೇವರಾಜ ಅರಸು ಹೆಸರು ನಾಮಕರಣ ಮಾಡಿದ್ದರು. ಮೇ ತಿಂಗಳ ಅಂತ್ಯಕ್ಕೆ ಬಸ್ ನಿಲ್ದಾಣವನ್ನು ಜನರ ಬಳಕೆಗೆ ನೀಡಬೇಕು ಎಂದು ಗಡುವು ನೀಡಲಾಗಿತ್ತು. ಜುಲೈ ತಿಂಗಳು ಮುಗಿಯುವ ಹೊತ್ತಿಗೆ ಬಸ್ಗಳ ಓಡಾಟ ಶುರುವಾಗಲಿದೆ.</p>.<p>‘ವಾಹನ ಕಾರ್ಯಾಚರಣೆಯನ್ನು ಈಗಿನ ಬಸ್ ನಿಲ್ದಾಣದ (ಹಳೆಯ ತುಮಕೂರು ಘಟಕ-1ರ ಆವರಣ) ಸ್ಥಳದಿಂದ ಸಂಪೂರ್ಣವಾಗಿ ನೂತನ ಬಸ್ ನಿಲ್ದಾಣದ ಆವರಣಕ್ಕೆ ಸ್ಥಳಾಂತರಿಸಲಾಗುವುದು’ ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಾಣಗೊಂಡ ದೇವರಾಜ ಅರಸು ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಉದ್ಘಾಟನೆಯಾಗಿ ಆರು ತಿಂಗಳು ಕಳೆದ ನಂತರ ಜನರ ಬಳಕೆಗೆ ಮುಕ್ತವಾಗಿದೆ.</p>.<p>ಬಸ್ ನಿಲ್ದಾಣದಲ್ಲಿ ಜುಲೈ 27ರಿಂದ ವಾಹನಗಳ ಸಂಚಾರ ಆರಂಭವಾಗಲಿದೆ. ಸುಮಾರು ₹111 ಕೋಟಿ ವೆಚ್ಚದಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಿಸಲಾಗಿದೆ. ಕಾಮಗಾರಿ ಆರಂಭವಾಗಿ 5 ವರ್ಷಗಳು ಕಳೆದ ನಂತರ ಕೊನೆಗೂ ವಾಹನಗಳ ಸಂಚಾರಕ್ಕೆ ಅವಕಾಶ ಸಿಕ್ಕಿದೆ. 2022ರ ವೇಳೆಗೆ ಕಾಮಗಾರಿ ಮುಗಿಸುವ ಗುರಿ ನಿಗದಿ ಪಡಿಸಲಾಗಿತ್ತು. ನಿಗದಿತ ಸಮಯಕ್ಕಿಂತ ಎರಡೂವರೆ ವರ್ಷ ವಿಳಂಬವಾಗಿದೆ ಕೆಲಸ ಪೂರ್ಣಗೊಳಿಸಲಾಗಿದೆ.</p>.<p>ಜ. 29ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಸ್ ನಿಲ್ದಾಣ ಉದ್ಘಾಟಿಸಿದ್ದರು. ನಿಲ್ದಾಣಕ್ಕೆ ದೇವರಾಜ ಅರಸು ಹೆಸರು ನಾಮಕರಣ ಮಾಡಿದ್ದರು. ಮೇ ತಿಂಗಳ ಅಂತ್ಯಕ್ಕೆ ಬಸ್ ನಿಲ್ದಾಣವನ್ನು ಜನರ ಬಳಕೆಗೆ ನೀಡಬೇಕು ಎಂದು ಗಡುವು ನೀಡಲಾಗಿತ್ತು. ಜುಲೈ ತಿಂಗಳು ಮುಗಿಯುವ ಹೊತ್ತಿಗೆ ಬಸ್ಗಳ ಓಡಾಟ ಶುರುವಾಗಲಿದೆ.</p>.<p>‘ವಾಹನ ಕಾರ್ಯಾಚರಣೆಯನ್ನು ಈಗಿನ ಬಸ್ ನಿಲ್ದಾಣದ (ಹಳೆಯ ತುಮಕೂರು ಘಟಕ-1ರ ಆವರಣ) ಸ್ಥಳದಿಂದ ಸಂಪೂರ್ಣವಾಗಿ ನೂತನ ಬಸ್ ನಿಲ್ದಾಣದ ಆವರಣಕ್ಕೆ ಸ್ಥಳಾಂತರಿಸಲಾಗುವುದು’ ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>