<p><strong>ಕುಣಿಗಲ್: </strong>ತಾಲ್ಲೂಕಿನ 6 ಗ್ರಾಮ ಪಂಚಾಯಿತಿಯ 19 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ತಾಲ್ಲೂಕು ಆಡಳಿತ ಸ್ಪಂದಿಸಿದೆ ಎಂದು ತಹಶೀಲ್ದಾರ್ ವಿಶ್ವನಾಥ್ ತಿಳಿಸಿದ್ದಾರೆ.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವನಾಥ್, ಕುಡಿಯುವ ನೀರಿನ ಸಮಸ್ಯೆಗಳಿರುವ ಗ್ರಾಮಗಳಲ್ಲಿ 13 ಟ್ಯಾಂಕರ್ಗಳಲ್ಲಿ ನಿತ್ಯ 45 ಟ್ರಿಪ್ ನೀರು ಸರಬರಾಜು ಮಾಡಲಾಗುತ್ತಿದೆ. 6 ಖಾಸಗಿ ಕೊಳವೆಬಾವಿ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಂಡು ನೀರನ್ನು ಪಡೆದು ವಿತರಿಸಲಾಗುತ್ತಿದೆ. ಜನಗಳಿಗಷ್ಟೇ ಅಲ್ಲ ಜಾನುವಾರುಗಳಿಗೂ ನೀರಿನ ವ್ಯವಸ್ಥೆಗೆ ಸೂಚನೆ ನೀಡಲಾಗಿದ್ದು, ತಾಲ್ಲೂಕಿನ ಜನ ಮತ್ತು ಜಾನುವಾರುಗಳಿಗೆ ನೀರಿನ ಕೊರತೆ ಉಂಟಾಗದಂತೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಜಾನುವಾರು ತೊಟ್ಟಿಗಳನ್ನು ಶುದ್ಧದಗೊಳಿಸಿ ನೀರಿನಿಂದ ತುಂಬಿಸಲು ಸೂಚನೆ ನೀಡಲಾಗಿದೆ. ತಾಲ್ಲೂಕಿನ ಜಾನುವಾರುಗಳಿಗೆ 25 ವಾರಗಳಿಗಾಗುವಷ್ಟು ಮೇವಿದ್ದು, ಮೇವಿನ ಬ್ಯಾಂಕ್ ಸ್ಥಾಪನೆ ಮಾಡುವ ಅಗತ್ಯವಿಲ್ಲ ಎಂದು ತಿಳಿಸಿದದರು.</p>.<p>ರೈತರ ಪಹಣಿಗಳ ತಿದ್ದುಪಡಿ ಮಾಡುವುದು ಕಂದಾಯ ಇಲಾಖೆ ಕರ್ತವ್ಯವಾಗಿದ್ದು, ತಾಲ್ಲೂಕಿನ ರೈತರು ಮಧ್ಯವರ್ತಿಗಳ ಬಳಿ ಹೋಗದೆ, ಯಾವುದೇ ರೀತಿಯ ಹಣ ನೀಡದೆ ನೇರವಾಗಿ ಸಂಪರ್ಕಿಸಿ ಸದುಪಯೋಗ ಪಡೆದುಕೊಳ್ಳಲು ಮನವಿ ಮಾಡಿದರು.</p>.<p>ಬರಗಾಲ ಕಾರ್ಯಪಡೆಯಿಂದ ತಾಲ್ಲೂಕಿನಲ್ಲಿ 51 ಕೊಳವೆಬಾವಿ ಕೊರೆಯಲಾಗಿದ್ದು, 47 ಸಫಲವಾಗಿದೆ, ₹ 25 ಲಕ್ಷ ವೆಚ್ಚದಲ್ಲಿ ನೀರಿನ ಪೈಪ್ಲೈನ್ ಕಾಮಗಾರಿ ಪೂರ್ಣಗೊಳಿಸಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್: </strong>ತಾಲ್ಲೂಕಿನ 6 ಗ್ರಾಮ ಪಂಚಾಯಿತಿಯ 19 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ತಾಲ್ಲೂಕು ಆಡಳಿತ ಸ್ಪಂದಿಸಿದೆ ಎಂದು ತಹಶೀಲ್ದಾರ್ ವಿಶ್ವನಾಥ್ ತಿಳಿಸಿದ್ದಾರೆ.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವನಾಥ್, ಕುಡಿಯುವ ನೀರಿನ ಸಮಸ್ಯೆಗಳಿರುವ ಗ್ರಾಮಗಳಲ್ಲಿ 13 ಟ್ಯಾಂಕರ್ಗಳಲ್ಲಿ ನಿತ್ಯ 45 ಟ್ರಿಪ್ ನೀರು ಸರಬರಾಜು ಮಾಡಲಾಗುತ್ತಿದೆ. 6 ಖಾಸಗಿ ಕೊಳವೆಬಾವಿ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಂಡು ನೀರನ್ನು ಪಡೆದು ವಿತರಿಸಲಾಗುತ್ತಿದೆ. ಜನಗಳಿಗಷ್ಟೇ ಅಲ್ಲ ಜಾನುವಾರುಗಳಿಗೂ ನೀರಿನ ವ್ಯವಸ್ಥೆಗೆ ಸೂಚನೆ ನೀಡಲಾಗಿದ್ದು, ತಾಲ್ಲೂಕಿನ ಜನ ಮತ್ತು ಜಾನುವಾರುಗಳಿಗೆ ನೀರಿನ ಕೊರತೆ ಉಂಟಾಗದಂತೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಜಾನುವಾರು ತೊಟ್ಟಿಗಳನ್ನು ಶುದ್ಧದಗೊಳಿಸಿ ನೀರಿನಿಂದ ತುಂಬಿಸಲು ಸೂಚನೆ ನೀಡಲಾಗಿದೆ. ತಾಲ್ಲೂಕಿನ ಜಾನುವಾರುಗಳಿಗೆ 25 ವಾರಗಳಿಗಾಗುವಷ್ಟು ಮೇವಿದ್ದು, ಮೇವಿನ ಬ್ಯಾಂಕ್ ಸ್ಥಾಪನೆ ಮಾಡುವ ಅಗತ್ಯವಿಲ್ಲ ಎಂದು ತಿಳಿಸಿದದರು.</p>.<p>ರೈತರ ಪಹಣಿಗಳ ತಿದ್ದುಪಡಿ ಮಾಡುವುದು ಕಂದಾಯ ಇಲಾಖೆ ಕರ್ತವ್ಯವಾಗಿದ್ದು, ತಾಲ್ಲೂಕಿನ ರೈತರು ಮಧ್ಯವರ್ತಿಗಳ ಬಳಿ ಹೋಗದೆ, ಯಾವುದೇ ರೀತಿಯ ಹಣ ನೀಡದೆ ನೇರವಾಗಿ ಸಂಪರ್ಕಿಸಿ ಸದುಪಯೋಗ ಪಡೆದುಕೊಳ್ಳಲು ಮನವಿ ಮಾಡಿದರು.</p>.<p>ಬರಗಾಲ ಕಾರ್ಯಪಡೆಯಿಂದ ತಾಲ್ಲೂಕಿನಲ್ಲಿ 51 ಕೊಳವೆಬಾವಿ ಕೊರೆಯಲಾಗಿದ್ದು, 47 ಸಫಲವಾಗಿದೆ, ₹ 25 ಲಕ್ಷ ವೆಚ್ಚದಲ್ಲಿ ನೀರಿನ ಪೈಪ್ಲೈನ್ ಕಾಮಗಾರಿ ಪೂರ್ಣಗೊಳಿಸಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>