<p>ಕುಣಿಗಲ್: ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಒತ್ತಾಯಿಸಿ ವಡ್ಡರಕುಪ್ಪೆ ಗ್ರಾಮಸ್ಥರು ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಸಿಬ್ಬಂದಿಯನ್ನು ಕೂಡಿ ಹಾಕಿ, ಖಾಲಿ ಕೂಡ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.</p>.<p>ಭಕ್ತರಹಳ್ಳಿ ಗ್ರಾಮ ಪಂಚಾಯಿತಿಯ ವಡ್ಡರ ಕುಪ್ಪೆಯಲ್ಲಿ 110 ಮನೆಗಳಿದ್ದು, ಒಂದು ಟ್ಯಾಂಕ್ ಮತ್ತು ಒಂದು ಮಿನಿ ಟ್ಯಾಂಕ್ ವ್ಯವಸ್ಥೆ ಇದೆ. ಎರಡು ಕೊಳವೆಬಾವಿಗಳಲ್ಲಿ ನೀರು ಬತ್ತಿದ್ದು, ನೀರಿನ ಸಮಸ್ಯೆ ಎದುರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಗ್ರಾಮ ಪಂಚಾಯಿತಿಯಿಂದ ದಿನಕ್ಕೆ ಒಂದೆರೆಡು ಟ್ಯಾಂಕ್ಗಳ ಮೂಲಕ ಗ್ರಾಮಕ್ಕೆ ನೀರು ಕೊಡುತ್ತಿದ್ದರೂ ಸಾಕಾಗುತ್ತಿಲ್ಲ. ಹೆಚ್ಚಿನ ನೀರಿನ ಅವಶ್ಯಕತೆ ಇರುವುದರಿಂದ ಹೊಸದಾಗಿ ಕೊಳವೆಬಾವಿ ಕೊರೆಸಿ ಮಳೆಗಾಲ ಆರಂಭವಾಗುವವರೆಗೂ ನೀರು ಕೊಡಿ ಎಂದು ಒತ್ತಾಯಿಸಿದರು.</p>.<p>ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ ಮಾಡಿದ್ದರಿಂದ ಪ್ರತಿಭಟನೆ ಕೈಬಿಡಲಾಯಿತು.</p>.<p>ಪ್ರತಿಭಟನೆಯಲ್ಲಿ ವರಲಕ್ಷ್ಮಮ್ಮ, ಲಕ್ಷ್ಮಮ್ಮ, ರೇಣುಕಮ್ಮ, ಸಂಗೀತ, ಮೊಬೀನ, ವೆಂಕಟೇಶ ರಾಜ್, ವಸಂತ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-17-903876531</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಣಿಗಲ್: ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಒತ್ತಾಯಿಸಿ ವಡ್ಡರಕುಪ್ಪೆ ಗ್ರಾಮಸ್ಥರು ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಸಿಬ್ಬಂದಿಯನ್ನು ಕೂಡಿ ಹಾಕಿ, ಖಾಲಿ ಕೂಡ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.</p>.<p>ಭಕ್ತರಹಳ್ಳಿ ಗ್ರಾಮ ಪಂಚಾಯಿತಿಯ ವಡ್ಡರ ಕುಪ್ಪೆಯಲ್ಲಿ 110 ಮನೆಗಳಿದ್ದು, ಒಂದು ಟ್ಯಾಂಕ್ ಮತ್ತು ಒಂದು ಮಿನಿ ಟ್ಯಾಂಕ್ ವ್ಯವಸ್ಥೆ ಇದೆ. ಎರಡು ಕೊಳವೆಬಾವಿಗಳಲ್ಲಿ ನೀರು ಬತ್ತಿದ್ದು, ನೀರಿನ ಸಮಸ್ಯೆ ಎದುರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಗ್ರಾಮ ಪಂಚಾಯಿತಿಯಿಂದ ದಿನಕ್ಕೆ ಒಂದೆರೆಡು ಟ್ಯಾಂಕ್ಗಳ ಮೂಲಕ ಗ್ರಾಮಕ್ಕೆ ನೀರು ಕೊಡುತ್ತಿದ್ದರೂ ಸಾಕಾಗುತ್ತಿಲ್ಲ. ಹೆಚ್ಚಿನ ನೀರಿನ ಅವಶ್ಯಕತೆ ಇರುವುದರಿಂದ ಹೊಸದಾಗಿ ಕೊಳವೆಬಾವಿ ಕೊರೆಸಿ ಮಳೆಗಾಲ ಆರಂಭವಾಗುವವರೆಗೂ ನೀರು ಕೊಡಿ ಎಂದು ಒತ್ತಾಯಿಸಿದರು.</p>.<p>ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ ಮಾಡಿದ್ದರಿಂದ ಪ್ರತಿಭಟನೆ ಕೈಬಿಡಲಾಯಿತು.</p>.<p>ಪ್ರತಿಭಟನೆಯಲ್ಲಿ ವರಲಕ್ಷ್ಮಮ್ಮ, ಲಕ್ಷ್ಮಮ್ಮ, ರೇಣುಕಮ್ಮ, ಸಂಗೀತ, ಮೊಬೀನ, ವೆಂಕಟೇಶ ರಾಜ್, ವಸಂತ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-17-903876531</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>