<p><strong>ಕುಣಿಗಲ್:</strong> ತಾಲ್ಲೂಕಿನ ಉರ್ಕೆಹಳ್ಳಿ ಬಳಿ ಭಾನುವಾರ ಮಧ್ಯಾಹ್ನ ಸಶಸ್ತ್ರ ಮೀಸಲು ಪಡೆಯ ಕಾನ್ಸ್ಟೆಬಲ್ ಶ್ರೀಧರ್ ಅವರ ಕೊಲೆಗೆ ಯತ್ನಿಸಿ ಪರಾರಿಯಾಗಿದ್ದ ಆರೋಪಿಗಳನ್ನು ಘಟನೆ ನಡೆದ ನಾಲ್ಕು ಗಂಟೆಯೊಳಗೆ ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ.</p>.<p>ಬೆಂಗಳೂರಿನ ವಕೀಲ ವೆಂಕಟೇಶ್, ಕುಪ್ಪುರಾಜು, ಮಹೇಂದ್ರಕುಮಾರ್, ಅಂಬುಲಿ, ಉದಯ್, ಪ್ರಭು ಮತ್ತು ಆನಂದ್ ಬಂಧಿತರು.</p>.<p>ಶ್ರೀಧರ್ ಮತ್ತು ವೆಂಕಟೇಶ್ ಸಹೋದರ ಸಂಬಂಧಿಗಳಾಗಿದ್ದು, ಕೌಟುಂಬಿಕ ಕಲಹ ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ವಕೀಲ ವೆಂಕಟೇಶ, ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು ತನ್ನ ಕಕ್ಷಿದಾರರನ್ನು ಕೃತ್ಯಕ್ಕೆ ಬಳಸಿಕೊಂಡಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಸಶಸ್ತ್ರ ಮೀಸಲು ಪಡೆಯ ಕಾನ್ಸ್ಟೆಬಲ್ ಶ್ರೀಧರ್ ಭಾನುವಾರ ಬೆಂಗಳೂರಿನಿಂದ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕು ನುಗ್ಗೆಹಳ್ಳಿ ಹೋಬಳಿಯ ಎಂ.ಸಿದ್ದರಹಟ್ಟಿಗೆ ತಮ್ಮ ಬೈಕ್ನಲ್ಲಿ ಹೋಗುತ್ತಿದ್ದಾಗ ತಾಲ್ಲೂಕಿನ ಉರ್ಕೆಹಳ್ಳಿ ಬಳಿ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ದುಷ್ಕರ್ಮಿಗಳು ಅವರಿಗೆ ಹಲ್ಲೆ ನಡೆಸಿದ್ದರು.</p>.<p>ಶ್ರೀಧರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿದ ಕುಣಿಗಲ್ ಪೊಲೀಸರು ತನಿಖೆ ಮುಂದುವರಿಸಿ ಆರೋಪಿಗಳನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ.</p>.<p>ಸಿಪಿಐ ನವೀನ್ ಗೌಡ, ಪಿಎಸ್ಐ ಕೃಷ್ಣಕುಮಾರ್, ಸಿಬ್ಬಂದಿ ಯತೀಶ್, ಯೋಗೀಶ್, ನಟರಾಜು, ಹನುಮಂತು, ಷಡಕ್ಷರಿ ಆರೋಪಿಗಳ ಬಂಧನಕ್ಕೆ ಶ್ರಮಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್:</strong> ತಾಲ್ಲೂಕಿನ ಉರ್ಕೆಹಳ್ಳಿ ಬಳಿ ಭಾನುವಾರ ಮಧ್ಯಾಹ್ನ ಸಶಸ್ತ್ರ ಮೀಸಲು ಪಡೆಯ ಕಾನ್ಸ್ಟೆಬಲ್ ಶ್ರೀಧರ್ ಅವರ ಕೊಲೆಗೆ ಯತ್ನಿಸಿ ಪರಾರಿಯಾಗಿದ್ದ ಆರೋಪಿಗಳನ್ನು ಘಟನೆ ನಡೆದ ನಾಲ್ಕು ಗಂಟೆಯೊಳಗೆ ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ.</p>.<p>ಬೆಂಗಳೂರಿನ ವಕೀಲ ವೆಂಕಟೇಶ್, ಕುಪ್ಪುರಾಜು, ಮಹೇಂದ್ರಕುಮಾರ್, ಅಂಬುಲಿ, ಉದಯ್, ಪ್ರಭು ಮತ್ತು ಆನಂದ್ ಬಂಧಿತರು.</p>.<p>ಶ್ರೀಧರ್ ಮತ್ತು ವೆಂಕಟೇಶ್ ಸಹೋದರ ಸಂಬಂಧಿಗಳಾಗಿದ್ದು, ಕೌಟುಂಬಿಕ ಕಲಹ ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ವಕೀಲ ವೆಂಕಟೇಶ, ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು ತನ್ನ ಕಕ್ಷಿದಾರರನ್ನು ಕೃತ್ಯಕ್ಕೆ ಬಳಸಿಕೊಂಡಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಸಶಸ್ತ್ರ ಮೀಸಲು ಪಡೆಯ ಕಾನ್ಸ್ಟೆಬಲ್ ಶ್ರೀಧರ್ ಭಾನುವಾರ ಬೆಂಗಳೂರಿನಿಂದ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕು ನುಗ್ಗೆಹಳ್ಳಿ ಹೋಬಳಿಯ ಎಂ.ಸಿದ್ದರಹಟ್ಟಿಗೆ ತಮ್ಮ ಬೈಕ್ನಲ್ಲಿ ಹೋಗುತ್ತಿದ್ದಾಗ ತಾಲ್ಲೂಕಿನ ಉರ್ಕೆಹಳ್ಳಿ ಬಳಿ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ದುಷ್ಕರ್ಮಿಗಳು ಅವರಿಗೆ ಹಲ್ಲೆ ನಡೆಸಿದ್ದರು.</p>.<p>ಶ್ರೀಧರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿದ ಕುಣಿಗಲ್ ಪೊಲೀಸರು ತನಿಖೆ ಮುಂದುವರಿಸಿ ಆರೋಪಿಗಳನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ.</p>.<p>ಸಿಪಿಐ ನವೀನ್ ಗೌಡ, ಪಿಎಸ್ಐ ಕೃಷ್ಣಕುಮಾರ್, ಸಿಬ್ಬಂದಿ ಯತೀಶ್, ಯೋಗೀಶ್, ನಟರಾಜು, ಹನುಮಂತು, ಷಡಕ್ಷರಿ ಆರೋಪಿಗಳ ಬಂಧನಕ್ಕೆ ಶ್ರಮಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>