<p><strong>ತುರುವೇಕೆರೆ:</strong> ‘ತಾಲ್ಲೂಕಿನ ಕೆ.ಮಾವಿನಹಳ್ಳಿಯ ಕುಮಾರ್ ಆಚಾರ್ ಪೊಲೀಸ್ ವಶದಲ್ಲಿರುವಾಗ ಸಾವನ್ನಪ್ಪಿರುವ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ತನಿಖೆ ನಡೆಸಿ, ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು’ ಎಂದು ಕೆಪಿಸಿಸಿ ಒಬಿಸಿ ಘಟಕದ ರಾಜ್ಯ ಉಪಾಧ್ಯಕ್ಷೆ ಡಾ.ಪವಿತ್ರಾ ಆರ್.ಪ್ರಭಾಕರ್ ರೆಡ್ಡಿ ತಿಳಿಸಿದರು.</p>.<p>ತಾಲ್ಲೂಕಿನ ಕೆ.ಮೇಲನಹಳ್ಳಿಯಲ್ಲಿರುವ ಕುಮಾರ್ ಆಚಾರ್ ಕುಟುಂಬದ ಸದಸ್ಯರನ್ನು ಬುಧವಾರ ಭೇಟಿ ಮಾಡಿದ ನಂತರ ಮಾತನಾಡಿದರು.</p>.<p>ಕುಮಾರ್ ಆಚಾರ್ ಸಾವು ಪೊಲೀಸ್ ದೌರ್ಜನ್ಯದಿಂದಲೇ ಆಗಿದೆ ಎನ್ನುವುದು ಮೇಲ್ನೋಟಕ್ಕೆ ತಿಳಿದಿದೆ. ಮೃತರ ಕುಟುಂಬ ಸಂಕಷ್ಟದಲ್ಲಿದೆ ಎಂದರು.</p>.<p>ಶೀಘ್ರ ಸಿಒಡಿ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಹಾಗೂ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದರು.</p>.<p>ರಾಜ್ಯ ಕೆಪಿಸಿಸಿ ಅಸಂಘಟಿತ ಕಾರ್ಮಿಕರ ಘಟಕದ ಪ್ರಧಾನ ಕಾರ್ಯದರ್ಶಿ ಮಾ.ನ.ಗುರುದತ್, ರಾಜ್ಯ ಒಬಿಸಿಯ ಉಪಾಧ್ಯಕ್ಷ ಚಿಕ್ಕನಾಯನಹಳ್ಳಿಯ ಡಾ.ವಿಜಯರಾಘವೇಂದ್ರ, ತಾಲ್ಲೂಕು ಕಾಂಗ್ರೆಸ್ನ ಒಬಿಸಿ ಘಟಕದ ಅಧ್ಯಕ್ಷ ಸ್ಟುಡಿಯೊ ಮಹೇಂದ್ರ, ಪುಟ್ಟರಾಜ್ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ:</strong> ‘ತಾಲ್ಲೂಕಿನ ಕೆ.ಮಾವಿನಹಳ್ಳಿಯ ಕುಮಾರ್ ಆಚಾರ್ ಪೊಲೀಸ್ ವಶದಲ್ಲಿರುವಾಗ ಸಾವನ್ನಪ್ಪಿರುವ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ತನಿಖೆ ನಡೆಸಿ, ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು’ ಎಂದು ಕೆಪಿಸಿಸಿ ಒಬಿಸಿ ಘಟಕದ ರಾಜ್ಯ ಉಪಾಧ್ಯಕ್ಷೆ ಡಾ.ಪವಿತ್ರಾ ಆರ್.ಪ್ರಭಾಕರ್ ರೆಡ್ಡಿ ತಿಳಿಸಿದರು.</p>.<p>ತಾಲ್ಲೂಕಿನ ಕೆ.ಮೇಲನಹಳ್ಳಿಯಲ್ಲಿರುವ ಕುಮಾರ್ ಆಚಾರ್ ಕುಟುಂಬದ ಸದಸ್ಯರನ್ನು ಬುಧವಾರ ಭೇಟಿ ಮಾಡಿದ ನಂತರ ಮಾತನಾಡಿದರು.</p>.<p>ಕುಮಾರ್ ಆಚಾರ್ ಸಾವು ಪೊಲೀಸ್ ದೌರ್ಜನ್ಯದಿಂದಲೇ ಆಗಿದೆ ಎನ್ನುವುದು ಮೇಲ್ನೋಟಕ್ಕೆ ತಿಳಿದಿದೆ. ಮೃತರ ಕುಟುಂಬ ಸಂಕಷ್ಟದಲ್ಲಿದೆ ಎಂದರು.</p>.<p>ಶೀಘ್ರ ಸಿಒಡಿ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಹಾಗೂ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದರು.</p>.<p>ರಾಜ್ಯ ಕೆಪಿಸಿಸಿ ಅಸಂಘಟಿತ ಕಾರ್ಮಿಕರ ಘಟಕದ ಪ್ರಧಾನ ಕಾರ್ಯದರ್ಶಿ ಮಾ.ನ.ಗುರುದತ್, ರಾಜ್ಯ ಒಬಿಸಿಯ ಉಪಾಧ್ಯಕ್ಷ ಚಿಕ್ಕನಾಯನಹಳ್ಳಿಯ ಡಾ.ವಿಜಯರಾಘವೇಂದ್ರ, ತಾಲ್ಲೂಕು ಕಾಂಗ್ರೆಸ್ನ ಒಬಿಸಿ ಘಟಕದ ಅಧ್ಯಕ್ಷ ಸ್ಟುಡಿಯೊ ಮಹೇಂದ್ರ, ಪುಟ್ಟರಾಜ್ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>